AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಿದ ಕಾರ್ಯಕ್ರಮದಲ್ಲಿ ನರ್ಸ್​ಗಳ ಸೌಂದರ್ಯವನ್ನು ಹಾಡಿಹೊಗಳಿದ ಶಾಸಕ​ ರಾಜು ಕಾಗೆ, ಟೀಕೆ ವ್ಯಕ್ತವಾಗುತ್ತಿದ್ದಂತೆಯೇ ಕ್ಷಮೆ

ಆಸ್ಪತ್ರೆಯೊಂದರ ಮಹಿಳಾ ನರ್ಸ್​ಗಳ ಸೌಂದರ್ಯವನ್ನು ಹಾಡಿಹೊಗಳಿದ್ದು, ಇದು ಭಾರೀ ವಿವಾದಕ್ಕೀಡಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಕಾಂಗ್ರೆಸ್​ ಶಾಸಕ ರಾಜು ಕಾಗೆ ಕ್ಷಮೆ ಕೋರಿದ್ದಾರೆ. ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ಕ್ಷಮೆಯಾಚಿಸಿದ್ದಾರೆ. ಅಷ್ಟಕ್ಕೂ ವಿಡಿಯೋನಲ್ಲೇನಿದೆ? ಅವರು ಹೇಳಿದ್ದೇನು? ಇಲ್ಲಿದೆ ವಿವ

ತುಂಬಿದ ಕಾರ್ಯಕ್ರಮದಲ್ಲಿ ನರ್ಸ್​ಗಳ ಸೌಂದರ್ಯವನ್ನು ಹಾಡಿಹೊಗಳಿದ ಶಾಸಕ​ ರಾಜು ಕಾಗೆ, ಟೀಕೆ ವ್ಯಕ್ತವಾಗುತ್ತಿದ್ದಂತೆಯೇ  ಕ್ಷಮೆ
ಕಾಂಗ್ರೆಸ್​ ಶಾಸಕ ರಾಜು ಕಾಗೆ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on:Oct 23, 2023 | 2:57 PM

Share

ಬೆಳಗಾವಿ, (ಅಕ್ಟೋಬರ್ 23): ತುಂಬಿದ ಕಾರ್ಯಕ್ರಮದಲ್ಲಿ ನರ್ಸ್​ಗಳ (Nurse) ಸೌಂದರ್ಯದ ಬಗ್ಗೆ ಮಾತನಾಡಿ ವಿವಾದಕ್ಕೀಡಾಗಿದ್ದ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು (Raju Kage) ಕಾಗೆ ಕ್ಷಮೆಯಾಸಿದ್ದಾರೆ. ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನ ಪಿ.ಕೆ‌.ನಾಗನೂರು ಗ್ರಾಮದಲ್ಲಿ ನಡೆದ ದಸರಾ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮ ನರ್ಸ್​ಗಳ ಬಗ್ಗೆ ಬ್ಯುಟಿ ಬಗ್ಗೆ ಮಾತನಾಡಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಅಲ್ಲದೇ ಇದಕ್ಕೆ ಭಾರೀ ಟೀಕೆಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ಇದೀಗ ರಾಜು ಕಾಗೆ, ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ಕ್ಷಮೆ ಕೋರಿದ್ದಾರೆ.

ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ರಾಜು ಕಾಗೆ, ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ. ನಿನ್ನೆ(ಅಕ್ಟೋಬರ್ 22) ಸಮಾರಂಭದಲ್ಲಿ ಮಾತನಾಡಿದ್ದು ಯಾರನ್ನೂ ಉದ್ದೇಶಿಸಿ ಅಲ್ಲ. ನಾನೇನೂ ನಾಲ್ಕು ಗೋಡೆಯಲ್ಲಿ ಮಾತನಾಡಿಲ್ಲ. ಮುದುಕನಾದನಲ್ಲ ಅಂತಾ ಮನಸ್ಸಿಗೆ ನೋವಾಯ್ತು ಅಂತಾ ಹೇಳಿದೆ. ನನ್ನ ಮಾತಿನಿಂದ ಏನಾದರೂ ನೋವಾಗಿದ್ದರೆ ಕ್ಷಮೆ ಕೇಳುತ್ತಿದ್ದೇನೆ ಎಂದು ಸ್ಪಷ್ಟಡಿಸಿದ್ದಾರೆ.

ಇದನ್ನೂ ಓದಿ: ನಿಮ್ಮಲ್ಲಿ ನರ್ಸ್‌ಗಳು ಚೆಂದ ಚೆಂದ ಹುಡುಗಿಯರು ಇದ್ದಾರೆ: ಕಾಂಗ್ರೆಸ್​ ಶಾಸಕನ ಮಾತು ವೈರಲ್

ನಿನ್ನೆ ಸಮಾರಂಭದಲ್ಲಿ ಮಾತನಾಡಿದ್ದು ಯಾರನ್ನೂ ಉದ್ದೇಶಿಸಿ ಅಲ್ಲ. ನಾನೇನೂ ನಾಲ್ಕು ಗೋಡೆಯಲ್ಲಿ ಮಾತನಾಡಿಲ್ಲ, ಸಾವಿರಾರು ಜನರಿದ್ದ ಸಭೆಯಲ್ಲಿ ಮಾತನಾಡಿದ್ದೇನೆ. ನಾನು ಜವಾಬ್ದಾರಿಯಿಂದ ಮಾತನಾಡಿದ್ದೇನೆ. ನಾನು ಹೇಳಿದ್ದು ವಯಸ್ಸು ಆಯ್ತಲ್ಲ, ಮುದುಕನಾದನಲ್ಲ ಎಂದು ಮನಸ್ಸಿಗೆ ನೋವಾಯ್ತು ಎಂದು ಹೇಳಿದೆ. ಶಬ್ದದ ಅರ್ಥ ಸಾವಿರಾರೂ ನಮೂನೆ ನೀವು ಅರ್ಥ ಮಾಡಿಕೊಳ್ಳಬಹುದು. ನನಗೆ ವಯಸ್ಸಾಯ್ತು ಅಂತಾ ಮಾನಸಿಕ ನೋವಾಯ್ತು. ಏಮಾದರೂ ನನ್ನ ಮಾತಿನಿಂದ ನೋವಾಗಿದ್ರೆ ಕ್ಷಮೆ ಕೇಳುತ್ತಿದ್ದೇನೆ. ಯಾವುದೇ ಉದ್ದೇಶದಿಂದ ನಾನು ಮಾತನಾಡಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿದ್ದು ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

ನರ್ಸ್​ ಬಗ್ಗೆ ರಾಜು ಕಾಗೆ ಹೇಳಿದ್ದೇನು?

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಪಿ.ಕೆ.ನಾಗನೂರು ಗ್ರಾಮದಲ್ಲಿ ದಸರಾ ಮಹೋತ್ಸವದಲ್ಲಿ ಭಾಷಣ ಮಾಡಿದ್ದ ರಾಜು ಕಾಗೆ, ಲೀವರ್ ಟ್ರಾನ್ಸಫರಂಟ್ ಆದಾಗ ಒಂದು ತಿಂಗಳು ಆಸ್ಪತ್ರೆಯಲ್ಲಿದ್ದೆ. ವೈದ್ಯರು ದಿನವೂ ಬಂದು ಹೇಗಿದ್ದೀರಿ ಎಂದು ಕೇಳೋರು. ಆಗ ಆಸ್ಪತ್ರೆಯಲ್ಲಿ ಇದ್ದ ಡಾಕ್ಟರ್‌ಗೆ ನಾನು ಹೇಳಿದ್ದೆ. ನನ್ನ ಆರೋಗ್ಯಕ್ಕೆ ಏನು ಆಗಿಲ್ಲರಿ. ನನ್ನ ಆಪರೇಷನ್ ಸಕ್ಸಸ್ ಮಾಡೀರಿ, ಎಲ್ಲಾ ಆಗೇತಿ. ಆದ್ರೆ ನಿಮ್ಮಲ್ಲಿ ನರ್ಸ್‌ಗಳು ಚೆಂದ ಚೆಂದ ಹುಡುಗಿಯರು ಇದ್ದಾರೆ. ಅವರು ನನಗೆ ಅಜ್ಜ ಅನ್ನುತ್ತಿದ್ದಾರೆ ಅದು ನನಗೆ ಮಾನಸಿಕ ಆಗಿದೆ ಎಂದಿದ್ದೆ ಎಂದು ಶಾಸಕ ರಾಜು ಕಾಗೆ ಹೇಳಿದ್ದರು. ಈ ವಿಡಿಯೋ ಭಾರೀ ವೈರಲ್ ಆಗಿ ವಿವಾದಕ್ಕೀಡಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:52 am, Mon, 23 October 23

ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ