AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Congress Bus Yatra: ಕಾಂಗ್ರೆಸ್ ನಾಯಕರ​ ಬಸ್​ ಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ಮೂಲಕ ಬಿಜೆಪಿ ಕೌಂಟರ್

ಜನವರಿ 11ರಿಂದ ಕಾಂಗ್ರೆಸ್ ನಾಯಕರ ಜಂಟಿ ಬಸ್ ಯಾತ್ರೆ ಆರಂಭವಾಗಲಿದೆ. ಈ ವಿಚಾರವಾಗಿ ಕಾಂಗ್ರೆಸ್ ನಾಯಕರ​ ಬಸ್​ ಯಾತ್ರೆಗೆ ಮೋದಿ ಮೂಲಕ ಬಿಜೆಪಿ ಕೌಂಟರ್ ನೀಡಿದೆ. 

Congress Bus Yatra: ಕಾಂಗ್ರೆಸ್ ನಾಯಕರ​ ಬಸ್​ ಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ಮೂಲಕ ಬಿಜೆಪಿ ಕೌಂಟರ್
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Dec 20, 2022 | 3:28 PM

ಬೆಳಗಾವಿ: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆ ಕಾಂಗ್ರೆಸ್​ ಬಸ್ ಯಾತ್ರೆಗೆ (Congress Bus Yatra) ಮುಹೂರ್ತ ಫಿಕ್ಸ್​ ಆಗಿದ್ದು, ಜನವರಿ 11ರಿಂದ ಕಾಂಗ್ರೆಸ್ ನಾಯಕರ ಜಂಟಿ ಬಸ್ ಯಾತ್ರೆ ಆರಂಭವಾಗಲಿದೆ. ಈ ವಿಚಾರವಾಗಿ ಕಾಂಗ್ರೆಸ್ ನಾಯಕರ​ ಬಸ್​ ಯಾತ್ರೆಗೆ ಮೋದಿ ಮೂಲಕ ಬಿಜೆಪಿ ಕೌಂಟರ್ ನೀಡಿದೆ.  ಜ. 12ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ ಬಹುತೇಕ ಖಚಿತವಾಗಿದೆ. ಕೇಂದ್ರ ಯುವ ಸಬಲೀಕರಣ ಇಲಾಖೆಯಿಂದ ಆಯೋಜಿಸಿರುವ ರಾಷ್ಟ್ರೀಯ ಯುವಜನ ಮೇಳ ಉದ್ಘಾಟಿಸಲು ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಈ ಮೊದಲು ಬೆಳಗಾವಿಯಲ್ಲಿ ಯುವಜನ ಮೇಳ ನಿರ್ಧಾರವಾಗಿತ್ತು. ಆದರೆ ಸದ್ಯ ಬೆಳಗಾವಿ ಬದಲು ಬೇರೆಡೆ ಯುವಜನ ಮೇಳ ಆಯೋಜನೆಗೆ ಸಿದ್ಧತೆ ನಡೆಯುತ್ತಿದೆ ಎನ್ನಲಾಗುತ್ತಿದೆ.

ಜನವರಿ 12ರಂದು ರಾಷ್ಟ್ರೀಯ ಯುವಜನ ಮೇಳ ನಡೆಯಲಿದ್ದು, 8 ರಿಂದ 10 ಸಾವಿರ ಜನರಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕಿರುವ ಹಿನ್ನೆಲೆ ರಾಜ್ಯ ಯುವ ಸಬಲೀಕರಣ ಇಲಾಖೆ ಪೂರ್ವ ಸಿದ್ಧತೆಯಲ್ಲಿ ತೊಡಗಿದೆ. ಮೋದಿ ಭೇಟಿ ವೇಳೆ ಇತರೆ ಕಾರ್ಯಕ್ರಮಗಳಿಗೂ ಚಾಲನೆ ಕೊಡಿಸಲು ಸಿದ್ಧತೆ ನಡೆಸಲಾಗುತ್ತಿದೆ. ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಗೆ ಚಾಲನೆ ಸಾಧ್ಯತೆಯಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಬಸ್ ಯಾತ್ರೆ ಆರಂಭದ ಸಮಯದಲ್ಲೇ ರಾಜ್ಯಕ್ಕೆ ಮೋದಿ ಕರೆಸಿ ಸಮಾವೇಶಗಳಲ್ಲಿ ಭಾಷಣ ಮಾಡಿಸಲು ಬಿಜೆಪಿ ಪ್ಲ್ಯಾನ್ ಮಾಡುತ್ತಿದೆ.

ಇದನ್ನೂ ಓದಿ: Congress Bus Yatra:ಕರ್ನಾಟಕ ಕಾಂಗ್ರೆಸ್​ ಬಸ್ ಯಾತ್ರೆಗೆ ಮುಹೂರ್ತ ಫಿಕ್ಸ್, ಇಲ್ಲಿದೆ ವೇಳಾಪಟ್ಟಿ

21 ಜಿಲ್ಲೆಗಳಲ್ಲಿ ಬಸ್ ಯಾತ್ರೆ ಸಂಚಾರ

ಕಾಂಗ್ರೆಸ್ ನಾಯಕರ ಜಂಟಿ ಬಸ್ ಯಾತ್ರೆ ಬೆಳಗಾವಿಯಿಂದ ಶುರುವಾಗಲಿದ್ದು, ಒಟ್ಟೂ 21 ಜಿಲ್ಲೆಗಳಲ್ಲಿ ಬಸ್ ಯಾತ್ರೆ ಸಂಚರಿಸಲಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಮಾಹಿತಿ ನೀಡಿದ್ದು, ಯಾವ ದಿನಾಂಕದಂದು ಎಲ್ಲಿ ಬಸ್ ಯಾತ್ರೆ ನಡೆಯಲಿದೆ ಎನ್ನುವ ರೂಟ್ ಮ್ಯಾಪ್​ ಈ ಕೆಳಗಿನಂತಿದೆ.

ಬೆಳಗಾವಿ ಜಿಲ್ಲೆ ದೊಡ್ಡದಿರುವುದರಿಂದ 2 ವಿಭಾಗ ಮಾಡಿಕೊಂಡಿದ್ದು, ಚಿಕ್ಕೋಡಿ, ಬೆಳಗಾವಿಯಲ್ಲಿ ತಲಾ ಒಂದು ಸಭೆ ನಡೆಸಲಿದ್ದಾರೆ. ಇನ್ನು ಜನವರಿ 14, 15ರಂದು ಸಂಕ್ರಾಂತಿ ಹಬ್ಬದ ಸಲುವಾಗಿ ಯಾತ್ರೆಗೆ ವಿರಾಮ ನೀಡಲಾಗಿದೆ. ಬೆಳಗಾವಿಯಲ್ಲೇ ಕಾಂಗ್ರೆಸ್​ನ ಪ್ರಥಮ ಅಧಿವೇಶನ ನಡೆದಿತ್ತು. ಹಾಗಾಗಿ ಬೆಳಗಾವಿಯಿಂದ ಬಸ್​ ಯಾತ್ರೆ ಆರಂಭ ಮಾಡುತ್ತಿರುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: CBI Raid: 1989ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಡಿಕೆ ಶಿವಕುಮಾರ್ ಅವರ ಸಮಗ್ರ ಆಸ್ತಿಪಾಸ್ತಿ ವಿವರ ಇಲ್ಲಿದೆ

ಬಸ್​ ಯಾತ್ರೆ ವೇಳಾಪಟ್ಟಿ ಇಲ್ಲಿದೆ

* ಜನವರಿ 11ರಂದು ಬೆಳಗಾವಿ ಜಿಲ್ಲೆ

* ಜನವರಿ 16ರಂದು ಹೊಸಪೇಟೆ

* ಜನವರಿ 17ರಂದು ಕೊಪ್ಪಳದಲ್ಲಿ ಯಾತ್ರೆ

* ಜನವರಿ 18ರಂದು ಬಾಗಲಕೋಟೆ, ಗದಗ ಜಿಲ್ಲೆಯಲ್ಲಿ ಬಸ್ ಯಾತ್ರೆ

* ಜನವರಿ 19ರಂದು ಹಾವೇರಿ, ದಾವಣಗೆರೆ ಜಿಲ್ಲೆ

* ಜನವರಿ 21 ಹಾಸನ, ಚಿಕ್ಕಮಗಳೂರು

* ಜನವರಿ 22 ಉಡುಪಿ, ದಕ್ಷಿಣ ಕನ್ನಡ.

* ಜನವರಿ 23 ಕೋಲಾರ, ಚಿಕ್ಕಬಳ್ಳಾಪುರ

* ಜನವರಿ 24 ತುಮಕೂರು, ಬೆಂಗಳೂರು ಗ್ರಾಮಾಂತರ

* ಜನವರಿ 25 ಚಾಮರಾಜನಗರ, ಮೈಸೂರು

* ಜನವರಿ 26 ಮಂಡ್ಯ ಮತ್ತು ರಾಮನಗರ

* ಜನವರಿ 27 ಯಾದಗಿರಿ-ಕಲಬುರಗಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಂಥ ಟ್ರಿಕ್ಸ್ ನನ್ನ ಹತ್ರ ಬೇಡ: ಮಾಧ್ಯಮಗಳ ಎದುರು ಶಿವರಾಜ್​ಕುಮಾರ್ ಗರಂ
ಅಂಥ ಟ್ರಿಕ್ಸ್ ನನ್ನ ಹತ್ರ ಬೇಡ: ಮಾಧ್ಯಮಗಳ ಎದುರು ಶಿವರಾಜ್​ಕುಮಾರ್ ಗರಂ
ಸುರೇಶ್ ರೈನಾಗೆ ಓಂ ಸಿನಿಮಾ ರೀತಿ ಲಾಂಗ್ ಹಿಡಿಯೋದು ಕಲಿಸಿದ ಶಿವಣ್ಣ
ಸುರೇಶ್ ರೈನಾಗೆ ಓಂ ಸಿನಿಮಾ ರೀತಿ ಲಾಂಗ್ ಹಿಡಿಯೋದು ಕಲಿಸಿದ ಶಿವಣ್ಣ
Weekly Horoscope: ಜೂನ್​ 2 ರಿಂದ 8 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 2 ರಿಂದ 8 ರವರೆಗಿನ ವಾರ ಭವಿಷ್ಯ
Daily Devotional: ಮನೆಗೆ ಬರುವ ಅತಿಥಿಗಳ ಉಪಚಾರ ಹೇಗಿರಬೇಕು?
Daily Devotional: ಮನೆಗೆ ಬರುವ ಅತಿಥಿಗಳ ಉಪಚಾರ ಹೇಗಿರಬೇಕು?
Daily Horoscope: ಈ ರಾಶಿಯವರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರುವುದು ಬೇಡ
Daily Horoscope: ಈ ರಾಶಿಯವರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರುವುದು ಬೇಡ
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್