AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳು ಕಳ್ಳರೆಂದು ತಿಳಿದು ಅಪರಿಚಿತರ ಮೇಲೆ ಹಲ್ಲೆ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ

ಧಾರವಾಡಕ್ಕೂ ಮಕ್ಕಳ ಕಳ್ಳರ ವದಂತಿ ಕಾಲಿಟ್ಟಿದ್ದು, ಮನಸೂರ ಗ್ರಾಮದಲ್ಲಿ ಜನ ಗುಂಪು ಸೇರಿದ್ದಾರೆ. ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದ್ದು, ಗ್ರಾಮದ ಶಾಲೆಗೆ ಪೋಷಕರು ಬಂದು ಸೇರಿದ್ದಾರೆ.

ಮಕ್ಕಳು ಕಳ್ಳರೆಂದು ತಿಳಿದು ಅಪರಿಚಿತರ ಮೇಲೆ ಹಲ್ಲೆ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ
ಮಕ್ಕಳು ಕಳ್ಳರೆಂದು ತಿಳಿದು ಅಪರಿಚಿತರ ಮೇಲೆ ಹಲ್ಲೆ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Sep 13, 2022 | 8:15 PM

Share

ಬೆಳಗಾವಿ: ಅಪರಿಚಿತರನ್ನ ಮಕ್ಕಳು ಕಳ್ಳರೆಂದು ತಿಳಿದು ಮೂರು ದಿನಗಳಲ್ಲಿ ಮೂರು ಕಡೆ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ಇಟಗಿ ಗ್ರಾಮದಲ್ಲಿ ನಡೆದಿದೆ. ಪ್ಲಾಸ್ಟಿಕ್ ಕೊಡ, ಬಕೆಟ್ ಸೇರಿದಂತೆ ದಿನ ಬಳಕೆ ವಸ್ತು ಮಾರಾಟ ಮಾಡುವವರನ್ನು ಗ್ರಾಮಸ್ಥರು ಥಳಿಸಿದ್ದಾರೆ. ಕೌಜಲಗಿ ಗ್ರಾಮದಲ್ಲಿ ನಾಗಾ ಸಾಧುಗಳ ಮೇಲೆಯೂ ಗ್ರಾಮಸ್ಥರು ಹಲ್ಲೆ ಮಾಡಿದ್ದಾರೆ. ಮಕ್ಕಳನ್ನ ಕದ್ದುಕೊಂಡು ಹೋಗುತ್ತಿದ್ದಾರೆ ಅಂತಾ ಹಲ್ಲೆ ಮಾಡಲಾಗಿದೆ. ಮೂರು ಪ್ರಕರಣದಲ್ಲಿ ಪರಿಶೀಲನೆ ನಡೆಸಿ ಅವರ ಐಡಿ ಕಾರ್ಡ್ ಮತ್ತು ಉದ್ಯೋಗ ಆಧಾರದ ಮೇಲೆ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಈ ಕುರಿತು ಯಾವುದೇ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ. ಮಕ್ಕಳು ಕಳ್ಳರೆಂದು ಸುಳ್ಳು ಸುದ್ದಿ ಹರಡಿಸುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಸ್‌ಪಿ ಸಂಜೀವ ಪಾಟೀಲ್ ಮಾಹಿತಿ ನೀಡಿದರು. ವಾಟ್ಸಪ್​ನಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದರು.

ಧಾರವಾಡಕ್ಕೂ ಕಾಲಿಟ್ಟ ಮಕ್ಕಳ ಕಳ್ಳರ ವದಂತಿ

ಧಾರವಾಡ: ಧಾರವಾಡಕ್ಕೂ ಮಕ್ಕಳ ಕಳ್ಳರ ವದಂತಿ ಕಾಲಿಟ್ಟಿದ್ದು, ಮನಸೂರ ಗ್ರಾಮದಲ್ಲಿ ಜನ ಗುಂಪು ಸೇರಿದ್ದಾರೆ. ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದ್ದು, ಗ್ರಾಮದ ಶಾಲೆಗೆ ಪೋಷಕರು ಬಂದು ಸೇರಿದ್ದಾರೆ. ಬಾಲಕನಿಗೆ ಬೈಕ್ ಮೇಲೆ ಶಾಲೆಗೆ ಬಿಡುವುದಾಗಿ ಇಬ್ಬರು ಹೇಳಿದ್ದು, ಬೈಕ್ ಮೇಲಿದ್ದವರನ್ನು ನೋಡಿ ಬಾಲಕ ಓಡಿ ಹೋಗಿದ್ದಾನೆ. ನಾಲ್ಕು ದಿನಗಳ ಹಿಂದೆ ಘಟನೆ ನಡೆದಿದೆ. ಘಟನೆ ಹಿನ್ನೆಲೆ ಪೋಷಕರು ಶಾಲೆಗೆ ಬಂದಿದ್ದು, ಶಿಕ್ಷಕರ ಜೊತೆ ಗ್ರಾಮಸ್ಥರು ಚರ್ಚೆ ಮಾಡಿದರು. ಪೊಲೀಸರಿಗೆ ದೂರು ಕೊಡಲು ಒತ್ತಾಯಿಸಲಾಯಿತು. ಪೋಷಕರ ಒತ್ತಾಯಕ್ಕೆ ಮಣಿದ ಶಿಕ್ಷಕರು ದೂರು ಕೊಡಲು ಮುಂದಾದರು.

ಅಬ್ಬಿನಹೊಳೆ ಗ್ರಾಮದ ಕೆರೆಯಲ್ಲಿ ವ್ಯಕ್ತಿಯ ಶವಪತ್ತೆ

ಚಿತ್ರದುರ್ಗ: ಹಿರಿಯೂರು ತಾಲೂಕಿನ ಅಬ್ಬಿನಹೊಳೆ ಗ್ರಾಮದಲ್ಲಿ ಮಧ್ಯಾಹ್ನ ಎಮ್ಮೆ ಮೇಯಿಸಲು ಹೋಗಿದ್ದಾಗ ಆಕಸ್ಮಿಕವಾಗಿ ಕೆರೆ ನೀರಿಗೆ ಬಿದ್ದಿದ್ದ ಅಜಯ್‌(30) ಮೃತದೇಹ ಪತ್ತೆಯಾಗಿದೆ. ಗ್ರಾಮಸ್ಥರ ಸಹಾಯದಿಂದ ಕೆರೆ ನೀರಿನಿಂದ  ಪೊಲೀಸರು ಮೃತದೇಹ ಹೊರತೆಗೆದಿದ್ದಾರೆ. ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಉಣಕಲ್ ಕೆರೆಗೆ ಬಿದ್ದು ಯುವಕ ಆತ್ಮಹತ್ಯೆ

ಹುಬ್ಬಳ್ಳಿ: ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಬಿದ್ದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ಯುವಕನ ಗುರುತು ಪತ್ತೆಯಾಗಿಲ್ಲ. ಅಗ್ನಿಶಾಮಕ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡು ಯುವಕನ ಶವ ಹೊರ ತೆಗೆದಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ವಿದ್ಯಾನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್