ರಜೆ ಮುಗಿಸಿ ಕರ್ತವ್ಯಕ್ಕೆ ವಾಪಸ್ ಆಗಿದ್ದ ಯೋಧ ಪಂಜಾಬ್​ನಲ್ಲಿ ಹೃದಯಾಘಾತದಿಂದ ಸಾವು

ಕಳೆದ ವಾರ ರಜೆಗೆಂದು ತಿಲವಾಣಿಗೆ ಬಂದು ರಜೆ ಮುಗಿಸಿ ಪಠಾಣ್ ಕೋಟಗೆ ವಾಪಸಾಗಿದ್ದರು. ರೈಲು ನಿಲ್ದಾಣದಲ್ಲಿ ಇಳಿಯುವಾಗ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ರಜೆ ಮುಗಿಸಿ ಕರ್ತವ್ಯಕ್ಕೆ ವಾಪಸ್ ಆಗಿದ್ದ ಯೋಧ ಪಂಜಾಬ್​ನಲ್ಲಿ ಹೃದಯಾಘಾತದಿಂದ ಸಾವು
ಯೋಧ ವಿನಯ್ ಬಾಬಾಸಾಹೇಬ ಭೋಜೆ
Follow us
| Edited By: sandhya thejappa

Updated on:Jan 18, 2022 | 2:17 PM

ಚಿಕ್ಕೋಡಿ: ರಜೆ ಮುಗಿಸಿ ಕರ್ತವ್ಯಕ್ಕೆ ವಾಪಸ್ ಆಗಿದ್ದ ಯೋಧ (Soldier) ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾರೆ. ಪಂಜಾಬ್​ನಲ್ಲಿ (Punjab) ನಿಪ್ಪಾಣಿ ತಾಲೂಕಿನ ಭೋಜ ಗ್ರಾಮದ ಯೋಧ ಸಾವನ್ನಪ್ಪಿದ್ದಾರೆ. ಪಠಾಣ್ ಕೋಟ ರೈಲು ನಿಲ್ದಾಣದಲ್ಲಿ ವಿನಯ್ ಬಾಬಾಸಾಹೇಬ ಭೋಜೆ (37) ಹೃದಯಾಘಾತದಿಂದ ಮೃತಪಟ್ಟಿದ್ದು, ಸಾವಿನ ಸುದ್ದಿ ಕೇಳಿ ಭೋಜ ಗ್ರಾಮ ಶೋಕ ಸಾಗರದಲ್ಲಿ ಮುಳುಗಿದೆ. ಯೋಧ ಹದಿನೇಳು ವರ್ಷಗಳ ಹಿಂದೆ ಭಾರತೀಯ ಸೇನೆಗೆ ಸೇರ್ಪಡೆಯಾಗಿದ್ದರು. ಕಳೆದ ಹತ್ತು ವರ್ಷಗಳಿಂದ ಮಹಾರಾಷ್ಟ್ರದ ಹಾತಕಣಂಗಲೆ ತಾಲೂಕಿನ ತಿಲವಾಣಿ ಗ್ರಾಮದಲ್ಲಿ ನೆಲೆಸಿದ್ದರು.

ಕಳೆದ ವಾರ ರಜೆಗೆಂದು ಮಹಾರಾಷ್ಟ್ರದ ಹಾತಕಣಂಗಲೆ ತಾಲೂಕಿನ ತಿಲವಾಣಿಗೆ ಬಂದು ರಜೆ ಮುಗಿಸಿ ಪಠಾಣ್ ಕೋಟಗೆ ವಾಪಸಾಗಿದ್ದರು. ರೈಲು ನಿಲ್ದಾಣದಲ್ಲಿ ಇಳಿಯುವಾಗ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತ ಸೈನಿಕ ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಕೊರೊನಾ ಹಿನ್ನೆಲೆ ಯೋಧನ ಅಂತಿಮ ಸಂಸ್ಕಾರವನ್ನು ಪಂಜಾಬ್​ನಲ್ಲೇ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚೆಗೆ ಹೃದಯಾಘಾತದಿಂದ ಹೆಚ್ಚು ಜನ ಮೃತರಾಗುತ್ತಿದ್ದಾರೆ. ಅದರಲ್ಲೂ ಯೋಧರೂ ಕೂಡಾ ಹೃದಯಾಘಾತದಿಂದ ಉಸಿರು ನಿಲ್ಲಿಸುತ್ತಿದ್ದಾರೆ. ಈ ಹಿಂದೆ ಅಂದರೆ ಜನವರಿ 07ಕ್ಕೆ ಹೃದಯಾಘಾತದಿಂದ ಕರ್ತವ್ಯನಿರತ ಸಿಆರ್​ಪಿಎಫ್(CRPF)​ ಯೋಧ ಸಾವನ್ನಪ್ಪಿದ್ದರು. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅನಿಗಾನಹಳ್ಳಿಯ ಯೋಧ  ಸುರೇಶ್(45) ಮೃತಪಟ್ಟಿದ್ದರು. ಜಾರ್ಖಂಡ್​ನ ಮಿಲಿಟರಿ ಕ್ಯಾಂಪ್​ನಲ್ಲಿ ತರಬೇತಿ ನೀಡುವಾಗ ಹೃದಯಾಘಾತದಿಂದ  ಸಾವನ್ನಪ್ಪಿದ್ದರು.

ಇದನ್ನೂ ಓದಿ

weight Loss Tips: ಕಡಿಮೆ ಕ್ಯಾಲೋರಿಯಿರುವ ಈ ಆಹಾರಗಳನ್ನು ಸೇವಿಸಿ: ದೇಹದ ಅತಿಯಾದ ತೂಕ ಇಳಿಸಿಕೊಳ್ಳಿ

ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಕೆಲವೇ ದಿನಗಳ ಹಿಂದೆ ಆರೋಪ ಮಾಡಿದ್ದ ಆಪ್​; ಪಂಜಾಬ್​ ಸಿಎಂ ಸೋದರಳಿಯನ ಮನೆ ಮೇಲೆ ಇ.ಡಿ. ದಾಳಿ

Published On - 1:12 pm, Tue, 18 January 22

ತಾಜಾ ಸುದ್ದಿ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ
ಕಾವೇರಿ ವಿವಾದವನ್ನು ಕೋರ್ಟ್ ಹೊರಗಡೆ ಬಗೆಹರಿಸಿಕೊಳ್ಳಲಾಗದು: ತೇಜಸ್ವೀ ಸೂರ್ಯ
ಕಾವೇರಿ ವಿವಾದವನ್ನು ಕೋರ್ಟ್ ಹೊರಗಡೆ ಬಗೆಹರಿಸಿಕೊಳ್ಳಲಾಗದು: ತೇಜಸ್ವೀ ಸೂರ್ಯ
ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಶಿವಕುಮಾರ್ ಯೋಚಿಸುವುದು ಬೇಡ: ಹೆಚ್ ಡಿ ಕೆ
ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಶಿವಕುಮಾರ್ ಯೋಚಿಸುವುದು ಬೇಡ: ಹೆಚ್ ಡಿ ಕೆ
ದಸರಾ: ಮೈಸೂರಿನಲ್ಲಿ ಸ್ವಚ್ಛತಾ ಕಾರ್ಯ: ಮರದ ರಂಬೆ, ಕೊಂಬೆಗಳ ಕಟಾವು
ದಸರಾ: ಮೈಸೂರಿನಲ್ಲಿ ಸ್ವಚ್ಛತಾ ಕಾರ್ಯ: ಮರದ ರಂಬೆ, ಕೊಂಬೆಗಳ ಕಟಾವು
ಬಿಜೆಪಿ-ಜೆಡಿಎಸ್ ಮೈತ್ರಿ ಪರಿಣಾಮ:ಎರಡು ಪಕ್ಷಗಳ ಕೆಲ ಮುಖಂಡರು ಕಾಂಗ್ರೆಸ್​ಗೆ
ಬಿಜೆಪಿ-ಜೆಡಿಎಸ್ ಮೈತ್ರಿ ಪರಿಣಾಮ:ಎರಡು ಪಕ್ಷಗಳ ಕೆಲ ಮುಖಂಡರು ಕಾಂಗ್ರೆಸ್​ಗೆ