Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕದ ಅಭಿವೃದ್ಧಿ, ವಿಕೇಂದ್ರೀಕರಣಕ್ಕೆ ಒತ್ತು: ಸಿಎಂ ಬೊಮ್ಮಾಯಿ ಭರವಸೆ

ತಾಲೂಕು, ಜಿಲ್ಲೆಗಳಲ್ಲಿ ಸಮರ್ಪಕವಾಗಿ ವಿದ್ಯುತ್ ವಿತರಣೆ ಮಾಡಲು ಯಾರಾದರೂ ಮುಂದೆ ಬಂದರೆ ನಾವು ಅವರನ್ನು ಬೆಂಬಲಿಸಲು ಸಿದ್ದರಿದ್ದೇವೆ ಎಂದು ಅವರು ತಿಳಿಸಿದರು.

ಉತ್ತರ ಕರ್ನಾಟಕದ ಅಭಿವೃದ್ಧಿ, ವಿಕೇಂದ್ರೀಕರಣಕ್ಕೆ ಒತ್ತು: ಸಿಎಂ ಬೊಮ್ಮಾಯಿ ಭರವಸೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: guruganesh bhat

Updated on: Sep 25, 2021 | 9:40 PM

ಬೆಳಗಾವಿ: ಉತ್ತರ ಕರ್ನಾಟಕದ ಅಭಿವೃದ್ಧಿಗೆ ನೆನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಜಾರಿಗೊಳಿಸುತ್ತೇವೆ. ಉತ್ತರ ಕರ್ನಾಟಕಕ್ಕೆ ನ್ಯಾಯ ಒದಗಿಸುತ್ತೇವೆ ಎಂದು ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಜನರಿಗೆ ಬೇಕಾಗುವ ಸೇವೆಗಳನ್ನ ವಿಕೇಂದ್ರೀಕರಣ ಮಾಡಿ ಗ್ರಾಮ ಪಂಚಾಯಿತಿಗೆ ನೀಡಬೇಕು. ಈ ಯೋಜನೆಗೆ ಬೇಕಾದ ಸಿದ್ಧತೆಗಳನ್ನ ಸರ್ಕಾರ ಮಾಡುತ್ತಿದೆ. ರೈತರು ಅವರದ್ದೆ ಆದ ಕಂಪನಿ ಮಾಡಿ ಅವರ ಬೆಳೆದ ಬೆಳೆ ಮಾರಾಟ ಮಾಡುವ ಯೋಜನೆ ಮಾಡಿದ್ದೇವೆ. ನಮ್ಮ ಸರ್ಕಾರ ಜನಪರವಾಗಿರುವ, ಬಡವರ ಪರವಾಗಿರುವ ಸರ್ಕಾರವಾಗಿದೆ. ಸಂಗಮ ಬ್ಯಾರೇಜ್​ನಿಂದ 6 ಬ್ಯಾರೇಜ್​ಗಳನ್ನು ತುಂಬಿಸುವ ಯೋಜನೆಗೆ ಅನುಮೋದನೆ ಕೊಡುತ್ತೇವೆ.

ಜನರ ಆಶೀರ್ವಾದ ಇದ್ದರೆ ಎಂತಹ ಸವಾಲುಗಳನ್ನು ಸಹ ಎದುರಿಸಬಹುದು. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಜತೆಗೆ ಯಾವೆಲ್ಲಾ ಯೋಜನೆ ನೆನೆಗುದಿಗೆ ಬಿದ್ದಿವೆ ಅದನ್ನ ಪರಿಹರಿಸುತ್ತೇವೆ. ಜನರಿಗೆ, ಕನ್ನಡ ನಾಡಿಗೆ, ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುತ್ತೇವೆ ಎಂದು ಅವರು ಆಶ್ವಾಸನೆ ನೀಡಿದರು.

ತಾಲೂಕು, ಜಿಲ್ಲೆಗಳಲ್ಲಿ ಸಮರ್ಪಕವಾಗಿ ವಿದ್ಯುತ್ ವಿತರಣೆ ಮಾಡಲು ಯಾರಾದರೂ ಮುಂದೆ ಬಂದರೆ ನಾವು ಅವರನ್ನು ಬೆಂಬಲಿಸಲು ಸಿದ್ದರಿದ್ದೇವೆ. ವಿದ್ಯುತ್ ವಿತರಣೆ ವಿಕೇಂದ್ರೀಕರಣ ಮಾಡಲು ಮುಖ್ಯಮಂತ್ರಿಯಾಗಿ ನಾನು ಸಿದ್ದನಿದ್ದೇನೆ ಎಂದು ಅವರು ಸೂಚಿಸಿದರು.

ಇದನ್ನೂ ಓದಿ: 

ಕಿಲಾರಿ ಎತ್ತುಗಳನ್ನು ಹೊಂದುವುದು ಶ್ರೀಮಂತಿಕೆ ಮತ್ತು ಪ್ರತಿಷ್ಠೆಯ ಸಂಕೇತ, ಉತ್ತರ ಕರ್ನಾಟಕದಲ್ಲಿ ಇವುಗಳಿಗೆ ಭಾರಿ ಬೇಡಿಕೆ!

Ganesh Chaturthi 2021 Recipe: ಉತ್ತರ ಕರ್ನಾಟಕ ಸ್ಪೆಷಲ್ ಕೊಬ್ಬರಿ ಕಡುಬು ಮಾಡಿ ಸವಿಯಿರಿ

(CM Basavaraj Bommai says will develop North Karnataka and power supply system will decentralised in Future)

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ