AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ದಾರ್ ಮೈದಾನದಲ್ಲಿ​ ಕ್ರೀಡೆ ಬದಲು ರಾಜಕೀಯ ಚಟುವಟಿಕೆ ಶುರುವಾಗುತ್ತಾ?

ಬೆಳಗಾವಿ: ಅದು ಸರ್ಕಾರಿ ಮೈದಾನ. ಅಲ್ಲಿ ರಾಜಕೀಯ ಚಟುವಟಿಕೆ ಸೇರಿದಂತೆ ಯಾವುದಕ್ಕೂ ಅವಕಾಶವಿಲ್ಲ. ಆದ್ರೆ ಅಧಿಕಾರ ಇದೆ ಎಂಬ ಕಾರಣಕ್ಕೆ ಸಿಎಂ ರಾಜಕೀಯ ಕಾರ್ಯದರ್ಶಿ ಪ್ಲೇ ಗ್ರೌಂಡ್‌ನಲ್ಲಿ ಪೊಲಿಟಿಕಲ್‌ ಗೇಮ್ ಆಡಲು ಹೋರಟಿರೋದು ಬೆಳಗಾವಿಯಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಹೌದು, ಬೆಳಗಾವಿಯ ಹೃದಯಭಾಗದಲ್ಲಿರುವ ಸರ್ದಾರ್ ಮೈದಾನ ಕೇವಲ ಕ್ರೀಡಾ ಚಟುವಟಿಕೆಗಳಿಗೆ ಮಾತ್ರ ಬಳಕೆ ಆಗಬೇಕು. ತಾನೇ ಮಾಡಿದ ನಿಯಮವನ್ನು ಬೆಳಗಾವಿ ಮಹಾನಗರ ಪಾಲಿಕೆ ಗಾಳಿಗೆ ತೂರುತ್ತಿದೆ. ಶಿಕ್ಷಣ ಇಲಾಖೆಯ ಆಸ್ತಿಯಾಗಿರುವ ಬೆಳಗಾವಿಯ ಸರ್ದಾರ್ ಮೈದಾನವವನ್ನು ಪಾಲಿಕೆ ವಿಶೇಷ ಅನುದಾನದಲ್ಲಿ […]

ಸರ್ದಾರ್ ಮೈದಾನದಲ್ಲಿ​ ಕ್ರೀಡೆ ಬದಲು ರಾಜಕೀಯ ಚಟುವಟಿಕೆ ಶುರುವಾಗುತ್ತಾ?
Guru
|

Updated on: Jun 27, 2020 | 7:55 PM

Share

ಬೆಳಗಾವಿ: ಅದು ಸರ್ಕಾರಿ ಮೈದಾನ. ಅಲ್ಲಿ ರಾಜಕೀಯ ಚಟುವಟಿಕೆ ಸೇರಿದಂತೆ ಯಾವುದಕ್ಕೂ ಅವಕಾಶವಿಲ್ಲ. ಆದ್ರೆ ಅಧಿಕಾರ ಇದೆ ಎಂಬ ಕಾರಣಕ್ಕೆ ಸಿಎಂ ರಾಜಕೀಯ ಕಾರ್ಯದರ್ಶಿ ಪ್ಲೇ ಗ್ರೌಂಡ್‌ನಲ್ಲಿ ಪೊಲಿಟಿಕಲ್‌ ಗೇಮ್ ಆಡಲು ಹೋರಟಿರೋದು ಬೆಳಗಾವಿಯಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಹೌದು, ಬೆಳಗಾವಿಯ ಹೃದಯಭಾಗದಲ್ಲಿರುವ ಸರ್ದಾರ್ ಮೈದಾನ ಕೇವಲ ಕ್ರೀಡಾ ಚಟುವಟಿಕೆಗಳಿಗೆ ಮಾತ್ರ ಬಳಕೆ ಆಗಬೇಕು. ತಾನೇ ಮಾಡಿದ ನಿಯಮವನ್ನು ಬೆಳಗಾವಿ ಮಹಾನಗರ ಪಾಲಿಕೆ ಗಾಳಿಗೆ ತೂರುತ್ತಿದೆ. ಶಿಕ್ಷಣ ಇಲಾಖೆಯ ಆಸ್ತಿಯಾಗಿರುವ ಬೆಳಗಾವಿಯ ಸರ್ದಾರ್ ಮೈದಾನವವನ್ನು ಪಾಲಿಕೆ ವಿಶೇಷ ಅನುದಾನದಲ್ಲಿ ಒಂದು ಕೋಟಿಗೂ ಹೆಚ್ಚು ಖರ್ಚು ಮಾಡಿ ಅಭಿವೃದ್ಧಿಪಡಿಸಿದೆ. ಮೈದಾನದಲ್ಲಿ ಕ್ರೀಡಾ ಸಂಕೀರ್ಣ ನಿರ್ಮಿಸಿ ಕೆಲವೊಂದನ್ನ ಬಾಡಿಗೆಗೆ ನೀಡಿದೆ. ಇದರ ಮಧ್ಯೆ ಈ ಸಂಕೀರ್ಣದಲ್ಲಿ ಇನ್ನುಮುಂದೆ ಕ್ರೀಡಾ ಚಟುವಟಿಕೆ ಬದಲು ರಾಜಕೀಯ ಚಟುವಟಿಕೆ ಶುರುವಾಗಲಿದೆಯಾ ಎನ್ನುವ ಭಯ ಸ್ಥಳೀಯರಲ್ಲಿ ಶುರವಾಗಿದೆ.

ಸಿಎಂ ರಾಜಕೀಯ ಕಾರ್ಯದರ್ಶಿಯ ಪ್ರಭಾವ ಸರ್ದಾರ್ ಮೈದಾನದ ಕ್ರೀಡಾ ಸಂಕೀರ್ಣದಲ್ಲಿ ತಮ್ಮ ರಾಜಕೀಯ ಪ್ರಭಾವ ಬಳಸಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ್ ಕಚೇರಿ ಆರಂಭಿಸಲು ಹೊರಟ್ಟಿದ್ದಾರೆ. ಈ ಕಚೇರಿಯನ್ನು ಮಹಾನಗರ ಪಾಲಿಕೆಯೇ ನಿರ್ಮಿಸಿ ಕೊಡುತ್ತಿದೆ ಎಂಬ ಆಘಾತಕಾರಿ ವಿಷಯ ಈಗ ಬೆಳಗಾವಿಯಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಈ ಮೈದಾನ ಕ್ರೀಡಾ ಚಟುವಟಿಕೆಗೆ ಮಾತ್ರ ಸೀಮೀತವಾಗಬೇಕು ಎಂದು 2010 ರಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ನಿರ್ಧರಿಸಿತ್ತು. ಆಗಿನ ಪಾಲಿಕೆ ಆಡಳಿತಾಧಿಕಾರಿ ಆಗಿದ್ದ ಆಗಿನ ಜಿಲ್ಲಾಧಿಕಾರಿ ಜೆ. ರವಿಶಂಕರ್, ಸರ್ದಾರ್ ಮೈದಾನ ಕೇವಲ ಕ್ರೀಡಾ ಚಟುವಟಿಕೆಗೆ ಮಾತ್ರ ಸೀಮಿತ ಎಂದು ಆದೇಶ ಮಾಡಿದ್ದರು.

ತರಾತುರಿಯಲ್ಲಿ ಪಾಟೀಲ್‌ರಿಗೆ ಕಚೇರಿ ಆದರೆ ಮಹಾನಗರ ಪಾಲಿಕೆ ಮಾತ್ರ ತರಾತುರಿಯಲ್ಲಿ ಶಂಕರಗೌಡ ಪಾಟೀಲ ಅವರಿಗೆ ಕಚೇರಿ ಮಾಡಿಕೊಡಲು ಹೊರಟಿದೆ. ಕ್ರೀಡಾಂಗಣದಲ್ಲಿ ಶಂಕರಗೌಡ ಪಾಟೀಲರಿಗೆ ಬಿಎಂಪಿ ಕಚೇರಿ ಮಾಡಿ ಕೊಡುವದಾದರೆ, ಮೈದಾನದಲ್ಲಿ ಕ್ರೀಡಾ ಚಟುವಟಿಕೆ ಬಂದ್ ಮಾಡಿ ಇಡೀ ಮೈದಾನವನ್ನೇ ರಾಜಕೀಯ ನಾಯಕರಿಗೆ ಸಮರ್ಪಿಸಲಿ ಎಂದು ಕ್ರೀಡಾಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬೆಳಗಾವಿ ಪಾಲಿಕೆ ಕ್ರಮಕ್ಕೆ ಸಾರ್ವಜನಿಕರ ಆಕ್ರೋಶ ಇವತ್ತು ಶಂಕರಗೌಡ ಪಾಟೀಲರಿಗೆ ಕಚೇರಿ ಮಾಡಿಕೊಟ್ಟರೆ, ನಾಳೆ ಇತರ ರಾಜಕೀಯ ನಾಯಕರು ಸರ್ದಾರ್ ಮೈದಾನದಲ್ಲಿ ಠಿಕಾಣಿ ಹೂಡುತ್ತಾರೆ. ಆಗ ಪಾಲಿಕೆಗೆ ಎನೂ ಮಾಡಲಾಗದಂಥ ಸ್ಥಿತಿ ಬರುತ್ತೆ. ರಾಜಕೀಯ ಕಾರ್ಯದರ್ಶಿ ಆಗಲಿ, ಯಾರೇ ಆಗಲಿ ಕ್ರೀಡೆಗೆಂದು ಮೀಸಲಿಟ್ಟ ಮೈದಾನದಲ್ಲಿ ಪ್ರಭಾವ ಬಳಸಿಕೊಂಡು ಕಚೇರಿ ಮಾಡಲು ಹೊರಟ್ಟಿದ್ದು ಸರಿಯಲ್ಲ. ಪಾಲಿಕೆ ಮಾಡಿದ್ದ ನಿಯಮಗಳನ್ನ ಅವರೇ ಬ್ರೇಕ್ ಮಾಡುತ್ತಿರುವುದರ ಹಿಂದಿನ ಉದ್ದೇಶವಾದ್ರೂ ಏನೂ ಬೆಳಗಾವಿ ಜನತೆ ಆಕ್ರೋಶದಿಂದ ಕೇಳುತ್ತಿದ್ದಾರೆ. -ಸಹದೇವ ಮಾನೆ

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?