Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೆ ಮುಗಿಸಿ ಕರ್ತವ್ಯಕ್ಕೆ ವಾಪಸ್ ಆಗಿದ್ದ ಯೋಧ ಪಂಜಾಬ್​ನಲ್ಲಿ ಹೃದಯಾಘಾತದಿಂದ ಸಾವು

ಕಳೆದ ವಾರ ರಜೆಗೆಂದು ತಿಲವಾಣಿಗೆ ಬಂದು ರಜೆ ಮುಗಿಸಿ ಪಠಾಣ್ ಕೋಟಗೆ ವಾಪಸಾಗಿದ್ದರು. ರೈಲು ನಿಲ್ದಾಣದಲ್ಲಿ ಇಳಿಯುವಾಗ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ರಜೆ ಮುಗಿಸಿ ಕರ್ತವ್ಯಕ್ಕೆ ವಾಪಸ್ ಆಗಿದ್ದ ಯೋಧ ಪಂಜಾಬ್​ನಲ್ಲಿ ಹೃದಯಾಘಾತದಿಂದ ಸಾವು
ಯೋಧ ವಿನಯ್ ಬಾಬಾಸಾಹೇಬ ಭೋಜೆ
Follow us
TV9 Web
| Updated By: sandhya thejappa

Updated on:Jan 18, 2022 | 2:17 PM

ಚಿಕ್ಕೋಡಿ: ರಜೆ ಮುಗಿಸಿ ಕರ್ತವ್ಯಕ್ಕೆ ವಾಪಸ್ ಆಗಿದ್ದ ಯೋಧ (Soldier) ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾರೆ. ಪಂಜಾಬ್​ನಲ್ಲಿ (Punjab) ನಿಪ್ಪಾಣಿ ತಾಲೂಕಿನ ಭೋಜ ಗ್ರಾಮದ ಯೋಧ ಸಾವನ್ನಪ್ಪಿದ್ದಾರೆ. ಪಠಾಣ್ ಕೋಟ ರೈಲು ನಿಲ್ದಾಣದಲ್ಲಿ ವಿನಯ್ ಬಾಬಾಸಾಹೇಬ ಭೋಜೆ (37) ಹೃದಯಾಘಾತದಿಂದ ಮೃತಪಟ್ಟಿದ್ದು, ಸಾವಿನ ಸುದ್ದಿ ಕೇಳಿ ಭೋಜ ಗ್ರಾಮ ಶೋಕ ಸಾಗರದಲ್ಲಿ ಮುಳುಗಿದೆ. ಯೋಧ ಹದಿನೇಳು ವರ್ಷಗಳ ಹಿಂದೆ ಭಾರತೀಯ ಸೇನೆಗೆ ಸೇರ್ಪಡೆಯಾಗಿದ್ದರು. ಕಳೆದ ಹತ್ತು ವರ್ಷಗಳಿಂದ ಮಹಾರಾಷ್ಟ್ರದ ಹಾತಕಣಂಗಲೆ ತಾಲೂಕಿನ ತಿಲವಾಣಿ ಗ್ರಾಮದಲ್ಲಿ ನೆಲೆಸಿದ್ದರು.

ಕಳೆದ ವಾರ ರಜೆಗೆಂದು ಮಹಾರಾಷ್ಟ್ರದ ಹಾತಕಣಂಗಲೆ ತಾಲೂಕಿನ ತಿಲವಾಣಿಗೆ ಬಂದು ರಜೆ ಮುಗಿಸಿ ಪಠಾಣ್ ಕೋಟಗೆ ವಾಪಸಾಗಿದ್ದರು. ರೈಲು ನಿಲ್ದಾಣದಲ್ಲಿ ಇಳಿಯುವಾಗ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತ ಸೈನಿಕ ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಕೊರೊನಾ ಹಿನ್ನೆಲೆ ಯೋಧನ ಅಂತಿಮ ಸಂಸ್ಕಾರವನ್ನು ಪಂಜಾಬ್​ನಲ್ಲೇ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚೆಗೆ ಹೃದಯಾಘಾತದಿಂದ ಹೆಚ್ಚು ಜನ ಮೃತರಾಗುತ್ತಿದ್ದಾರೆ. ಅದರಲ್ಲೂ ಯೋಧರೂ ಕೂಡಾ ಹೃದಯಾಘಾತದಿಂದ ಉಸಿರು ನಿಲ್ಲಿಸುತ್ತಿದ್ದಾರೆ. ಈ ಹಿಂದೆ ಅಂದರೆ ಜನವರಿ 07ಕ್ಕೆ ಹೃದಯಾಘಾತದಿಂದ ಕರ್ತವ್ಯನಿರತ ಸಿಆರ್​ಪಿಎಫ್(CRPF)​ ಯೋಧ ಸಾವನ್ನಪ್ಪಿದ್ದರು. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅನಿಗಾನಹಳ್ಳಿಯ ಯೋಧ  ಸುರೇಶ್(45) ಮೃತಪಟ್ಟಿದ್ದರು. ಜಾರ್ಖಂಡ್​ನ ಮಿಲಿಟರಿ ಕ್ಯಾಂಪ್​ನಲ್ಲಿ ತರಬೇತಿ ನೀಡುವಾಗ ಹೃದಯಾಘಾತದಿಂದ  ಸಾವನ್ನಪ್ಪಿದ್ದರು.

ಇದನ್ನೂ ಓದಿ

weight Loss Tips: ಕಡಿಮೆ ಕ್ಯಾಲೋರಿಯಿರುವ ಈ ಆಹಾರಗಳನ್ನು ಸೇವಿಸಿ: ದೇಹದ ಅತಿಯಾದ ತೂಕ ಇಳಿಸಿಕೊಳ್ಳಿ

ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಕೆಲವೇ ದಿನಗಳ ಹಿಂದೆ ಆರೋಪ ಮಾಡಿದ್ದ ಆಪ್​; ಪಂಜಾಬ್​ ಸಿಎಂ ಸೋದರಳಿಯನ ಮನೆ ಮೇಲೆ ಇ.ಡಿ. ದಾಳಿ

Published On - 1:12 pm, Tue, 18 January 22

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ