ಚಿಕ್ಕೋಡಿ ಜೈನಮುನಿ ಹತ್ಯೆ ಪ್ರಕರಣ: ಆರೋಪಿ ಮಗ ಹಸನ್ ಕೃತ್ಯ ನೆನೆದು ಭಾವುಕರಾದ ತಂದೆ

ಬೆಳಗಾವಿಯ ಹಿರೇಕೋಡಿ ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಹಸನ್​ನ ತಂದೆ ಇಂದು ತನ್ನ ಮಗನ ಕೃತ್ಯ ನೆನೆದು ಭಾವುಕರಾಗಿದ್ದಾರೆ.

ಚಿಕ್ಕೋಡಿ ಜೈನಮುನಿ ಹತ್ಯೆ ಪ್ರಕರಣ: ಆರೋಪಿ ಮಗ ಹಸನ್ ಕೃತ್ಯ ನೆನೆದು ಭಾವುಕರಾದ ತಂದೆ
ಜೈನ ಮುನಿ ಹತ್ಯೆ ಪ್ರಕರಣದ ಆರೋಪಿ ಮಗ ಹಸನ್ ಕೃತ್ಯ ನೆನೆದು ಭಾವುಕರಾದ ತಂದೆ
Edited By: Rakesh Nayak Manchi

Updated on: Jul 17, 2023 | 3:44 PM

ಚಿಕ್ಕೋಡಿ, ಜುಲೈ 17: ತಾಲೂಕಿನ ಹಿರೇಕೋಡಿ ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ (Kamakumara Nandi Maharaj) ಹತ್ಯೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಮಗ ಹಸನ್​ನ ಕೃತ್ಯ ನೆನೆದು ತಂದೆ ಮಕ್ಬೂಲ್ ದಲಾಯತ್ ಭಾವುಕರಾಗಿದ್ದಾರೆ. ಮಗ ಹಸನಸಾಬ್ ಭೇಟಿಗಾಗಿ ಚಿಕ್ಕೋಡಿ ಡಿವೈಎಸ್‌ಪಿ ಕಚೇರಿಗೆ ಆಗಮಿಸಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಭಾವುಕರಾದರು.

ಪ್ರಕರಣದ ಪ್ರಮುಖ ಆರೋಪಿ ನಾರಾಯಣ ಮಾಳಿ ಮತ್ತು ಎರಡನೇ ಆರೋಪಿ ಹಸನಸಾಬ್ ದಲಾಯತ್ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಇಬ್ಬರನ್ನು ಬೆಳಗಾವಿ ಜೈಲಿಗೆ ಕರೆದೊಯ್ಯುತ್ತಿದ್ದಾರೆ. ಹೀಗಾಗಿ ಮಗ ಹಸನ್ ಭೇಟಿಗೆ ಬಂದಿದ್ದೇನೆ ಎಂದ ತಂದೆ ಮಕ್ಬೂಲ್ ಹೇಳಿದ್ದಾರೆ. ನಾನು ಬೇರೆಯವರ ಗದ್ದೆಯಲ್ಲಿ ಕಸ ತಗೆದು ಜೀವನ ಮಾಡುತ್ತೇನೆ. ಮಗ ಹೀಗೆ ಮಾಡಿದರೆ ಏನ್ ಮಾಡುವುದು ಹೇಳಿ, ದುಡಿದು ತಿನ್ನೋ ಮನುಷ್ಯ ನಾನು ಎಂದು ಭಾವುಕರಾದರು.

ಇದನ್ನೂ ಓದಿ: Jain Muni Murder: ಜೈನಮುನಿಗಳ ದೇಹ ತುಂಡು ತುಂಡಾಗಿ ಕತ್ತರಿಸಿ ಡೈರಿ ಸುಟ್ಟು ಹಾಕಿದ್ರು, ಎಫ್​ಐಆರ್​ನಲ್ಲಿ ದಾಖಲಾಗಿದೆ ಭಯಾನಕ ಸಂಗತಿ

ಇವನ ಸಹವಾಸ ಬೇಡ ಅಂತಾ ಬೇರೆ ಮನೆ ಮಾಡಿಕೊಂಡು ವಾಸವಿದ್ದೆ ಎಂದು ಹೇಳಿದ ಮಕ್ಬೂಲ್, ನಾರಾಯಣ ಮಾಳಿ ಜೊತೆ ಹಸನ್​ಗೆ ಮೂರ್ನಾಲ್ಕು ವರ್ಷದ ಗೆಳೆತನವಿತ್ತು. ಹೊಲಕ್ಕೆ ಕೀಟನಾಶಕ ಸಿಂಪಡನೆ ಮಾಡಲು ಹೋಗುತ್ತಿದ್ದೇನೆ ಅಂತಾ ಅಂದು ರಾತ್ರಿ ಹೋಗಿದ್ದ. ಈ ವೇಳೆ ಅವರು ಪಗಾರ್ (ವೇತನ) ಕೊಡಲ್ಲ ಹೋಗಬೇಡ ಅಂತಾ ಹಸನ್​​ ಪತ್ನಿ ಹೇಳಿದ್ದಳು. ಆದರೆ ಈಕೆಯ ಮಾತನ್ನೂ ಲೆಕ್ಕಿಸದೆ ಹೋಗಿದ್ದ. ಮನೆಗೆ ವಾಪಸ್ ಬಂದಾಗಲೂ ನಮಗೆ ಏನೂ ಹೇಳಿರಲಿಲ್ಲ. ರಾತ್ರಿ 10 ಗಂಟೆಗೆ ಪೊಲೀಸರು ಬಂದಾಗ ವಿಚಾರ ಗೊತ್ತಾಯಿತು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Mon, 17 July 23

Web contact

TV9 Kannada

Read More
Follow Us