AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ವಿಧಾನಸಭೆಯಲ್ಲಿ 2022-23ನೇ ಸಾಲಿನ ಪೂರಕ ಬಜೆಟ್ ಮಂಡಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ವಿಧಾನಸಭೆಯಲ್ಲಿಂದು ಸಿಎಂ ಬಸವರಾಜ ಬೊಮ್ಮಾಯಿ 2022-23ನೇ ಸಾಲಿನ ಪೂರಕ ಬಜೆಟ್ ಮಂಡಿಸಿದ್ದಾರೆ. 8001.13 ಕೋಟಿ ರೂ.ಗಳ ಪೂರಕ ಅಂದಾಜು ಮಂಡಿಸಿದ್ದಾರೆ.

ಬೆಳಗಾವಿ: ವಿಧಾನಸಭೆಯಲ್ಲಿ 2022-23ನೇ ಸಾಲಿನ ಪೂರಕ ಬಜೆಟ್ ಮಂಡಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Dec 29, 2022 | 1:08 PM

ಬೆಂಗಳೂರು: ಬೆಳಗಾವಿ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಕೊನೆಯ ದಿನವಾದ ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-23ರನೇ ಸಾಲಿನ ಪೂರಕ ಬಜೆಟ್ ಮಂಡಿಸಿದ್ದಾರೆ. 8001.13 ಕೋಟಿ ರೂ.ಗಳ ಪೂರಕ ಅಂದಾಜು ಮಂಡಿಸಿದ್ದಾರೆ. ಇನ್ನು, ರಾಜ್ಯ ಅಸೆಂಬ್ಲಿ ಚುನಾವಣೆ ಎದುರಿಗೆ ಇದ್ದು ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಫೆಬ್ರವರಿಯಲ್ಲಿ ತಾತ್ಕಾಲಿಕ ಬಜೆಟ್​ ಮಂಡಿಸಲಿದ್ದಾರೆ.

ಡಿಸಾಸ್ಟರ್ ರೆಸ್ಪಾನ್ಸ್ ಫಂಡ್​​ಗೆ 1,396 ಕೋಟಿ ರೂ. ಮೀಸಲು, ಮನ್ರೇಗಾ ಯೋಜನೆಗೆ 750 ಕೋಟಿ ರೂಪಾಯಿ ಮೀಸಲು, ಇಂಧನ ಸೆಕ್ಟರ್​​ನಲ್ಲಿ ಈಕ್ವಿಟಿ ಖರೀದಿಗೆ 500 ಕೋಟಿ ರೂ, ಜನರಲ್​ ಅಸೆಂಬ್ಲಿ ಚುನಾವಣೆಗೆ 300 ಕೋಟಿ ರೂಪಾಯಿ, ರಾಜೀವ್ ಗಾಂಧಿ ಹೌಸಿಂಗ್ ಸೊಸೈಟಿ ಸ್ಕೀಂಗೆ 256 ಕೋಟಿ ರೂ, ರೈಲ್ವೆ ಯೋಜನೆಗೆ 250 ಕೋಟಿ, ನೀರಾವರಿ ಯೋಜನೆಗೆ 200 ಕೋಟಿ, ಐದು ಮೆಗಾ ಹಾಸ್ಟೆಲ್​​ಗಳ ನಿರ್ಮಾಣಕ್ಕೆ 200 ಕೋಟಿ ರೂ ಹಾಗೂ ಬಿಬಿಎಂಪಿಗೆ ಎರಡು ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ.

ಇದನ್ನೂ ಓದಿ: Bidar: ನಾಯಿಕೊಡೆಗಳಂತೆ ಆಗಸದಲ್ಲಿ ಅನಧಿಕೃತ ಮೊಬೈಲ್ ಟವರ್​ಗಳದ್ದೇ ಹಾವಳಿ, ಇದರ ಬಗ್ಗೆ ಮಾಹಿತಿಯೇ ಇಲ್ಲ ಅಂತಾರೆ ನಗರಸಭೆ ಆಯುಕ್ತ!

ಮಂದಗತಿಯಲ್ಲಿ ಸಾಗುತ್ತಿರುವ ನಮ್ಮ ಮೆಟ್ರೋ ಕಾಮಗಾರಿ ಬೇಗ ಪೂರ್ಣಗೊಳಿಸುವಂತೆ ಗೋವಿಂದರಾಜು ಮನವಿ

ಬೆಂಗಳೂರಿನ ನಮ್ಮ ಮೆಟ್ರೋ (Namma Metro)ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿದ್ದು, ಕಾಮಗಾರಿಗೆ ಚುರುಕು ನೀಡುವಂತೆ ವಿಧಾನಪರಿಷತ್ ಸದಸ್ಯ ಕೆ ಗೋವಿಂದರಾಜು ಮನವಿ ಮಾಡಿದ್ದಾರೆ. ಈ ಬಗ್ಗೆ ಪರಿಷತ್​ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಉತ್ತರ ನೀಡಿದ್ದು, ಸಾಕಷ್ಟು ಸವಾಲುಗಳೊಂದಿಗೆ ಕೆಲಸ ಮಾಡಬೇಕಿದೆ. ಇನ್ನೊಂದು ವರ್ಷದಲ್ಲಿ ಏರ್​ಪೋರ್ಟ್​ಗೆ ಮೆಟ್ರೋ ಸಂಪರ್ಕ ದೊರೆಯಲಿದೆ. ನಿಗದಿತ ಸಮಯದಲ್ಲಿ ಮೆಟ್ರೋ ಕಾಮಗಾರಿ ಮುಗಿಸುತ್ತೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಮೆಟ್ರೋ ಕಾಮಗಾರಿ ಬೆಂಗಳೂರಿನಲ್ಲಿ ಮಂದಗತಿಯಲ್ಲಿ ಸಾಗುತ್ತಿದೆ, ಬೇಗ ಕಾಮಗಾರಿ ಮುಗಿಸುವಂತೆ ಕೆ. ಗೋವಿಂದರಾಜು ವಿಧಾನಪರಿಷತ್​ನಲ್ಲಿ ಒತ್ತಾಯಿಸಿದ್ದರು.ಬೆಂಗಳೂರಿನ ಮಧ್ಯೆ ಭಾಗದಲ್ಲಿ ಕಾಮಗಾರಿ ನಡೆಯುತ್ತಿದೆ, ಹೈ ಡೆನ್ಸಿಟಿ ಪಾಪ್ಯೂಲೇಶನ್ ಕವರ್ ಮಾಡುವ ಉದ್ದೇಶದಿಂದ ಮಾಡುತ್ತಿದ್ದೇವೆ. ಸಾಕಷ್ಟು ಸವಾಲುಗಳಿಂದ ಕೆಲಸ ಮಾಡಬೇಕಿದೆ.ಮರ ಟ್ರಾನ್ಸಫ್ಲಾಂಟ್ ಮಾಡಬೇಕು, ಭೂ ಸ್ವಾಧೀನ ಮಾಡಬೇಕು, ಅಂಡರ್ ಗ್ರೌಂಡ್ ಕಾಮಗಾರಿ ಮಾಡಬೇಕು. ಆದರೆ ನಾನು ಬಂದಮೇಲೆ ವೇಗ ಕೊಟ್ಟಿದ್ದೇನೆ, ಇನ್ನೊಂದು ವರ್ಷದಲ್ಲಿ ಏರ್ ಪೋರ್ಟ್ ಗೆ ಮೆಟ್ರೋಗೆ ಕನೆಕ್ಟಿವಿಟಿ ಕೊಡುತ್ತೇವೆ.

ನಿಮ್ಮ ಕಾಳಜಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ, ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸುತ್ತೇವೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ ನೀಡಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:03 pm, Thu, 29 December 22

ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು