ಮನೆ ದೇವರು ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬೊಮ್ಮಾಯಿ ಸಭೆ: 26 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೆ ಚಿಂತನೆ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌದದಲ್ಲಿ ಶಾಸಕ ಆನಂದ್ ಮಾಮನಿ ಮತ್ತು ದೇವಸ್ಥಾನದ ಆಡಳಿತ ಮಂಡಳಿ ಜೊತೆ ಸಭೆ ನಡೆಸಿ ಯಲ್ಲಮ್ಮ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ವರದಿ ಸಿದ್ಧಪಡಿಸುವಂತೆ ಸೂಚನೆ ನೀಡಿದ್ದಾರೆ.

ಮನೆ ದೇವರು ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬೊಮ್ಮಾಯಿ ಸಭೆ: 26 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೆ ಚಿಂತನೆ
ಸವದತ್ತಿ ಯಲ್ಲಮ್ಮ ದೇವಿ ದೇವಸ್ಥಾನ ಅಭಿವೃದ್ದಿಗೆ ಸಿಎಂ ಬೊಮ್ಮಾಯಿ ಸಭೆ
Follow us
| Updated By: ವಿವೇಕ ಬಿರಾದಾರ

Updated on: Jul 06, 2022 | 2:52 PM

ಬೆಂಗಳೂರು: ಬೆಳಗಾವಿ (Belagavi) ಜಿಲ್ಲೆ ಸವದತ್ತಿ (Savadatti) ತಾಲೂಕಿನ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ (Renuka Yellamma Devi Temple) ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು (CM Basavaraj Bommai) ವಿಧಾನಸೌದದಲ್ಲಿ ಶಾಸಕ ಆನಂದ್ ಮಾಮನಿ (Anand Mamani) ಮತ್ತು ದೇವಸ್ಥಾನದ ಆಡಳಿತ ಮಂಡಳಿ ಜೊತೆ ಸಭೆ ನಡೆಸಿ ಯಲ್ಲಮ್ಮ ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ವರದಿ ಸಿದ್ಧಪಡಿಸುವಂತೆ ಸೂಚನೆ ನೀಡಿದ್ದಾರೆ. ವಿಧಾನಸೌಧದ ಮುಖ್ಯಮಂತ್ರಿ ಕೊಠಡಿಯಲ್ಲಿ ಸಭೆ ನಡೆದಿದ್ದು, ಅಂದಾಜು 26 ಕೋಟಿ ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿಗೆ ಚಿಂತನೆ ನಡೆಸಿದ್ದಾರೆ.

ಇದನ್ನು ಓದಿ: ಚಾಮುಂಡಿ ಬೆಟ್ಟಕ್ಕೆ ರೋಪ್​ವೇ ಪ್ರಸ್ತಾವ ಕೈಬಿಟ್ಟ ಮೈಸೂರು ಜಿಲ್ಲಾಡಳಿತ

ಸಭೆಯಲ್ಲಿ ಕೆಲ ಸಲಹೆ ಸೂಚನೆ ನೀಡಿರುವ ಮುಖ್ಯಮಂತ್ರಿಗಳು ಸದ್ಯ ವಾಸ್ತವ್ಯಕ್ಕೆ 400 ಕೊಠಡಿಗಳಿದ್ದು,ಇನ್ನೂ 200 ಕೊಠಡಿ ಹೆಚ್ಚಿಸಿ, ವಸತಿ ಸಮುದಾಯದಗಳ ಕೆಳಗೆ ಅನ್ನದಾಸೋಹ ಕೇಂದ್ರ ತೆರೆಯಿರಿ. ಸ್ನಾನಗೃಹ, ಶೌಚ ಗೃಹ ನಿರ್ಮಾಣ ಮಾಡಿ. ದೇವಸ್ಥಾನದಲ್ಲಿ 2 ಪ್ರತ್ಯೇಕ ಸರತಿ ಸಾಲು ನಿರ್ಮಾಣ ಮಾಡಿ. ಅದರಲ್ಲಿ ಒಂದು ವಿಶೇಷ ದರ್ಶನಕ್ಕೆ ಸರತಿ ಸಾಲಿಗೆ ಅವಕಾಶ ಮಾಡಿಕೊಡಿ ಎಂದು ಸೂಚಿಸಿದ್ದಾರೆ.

ಫುಟ್‌ಪಾತ್ ಅಭಿವೃದ್ಧಿಗೆ ಕ್ರಮ ಕೈಗೊಳ್ಳಿ.  ದೇವಸ್ಥಾನದ ಸುತ್ತಲಿನ 3 ಜಾಗಗಳಲ್ಲಿ ಪಾರ್ಕಿಂಗೆ ವ್ಯವಸ್ಥೆ ಮಾಡಿ. ವ್ಯಾಪಾರಿಗಳಿಗೆ ಅಂಗಡಿ ತೆರೆಯಲು ಸ್ಥಳಾವಕಾಶ ಮಾಡಿಕೊಡಿ.  ದೇವಸ್ಥಾನದ ಸ್ವಚ್ಛತೆಗೆ ಗುತ್ತಿಗೆ ಆಧಾರದಲ್ಲಿ ಕಾರ್ಮಿಕರ ನೇಮಕ ಮಾಡಿ ಎಂದು ಸೂಚಿಸಿದ್ದಾರೆ.

ಇದನ್ನು ಓದಿ: ಬೀದರ್​​​​​ನಲ್ಲಿ ಸುರಿಯದ ಮಳೆರಾಯನನ್ನು ಸಂಪ್ರೀತಗೊಳಿಸಲು ಗೊಂಬೆಗಳ ಮದುವೆ ಮತ್ತು ಮೆರವಣಿಗೆ

ಈ ಸಂಬಂಧ ಜುಲೈ 20ರಂದು ಶಾಸಕ ಆನಂದ್ ಮಾಮನಿ ನೇತೃತ್ವದಲ್ಲಿ, ಮತ್ತೊಂದು ಸಭೆ ನಡೆಸಿ ಮುಖ್ಯಮಂತ್ರಿಗಳಿಗೆ ಅಂತಿಮ ವರದಿ ಸಲ್ಲಿಸಲಿದ್ದಾರೆ.

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ