AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೆ ಮುಗಿಸಿ ಕರ್ತವ್ಯಕ್ಕೆ ವಾಪಸ್ ಆಗಿದ್ದ ಯೋಧ ಪಂಜಾಬ್​ನಲ್ಲಿ ಹೃದಯಾಘಾತದಿಂದ ಸಾವು

ಕಳೆದ ವಾರ ರಜೆಗೆಂದು ತಿಲವಾಣಿಗೆ ಬಂದು ರಜೆ ಮುಗಿಸಿ ಪಠಾಣ್ ಕೋಟಗೆ ವಾಪಸಾಗಿದ್ದರು. ರೈಲು ನಿಲ್ದಾಣದಲ್ಲಿ ಇಳಿಯುವಾಗ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ರಜೆ ಮುಗಿಸಿ ಕರ್ತವ್ಯಕ್ಕೆ ವಾಪಸ್ ಆಗಿದ್ದ ಯೋಧ ಪಂಜಾಬ್​ನಲ್ಲಿ ಹೃದಯಾಘಾತದಿಂದ ಸಾವು
ಯೋಧ ವಿನಯ್ ಬಾಬಾಸಾಹೇಬ ಭೋಜೆ
TV9 Web
| Edited By: |

Updated on:Jan 18, 2022 | 2:17 PM

Share

ಚಿಕ್ಕೋಡಿ: ರಜೆ ಮುಗಿಸಿ ಕರ್ತವ್ಯಕ್ಕೆ ವಾಪಸ್ ಆಗಿದ್ದ ಯೋಧ (Soldier) ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾರೆ. ಪಂಜಾಬ್​ನಲ್ಲಿ (Punjab) ನಿಪ್ಪಾಣಿ ತಾಲೂಕಿನ ಭೋಜ ಗ್ರಾಮದ ಯೋಧ ಸಾವನ್ನಪ್ಪಿದ್ದಾರೆ. ಪಠಾಣ್ ಕೋಟ ರೈಲು ನಿಲ್ದಾಣದಲ್ಲಿ ವಿನಯ್ ಬಾಬಾಸಾಹೇಬ ಭೋಜೆ (37) ಹೃದಯಾಘಾತದಿಂದ ಮೃತಪಟ್ಟಿದ್ದು, ಸಾವಿನ ಸುದ್ದಿ ಕೇಳಿ ಭೋಜ ಗ್ರಾಮ ಶೋಕ ಸಾಗರದಲ್ಲಿ ಮುಳುಗಿದೆ. ಯೋಧ ಹದಿನೇಳು ವರ್ಷಗಳ ಹಿಂದೆ ಭಾರತೀಯ ಸೇನೆಗೆ ಸೇರ್ಪಡೆಯಾಗಿದ್ದರು. ಕಳೆದ ಹತ್ತು ವರ್ಷಗಳಿಂದ ಮಹಾರಾಷ್ಟ್ರದ ಹಾತಕಣಂಗಲೆ ತಾಲೂಕಿನ ತಿಲವಾಣಿ ಗ್ರಾಮದಲ್ಲಿ ನೆಲೆಸಿದ್ದರು.

ಕಳೆದ ವಾರ ರಜೆಗೆಂದು ಮಹಾರಾಷ್ಟ್ರದ ಹಾತಕಣಂಗಲೆ ತಾಲೂಕಿನ ತಿಲವಾಣಿಗೆ ಬಂದು ರಜೆ ಮುಗಿಸಿ ಪಠಾಣ್ ಕೋಟಗೆ ವಾಪಸಾಗಿದ್ದರು. ರೈಲು ನಿಲ್ದಾಣದಲ್ಲಿ ಇಳಿಯುವಾಗ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತ ಸೈನಿಕ ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಕೊರೊನಾ ಹಿನ್ನೆಲೆ ಯೋಧನ ಅಂತಿಮ ಸಂಸ್ಕಾರವನ್ನು ಪಂಜಾಬ್​ನಲ್ಲೇ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚೆಗೆ ಹೃದಯಾಘಾತದಿಂದ ಹೆಚ್ಚು ಜನ ಮೃತರಾಗುತ್ತಿದ್ದಾರೆ. ಅದರಲ್ಲೂ ಯೋಧರೂ ಕೂಡಾ ಹೃದಯಾಘಾತದಿಂದ ಉಸಿರು ನಿಲ್ಲಿಸುತ್ತಿದ್ದಾರೆ. ಈ ಹಿಂದೆ ಅಂದರೆ ಜನವರಿ 07ಕ್ಕೆ ಹೃದಯಾಘಾತದಿಂದ ಕರ್ತವ್ಯನಿರತ ಸಿಆರ್​ಪಿಎಫ್(CRPF)​ ಯೋಧ ಸಾವನ್ನಪ್ಪಿದ್ದರು. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅನಿಗಾನಹಳ್ಳಿಯ ಯೋಧ  ಸುರೇಶ್(45) ಮೃತಪಟ್ಟಿದ್ದರು. ಜಾರ್ಖಂಡ್​ನ ಮಿಲಿಟರಿ ಕ್ಯಾಂಪ್​ನಲ್ಲಿ ತರಬೇತಿ ನೀಡುವಾಗ ಹೃದಯಾಘಾತದಿಂದ  ಸಾವನ್ನಪ್ಪಿದ್ದರು.

ಇದನ್ನೂ ಓದಿ

weight Loss Tips: ಕಡಿಮೆ ಕ್ಯಾಲೋರಿಯಿರುವ ಈ ಆಹಾರಗಳನ್ನು ಸೇವಿಸಿ: ದೇಹದ ಅತಿಯಾದ ತೂಕ ಇಳಿಸಿಕೊಳ್ಳಿ

ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಕೆಲವೇ ದಿನಗಳ ಹಿಂದೆ ಆರೋಪ ಮಾಡಿದ್ದ ಆಪ್​; ಪಂಜಾಬ್​ ಸಿಎಂ ಸೋದರಳಿಯನ ಮನೆ ಮೇಲೆ ಇ.ಡಿ. ದಾಳಿ

Published On - 1:12 pm, Tue, 18 January 22

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು