AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆತ್ತ ಮಗನನ್ನೇ ಕೊಂದ ತಂದೆ: ಕೊಲೆ ರಹಸ್ಯ ಭೇದಿಸಿದ್ದು ಮೃತನ ಸ್ನೇಹಿತರು!

ಕುಡಿದು ಕಿರಿಕ್ ಮಾಡುತ್ತಿದ್ದ ಮಗನನ್ನು ತಂದೆಯೇ ಹತ್ಯೆ ಮಾಡಿರುವ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ. ಪುತ್ರ ಮದ್ಯವ್ಯಸನಿ ಎಂಬ ಕಾರಣಕ್ಕೆ ಹೋಟೆಲ್ ಮಾಲೀಕನ ಜೊತೆ ಸೇರಿ ವೈರ್‌ನಿಂದ ಉಸಿರುಗಟ್ಟಿಸಿ ಅಪ್ಪನೇ ಕೊಲೆ ಮಾಡಿದ್ದಾನೆ. ಮೃತನ ತಂದೆ ವರ್ತನೆ ಅನುಮಾನಕ್ಕೆ ಎಡೆಮಾಡಿಕೊಟ್ಟ ಕಾರಣ, ಸ್ನೇಹಿತರು ಮೃತನ  ಶವ ಪರಿಶೀಲಿಸಿದ್ದಾರೆ. ಈ ವೇಳೆ ಕೊಲೆ ವಿಚಾರ ಬಯಲಾಗಿದ್ದು, ಆರೋಪಿಗಳ ವಿರುದ್ಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಹೆತ್ತ ಮಗನನ್ನೇ ಕೊಂದ ತಂದೆ: ಕೊಲೆ ರಹಸ್ಯ ಭೇದಿಸಿದ್ದು ಮೃತನ ಸ್ನೇಹಿತರು!
ಕೊಲೆಯಾದ ಕಿರಣ್​​
ಸಹದೇವ್​ ಮಾನೆ
| Edited By: |

Updated on: Jan 08, 2026 | 12:26 PM

Share

ಬೆಳಗಾವಿ, ಜನವರಿ 08: ಕುಡಿದು ಬಂದು ಕಿರಿ ಕಿರಿ ಮಾಡುತ್ತಾನೆ ಎಂಬ ಕಾರಣಕ್ಕೆ ಹೆತ್ತ ತಂದೆಯೇ ಮಗನಿಗೆ ಚಟ್ಟ ಕಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಇಂದಿರಾನಗರದಲ್ಲಿ ನಡೆದಿದೆ. ಕಿರಣ್​ ಆಲೂರೆ (31) ಮೃತ ಯುವಕನಾಗಿದ್ದು, ಆರೋಪಿ ನಿಜಗುಣಿ ಮತ್ತು ಉಸ್ಮಾನ್​​ ಮುಲ್ಲಾ ಎಂಬವರನ್ನು ಪ್ರಕರಣ ಸಂಬಂಧ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಶೇಷ ಅಂದ್ರೆ ಕಿರಣ್​​ ಕೊಲೆ ರಹಸ್ಯವನ್ನು ಇಲ್ಲಿ ಭೇದಿಸಿರೋದು ಆತನ ಸ್ನೇಹಿತರು ಅನ್ನೋದು ಗಮನಾರ್ಹ.

ಮದ್ಯದ ದಾಸನಾಗಿದ್ದ ಮಗ ಕಿರಣ್​​ನ ಕಾಟ ತಾಳಲಾರದೆ ತಂದೆ ನಿಜಗುಣಿ ಆತನ ಕೊಲೆಗೆ ಸ್ಕೆಚ್​​ ಹಾಕಿದ್ದ. ಅದರಂತೆ ತಾನು ಕೆಲಸ ಮಾಡುತ್ತಿದ್ದ ಹೋಟೆಲ್​​ ಮಾಲೀಕ ಉಸ್ಮಾನ ಮುಲ್ಲಾ ಜೊತೆ ಸೇರಿಕೊಂಡು ಮಗನನ್ನು ಮುಗಿಸಿದ್ದ. ಕುತ್ತಿಗೆಗೆ ವೈರ್​​ನಿಂದ ಬಿಗಿದು ಕಿರಣ್​ ಹತ್ಯೆಮಾಡಿದ್ದ ಆರೋಪಿಗಳು, ಕಾರಿನಲ್ಲಿ ಶವ ತೆಗೆದುಕೊಂಡು ಓಡಾಡಿದ್ದರು. ಬಳಿಕ ಕಿರಣ್​​ ಸ್ನೇಹಿತರಿಗೆ ಕರೆಮಾಡಿದ್ದ ನಿಜಗುಣಿ, ಹೃದಯಾಘಾತದಿಂದ ನಿಮ್ಮ ಸ್ನೇಹಿತ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದ. ಜೊತೆಗೆ ತರಾತುರಿಯಲ್ಲಿ ಮೃತದೇಹವನ್ನು ಸುಡಲು ಮುಂದಾಗಿದ್ದ. ಆದರೆ ಅವರ ಸಂಪ್ರದಾಯದಂತೆ ಶವ ಹೂಳಬೇಕಿರುವ ಕಾರಣ ನಿಜಗುಣಿ ನಡೆ ಕಿರಣ್​​ ಸ್ನೇಹಿತರಲ್ಲಿ ಅನುಮಾನ ಮೂಡಿಸಿದೆ.

ಇದನ್ನೂ ಓದಿ: ಸೊಸೆ ಕಾಟಕ್ಕೆ ಅತ್ತೆ ಆತ್ಮಹತ್ಯೆ? ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಕಿರಣ್​​ ತಂದೆ ನಿಜಗುಣಿ ವರ್ತನೆ ಬಗ್ಗೆ ಸಂಶಯಗೊಂಡು ಮೃತದೇಹ ಪರಿಶೀಲನೆ ನಡೆಸಿದಾಗ ಕುತ್ತಿಗೆ ಬಳಿ ಗಾಯ ಮತ್ತು ಕಿವಿಯಲ್ಲಿ ರಕ್ತಸ್ರಾವ ಆಗಿರೋದು ಕಂಡುಬಂದಿದೆ. ತಮ್ಮ ಅನುಮಾನಕ್ಕೆ ಮತ್ತಷ್ಟು ಪುಷ್ಠಿ ಸಿಕ್ಕ ಹಿನ್ನೆಲೆ ನಿಜಗುಣಿ ಕೆಲಸ ಮಾಡುತ್ತಿದ್ದ ಹೋಟೆಲ್ ಮಾಲೀಕ ಉಸ್ಮಾನ ಮುಲ್ಲಾನನ್ನು ಕಿರಣ್​​ ಸ್ನೇಹಿತರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕೊಲೆ ರಹಸ್ಯ ಬೆಳಕಿಗೆ ಬಂದಿದೆ. ಕೂಡಲೇ  ನಿಜಗುಣಿಯನ್ನ ಸ್ಮಶಾನಕ್ಕೆ ಕರೆಸಿ ಆತನನ್ನೂ ಘಟನೆ ಬಗ್ಗೆ ಪ್ರಶ್ನಿಸಿದ್ದಾರೆ. ಈ ವೇಳೆ ಆತ ಕೂಡ ಮಗನನ್ನು ಕೊಲೆ ಮಾಡಿರೋದನ್ನು ಒಪ್ಪಿಕೊಂಡಿದ್ದಾನೆ. ಕೂಡಲೇ ಪೊಲೀಸರಿಗೆ ವಿಷಯ ತಿಳಿಸಲಾಗಿದ್ದು, ಆರೋಪಿಗಳ ವಿರುದ್ಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ