AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯನಿರತ ಕರ್ನಾಟಕದ ಯೋಧ ಉತ್ತರಪ್ರದೇಶದಲ್ಲಿ ನಿಧನ; ಪಾರ್ಥಿವ ಶರೀರ ಬುಧವಾರ ಸ್ವಗ್ರಾಮಕ್ಕೆ

ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆ ಹಿನ್ನೆಲೆ ಬಂದೋಬಸ್ತಗಾಗಿ ಸೇವಾನಿರತರಾಗಿದ್ದರು. ಆಕಸ್ಮಿಕವಾಗಿ ಸೋಮವಾರ ಬೆಳಿಗ್ಗೆ ಅಸ್ವಸ್ಥತೆ ಉಂಟಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಯೋಧ ನವನಾಥ್ ಸಾವನ್ನಪ್ಪಿದ್ದಾರೆ.

ಕರ್ತವ್ಯನಿರತ ಕರ್ನಾಟಕದ ಯೋಧ ಉತ್ತರಪ್ರದೇಶದಲ್ಲಿ ನಿಧನ; ಪಾರ್ಥಿವ ಶರೀರ ಬುಧವಾರ ಸ್ವಗ್ರಾಮಕ್ಕೆ
CISF ನ ಯೋಧ ನವನಾಥ ಅಪ್ಪಾ ದಿವಟೆ
TV9 Web
| Updated By: ganapathi bhat|

Updated on:Mar 09, 2022 | 3:55 PM

Share

ಚಿಕ್ಕೋಡಿ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕರ್ನಾಟಕ ರಾಜ್ಯದ ಯೋಧ ಒಬ್ಬರು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ. ಉತ್ತರಪ್ರದೇಶದಲ್ಲಿ ಕರ್ನಾಟಕ ರಾಜ್ಯದ ಯೋಧ ಸಾವನ್ನಪ್ಪಿದ್ದಾರೆ. CISF ನ ಯೋಧ ನವನಾಥ ಅಪ್ಪಾ ದಿವಟೆ (30) ಮೃತ ದುರ್ದೈವಿ. ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕುರ್ಲಿ ಗ್ರಾಮದ ನಿವಾಸಿ, ದಿಢೀರ್ ಅಸ್ವಸ್ಥಗೊಂಡು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಉತ್ತರಪ್ರದೇಶದಲ್ಲಿ ಕರ್ತವ್ಯನಿರತ ಯೋಧ ಸೋಮವಾರ ಸಾವನ್ನಪ್ಪಿದ್ದಾರೆ. ಕಳೆದ 10 ವರ್ಷಗಳಿಂದ ಭಾರತೀಯ ಸೈನ್ಯದಳದ ಸಿಐಎಸ್ಎಫ್‍ನಲ್ಲಿ ಯೋಧನಾಗಿ ಮೃತ ನವನಾಥ ಸೇವೆ ಸಲ್ಲಿಸಿದ್ದರು. ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆ ಹಿನ್ನೆಲೆ ಬಂದೋಬಸ್ತಗಾಗಿ ಸೇವಾನಿರತರಾಗಿದ್ದರು. ಆಕಸ್ಮಿಕವಾಗಿ ಸೋಮವಾರ ಬೆಳಿಗ್ಗೆ ಅಸ್ವಸ್ಥತೆ ಉಂಟಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಯೋಧ ನವನಾಥ್ ಸಾವನ್ನಪ್ಪಿದ್ದಾರೆ. ಯೋಧನ ಪಾರ್ಥಿವ ಶರೀರ ಇಂದು ಕುರ್ಲಿ ಗ್ರಾಮಕ್ಕೆ ತಲುಪಲಿದೆ.

ಇದನ್ನೂ ಓದಿ: ಮಾನಸಿಕ ಖಿನ್ನತೆ: ಐವರ ಮೇಲೆ ಗುಂಡಿನ ದಾಳಿ ಮಾಡಿ ತಾನೂ ಹತನಾದ ಬೆಳಗಾವಿಯ BSF ಯೋಧ

ಇದನ್ನೂ ಓದಿ: ‘ಮೃತ ಯೋಧ ಅಲ್ತಾಫ್​ಗೆ ಪರಿಹಾರ ಘೋಷಿಸಿ; ಹರ್ಷನ ಕುಟುಂಬಕ್ಕೆ 25 ಲಕ್ಷ ರೂ. ಕೊಡ್ತೀರಾ ಸೈನಿಕನಿಗೆ ಯಾಕೆ ಕೊಡಲ್ಲ?’

Published On - 3:55 pm, Wed, 9 March 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​