AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ನಾಪತ್ತೆಯಾಗಿದ್ದ ಮಗು ಅರಣ್ಯದಲ್ಲಿ ಪತ್ತೆ: ದಟ್ಟ ಕಾಡಿಗೆ ಹೋಗಿದ್ದ ಹೇಗೆಂಬುದೇ ಪ್ರಶ್ನೆ

ತಾವರಗಟ್ಟಿ ಗ್ರಾಮದ ಅದಿತಿ, ಶಿವಾಜಿ ಇಟಗೇಕರ ಎಂಬುವರ ಪುತ್ರಿ ಆದಿತಿ ಅಜ್ಜಿ ಮನೆಗೆ ಬಂದಿತ್ತು. ಮನೆ ಬಳಿ ಆಟವಾಡುತ್ತಿದ್ದ ಮಗು ಏಕಾಏಕಿ ನಾಪತ್ತೆಯಾಗಿತ್ತು.

ಬೆಳಗಾವಿಯಲ್ಲಿ ನಾಪತ್ತೆಯಾಗಿದ್ದ ಮಗು ಅರಣ್ಯದಲ್ಲಿ ಪತ್ತೆ: ದಟ್ಟ ಕಾಡಿಗೆ ಹೋಗಿದ್ದ ಹೇಗೆಂಬುದೇ ಪ್ರಶ್ನೆ
ಪ್ರಾತಿನಿಧಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:May 01, 2022 | 7:28 AM

Share

ಬೆಳಗಾವಿ: ನಾಲ್ಕು ದಿನಗಳ ಹಿಂದೆ ನಗರದಲ್ಲಿ ನಾಪತ್ತೆಯಾಗಿದ್ದ ಮಗು ದಟ್ಟ ಅರಣ್ಯದಲ್ಲಿ ಪತ್ತೆಯಾಗಿದೆ. ಏಪ್ರಿಲ್ 26ರಂದು ಚಿರೇಖಾನಿ ಗ್ರಾಮದಿಂದ ಬೆಳಗಾವಿಯಿಂದ ನಾಪತ್ತೆಯಾಗಿದ್ದು ಮಗು ಖಾನಾಪುರ ತಾಲ್ಲೂಕಿನ ಜಾಂಬೋಟಿ ಅರಣ್ಯದಲ್ಲಿ ಪತ್ತೆಯಾಗಿದೆ. ತಾವರಗಟ್ಟಿ ಗ್ರಾಮದ ಅದಿತಿ, ಶಿವಾಜಿ ಇಟಗೇಕರ ಎಂಬುವರ ಪುತ್ರಿ ಆದಿತಿ ಅಜ್ಜಿ ಮನೆಗೆ ಬಂದಿತ್ತು. ಮನೆ ಬಳಿ ಆಟವಾಡುತ್ತಿದ್ದ ಮಗು ಏಕಾಏಕಿ ನಾಪತ್ತೆಯಾಗಿದ್ದರಿಂದ ಏಪ್ರಿಲ್ 29ರಂದು ಖಾನಾಪುರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು. ಚಿರೇಖಾನಿ ಸುತ್ತಮುತ್ತಲಿನ ಗ್ರಾಮಗಳು ಮತ್ತು ಅರಣ್ಯ ಪ್ರದೇಶದಲ್ಲಿ ಮಗುವಿಗಾಗಿ ಶೋಧ ನಡೆಸಲಾಯಿತು. ಅರಣ್ಯ ಇಲಾಖೆ ಸಿಬ್ಬಂದಿ ಜತೆ ಜಾಂಬೋಟಿ ಅರಣ್ಯದಲ್ಲಿಯೂ ಹುಡುಕಾಟ ನಡೆಸಲಾಯಿತು. ಈ ವೇಳೆ ಮರವೊಂದರ ಕೆಳಗೆ ನಿತ್ರಾಣ ಸ್ಥಿತಿಯಲ್ಲಿ ಮಗು ಅದಿತಿ ಪತ್ತೆಯಾಗಿತ್ತು. ತಕ್ಷಣ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದ ಪೊಲೀಸರು ಅಗತ್ಯ ಚಿಕಿತ್ಸೆ ಕೊಡಿಸಿದ್ದರು. ಬಾಲಕಿ ಚೇತರಿಸಿಕೊಂಡ ನಂತರ ಮಗುವನ್ನು ಮನೆಗೆ ಕರೆದೊಯ್ಯಲಾಯಿತು. ಮಗು ದಟ್ಟ ಅರಣ್ಯಕ್ಕೆ ಹೋಗಿದ್ದು ಹೇಗೆ ಎಂಬ ಬಗ್ಗೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ.

ಬೆಳಗಾವಿಯ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಉಪನ್ಯಾಸಕನಿಗೆ ಚಪ್ಪಲಿ ಏಟು ನೀಡಿ ಬುದ್ದಿ ಕಲಿಸಿದ ಅತಿಥಿ ಉಪನ್ಯಾಸಕಿಯರು

ಬೆಳಗಾವಿ: ಲೈಂಗಿಕ ಕಿರುಕುಳ ನೀಡಿದ ಉಪನ್ಯಾಸಕನಿಗೆ ಕಾಲಿನಿಂದ ಒದ್ದು, ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಗಾವಿಯ ಸರ್ದಾರ್ ಸರ್ಕಾರಿ ಕಾಲೇಜಿನಲ್ಲಿ ನಡೆದಿದೆ. ಉಪನ್ಯಾಸಕ ಅಮಿತ್ ಬಸವಮೂರ್ತಿಗೆ ಕಾಲೇಜಿನ ಸ್ಟಾಫ್ ರೂಮ್ನಲ್ಲಿ ಅತಿಥಿ ಉಪನ್ಯಾಸಕಿಯರು ಹಿಗ್ಗಾಮಗ್ಗಾ ಥಳಿಸಿದ್ದಾರೆ.

ಉಪನ್ಯಾಸಕ ಅಮಿತ್ ನಿತ್ಯ ಕಾಲೇಜಿಗೆ ಮದ್ಯಸೇವಿಸಿ ಬಂದು ಸ್ಟಾಫ್ ರೂಮ್ನಲ್ಲಿ ಲೈಂಗಿಕ ಕಿರುಕುಳ ನೀಡ್ತಿದ್ದನಂತೆ. ಹಲವು ಬಾರಿ ವಾರ್ನಿಂಗ್ ಕೊಟ್ಟರೂ ಚಾಳಿ ಬಿಡದ ಹಿನ್ನೆಲೆ ಉಪನ್ಯಾಸಕನ ಕಿರುಕುಳಕ್ಕೆ ಬೇಸತ್ತು ಸ್ಟಾಫ್ ರೂಮ್‌ನಲ್ಲೇ ಅತಿಥಿ ಉಪನ್ಯಾಸಕಿಯರು ಚಪ್ಪಲಿ ಏಟು ನೀಡಿ ಬುದ್ಧಿ ಕಲಿಸಿದ್ದಾರೆ. ಅತಿಥಿ ಉಪನ್ಯಾಸಕಿಯರು ಥಳಿಸುವ ವಿಡಿಯೋ ವೈರಲ್ ಆಗಿದೆ. ಉಪನ್ಯಾಸಕನ ವಿರುದ್ಧ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಎರಡು ದಿನದ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ದಾವಣಗೆರೆ: ಹೆರಿಗೆಯಾದ ಎರಡು ಗಂಟೆಯಲ್ಲಿ ಮಗು ನಾಪತ್ತೆ ಕೇಸ್; ಮಗು ಅಪಹರಿಸಿದ ಮಹಿಳೆ ವಿಡಿಯೋ ಲಭ್ಯ

ಇದನ್ನೂ ಓದಿ: Unsung Hero: ನಾಪತ್ತೆಯಾಗಿದ್ದ ಮಗುವನ್ನು ರಕ್ಷಿಸಿ ರಾತ್ರೋರಾತ್ರಿ ಪ್ರಸಿದ್ಧಳಾದ ಶಾಲಾ ಬಾಲಕಿ

Published On - 7:24 am, Sun, 1 May 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ