AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೋರ್ಲಾ ಘಾಟ್ ಬಳಿ 400 ಕೋಟಿ ದರೋಡೆಗಿಲ್ಲ ಪ್ರತ್ಯಕ್ಷದರ್ಶಿಗಳು: ಎಸ್​​ಐಟಿಗೆ ಸವಾಲಾದ ತನಿಖೆ!

ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ನಡೆದ 400 ಕೋಟಿ ರೂ. ದರೋಡೆ ಪ್ರಕರಣವು ಪೊಲೀಸರಿಗೆ ದೊಡ್ಡ ಸವಾಲಾಗಿದೆ. ಅಮಾನ್ಯಗೊಂಡ 2000 ರೂ. ನೋಟುಗಳಿದ್ದ ಕಂಟೇನರ್ ಹೈಜಾಕ್ ಆಗಿದೆ ಎನ್ನಲಾಗಿದ್ದರೂ, ಪ್ರತ್ಯಕ್ಷದರ್ಶಿಗಳು ಲಭ್ಯವಿಲ್ಲ. ಕಿಡ್ನಾಪ್ ಆಗಿದ್ದ ವ್ಯಕ್ತಿ ಕೂಡ ದರೋಡೆಗೆ ಸಾಕ್ಷಿಯಾಗಿಲ್ಲ. ಈ ಪ್ರಕರಣದಲ್ಲಿ ರಾಜಕೀಯ ನಾಯಕನ ಹೆಸರು ಕೇಳಿಬಂದಿದ್ದು, ಗುಜರಾತ್ ಮೂಲದ ಆಶ್ರಮವೊಂದರ ನಂಟಿನ ಬಗ್ಗೆಯೂ SIT ತನಿಖೆ ನಡೆಸುತ್ತಿದೆ.

ಚೋರ್ಲಾ ಘಾಟ್ ಬಳಿ 400 ಕೋಟಿ  ದರೋಡೆಗಿಲ್ಲ ಪ್ರತ್ಯಕ್ಷದರ್ಶಿಗಳು: ಎಸ್​​ಐಟಿಗೆ ಸವಾಲಾದ ತನಿಖೆ!
ರಾಬರಿ ಕೇಸ್​​ಗಿಲ್ಲ ಪ್ರತ್ಯಕ್ಷದರ್ಶಿ!
Sahadev Mane
| Edited By: |

Updated on:Jan 28, 2026 | 9:23 AM

Share

ಬೆಳಗಾವಿ, ಜನವರಿ 28: ಚೋರ್ಲಾ ಘಾಟ್ ಬಳಿ 400 ಕೋಟಿ ದರೋಡೆ ಪ್ರಕರಣ ಸಂಬಂಧ ಪ್ರತ್ಯಕ್ಷದರ್ಶಿಗಾಗಿ ಮೂರು ರಾಜ್ಯಗಳ ಪೊಲೀಸರು ತಲೆಕೆಡಿಸಿಕೊಂಡಿದ್ದಾರೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಹೋಗ್ತಿದ್ದ ಅಮಾನ್ಯಗೊಂಡ 2000 ಮುಖ ಬೆಲೆಯ 400 ಕೋಟಿ ಹಣ ತುಂಬಿದ್ದ ಕಂಟೇನರ್​​ ಹೈಜಾಕ್​​ ಮಾಡಲಾಗಿದೆ ಎನ್ನಲಾಗಿದ್ದರೂ ಆ ಬಗ್ಗೆ ಸಾಕ್ಷಿಗಳೇ ಪೊಲೀಸರಿಗೆ ಸಿಗುತ್ತಿಲ್ಲ. ಸಾಲು ಸಾಲು ಪ್ರಶ್ನೆಗಳು ತನಿಖೆ ವೇಳೆ ಎದುರಾಗ್ತಿದ್ದು, ಇವುಗಳಿಗೆ ಉತ್ತರ ಹುಡುಕೋದೇ ಈಗ ಖಾಕಿಗೆ ದೊಡ್ಡ ಸವಾಲಾಗಿ ಮಾರ್ಪಟ್ಟಿದೆ.

ಪ್ರಕರಣ ಸಂಬಂಧ ಉದ್ಭವಿಸಿರೋ ಪ್ರಶ್ನೆಗಳೇನು?

  • ಗೋವಾ ರಾಜ್ಯದ ಯಾವ ಸ್ಥಳದಲ್ಲಿ ಕಂಟೇನರ್​​ಗಳಿಗೆ ಹಣ ತುಂಬಲಾಯ್ತು?
  • ಕಂಟೇನರ್​​ಗೆ ಹಣ ತುಂಬಿದ್ದನ್ನು ಕಣ್ಣಾರೆ ನೋಡಿರುವವರು ಯಾರು?
  • ಯಾವ ಮಾರ್ಗವಾಗಿ ಆ ಕಂಟೇನರ್​​ಗಳು ಚೋರ್ಲಾ ಘಾಟ್ ಪ್ರವೇಶಿಸಿದ್ದವು?
  • ಚೋರ್ಲಾ ಘಾಟ್​​ನ ಯಾವ ಸ್ಥಳದಲ್ಲಿ ಹಣ ತುಂಬಿದ್ದ ಕಂಟೇನರ್ ಹೈಜಾಕ್ ಆಗಿವೆ?
  • ಆ ಕಂಟೇನರ್ ವಾಹನದ ನಂಬರ್ ಏನು? ಅವುಗಳ ಮಾಲೀಕ ಯಾರು?

ಇದನ್ನೂ ಓದಿ: 400 ಕೋಟಿ ಮಾಲೀಕ ಗುಜರಾತ್ ರಾಜಕಾರಣಿಯಾ? ದೇಶದ ಅತಿದೊಡ್ಡ ದರೋಡೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್!

ಇನ್ನು ಪ್ರಕರಣ ಸಂಬಂಧ ಕಿಡ್ನಾಪ್ ಆಗಿದ್ದ ಸಂದೀಪ್ ಪಾಟೀಲ್ ಕೂಡ ದರೋಡೆಯನ್ನು ಕಣ್ಣಾರೆ ನೋಡಿಲ್ಲ.ಕಿಡ್ನಾಪ್ ಮಾಡಿದವರು ಹೇಳಿದ್ದನ್ನೇ ದೂರಿನಲ್ಲಿ ದಾಖಲು ಮಾಡಲಾಗಿದೆ. ಈ ನಡುವೆ ಕಿಂಗ್​​ಪಿನ್ ಕಿಶೋರ್ ಸಾಳ್ವೆ ಬಗ್ಗೆ ಸಾಕ್ಷಿ ಎಸ್ಐಟಿ ಸಂಗ್ರಹಿಸುತ್ತಿದ್ದು, ಮತ್ತೊಂದೆಡೆ ಅರೆಸ್ಟ್ ಆಗಿರೋ ಏಳು ಜನ ಆರೋಪಿಗಳ ತೀವ್ರ ವಿಚಾರಣೆಯೂ ನಡೆಯುತ್ತಿದೆ. ಹೀಗಿದ್ದರೂ ಮಹಾರಾಷ್ಟ್ರ ಎಸ್ಐಟಿಗೆ ಸಂಬಂಧ ಐ ವಿಟ್ನೆಸ್​​ ಇನ್ನೂ ಸಿಕ್ಕಿಲ್ಲ ಎನ್ನಲಾಗಿದೆ.

ದರೋಡೆ ಪ್ರಕರಣದಲ್ಲಿ ರಾಜಕೀಯ ನಾಯಕನೋರ್ವನ ಹೆಸರೂ ತಳಕು ಹಾಕಿಕೊಂಡಿದ್ದು, ವೈರಲ್ ಆಗಿರೋ ಸಂಭಾಷಣೆ ಜಾಡು ಹಿಡಿದು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಮಹಾರಾಷ್ಟ್ರದ ಎಸ್ಐಟಿ ಮುಖ್ಯಸ್ಥ ಆದಿತ್ಯ ಮೀರಖೇಲಕರ್ ನೇತೃತ್ವದಲ್ಲಿ ನಡೆಯುತ್ತಿರುವ ತ‌ನಿಖೆಯಲ್ಲಿ ಗುಜರಾತನ ದೊಡ್ಡ ರಾಜಕಾರಣಿ ಯಾರು? ಗುಜರಾತ್​​ನ ಅಹಮದಾಬಾದ್ ಮೂಲದ ಆಶ್ರಮ ಯಾವುದು? ಹಣ ಎಲ್ಲಿದೆ? ಆಶ್ರಮದಲ್ಲಿಯೇ ಬ್ಲಾಕ್ ಆ್ಯಂಡ್ ವೈಟ್ ದಂಧೆ ಮಾಡುತ್ತಿದ್ದಾರಾ? ಎಂಬ ಹಲವು ಆಯಾಮಗಳಲ್ಲಿ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 9:19 am, Wed, 28 January 26

ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ
ಸಾರ್ವಜನಿಕವಾಗಿ ಮಚ್ಚು ಹಿಡಿದ ಪ್ರಕರಣ: ನಟ ಪ್ರಖ್ಯಾತ್ ಹೇಳಿದ್ದೇನು?
ಸಾರ್ವಜನಿಕವಾಗಿ ಮಚ್ಚು ಹಿಡಿದ ಪ್ರಕರಣ: ನಟ ಪ್ರಖ್ಯಾತ್ ಹೇಳಿದ್ದೇನು?
ಸೆಮಿಫೈನಲ್‌ ಪಂದ್ಯದಲ್ಲಿ ಸತತ 2ನೇ ಶತಕ ಬಾರಿಸಿದ ಸ್ಮರಣ್ ರವಿಚಂದ್ರನ್
ಸೆಮಿಫೈನಲ್‌ ಪಂದ್ಯದಲ್ಲಿ ಸತತ 2ನೇ ಶತಕ ಬಾರಿಸಿದ ಸ್ಮರಣ್ ರವಿಚಂದ್ರನ್
ಅವನ ಸಹವಾಸ ಬೇಡ ಅಂದ್ರೂ ಕೇಳಿಲ್ಲ: ಪ್ರಿಯಕರನ ಅಸಲಿಮುಖ ಬಿಚ್ಚಿಟ್ಟ ಮಂಗಳಮುಖಿ
ಅವನ ಸಹವಾಸ ಬೇಡ ಅಂದ್ರೂ ಕೇಳಿಲ್ಲ: ಪ್ರಿಯಕರನ ಅಸಲಿಮುಖ ಬಿಚ್ಚಿಟ್ಟ ಮಂಗಳಮುಖಿ