
ಬೆಳಗಾವಿ, ನವೆಂಬರ್ 12: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಮುನ್ನೆಲೆಗೆ ಬಂದಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಈ ಬಗ್ಗೆ ಶಾಸಕ ರಾಜು ಕಾಗೆ ಪತ್ರ ಬರೆದಿದ್ದಾರೆ. ರಾಜು ಕಾಗೆ ಪತ್ರದ ಬೆನ್ನಲ್ಲೇ ಉತ್ತರ ಕರ್ನಾಟಕ ಹೋರಾಟ ಸಮಿತಿ, ಉತ್ತರ ಕರ್ನಾಟಕ ವಿಕಾಸ ವೇದಿಕೆಯಿಂದ ಮೂರು ಬೇಡಿಕೆಗಳಿಗೆ ಆಗ್ರಹ ವ್ಯಕ್ತವಾಗಿದೆ. ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಇವನ್ನು ಈಡೇರಿಸದಿದ್ದರೆ ಸುವರ್ಣ ವಿಧಾನಸೌಧದ ಮೇಲೆ ಪ್ರತ್ಯೇಕ ರಾಜ್ಯದ ಧ್ವಜಾರೋಹಣ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ: ಕೆಎಸ್ಆರ್ಟಿಸಿಯ ಈ ಬಸ್ನಲ್ಲಿ ಇಂದಿನಿಂದ ಸಿಗುತ್ತೆ ನಂದಿನಿ ಸ್ನ್ಯಾಕ್ ಕಿಟ್!
ರಾಜ್ಯದಲ್ಲಿ 2.5 ಕೋಟಿ ಇದ್ದ ಜನಸಂಖ್ಯೆ 6.5 ಕೋಟಿ ಆಗಿದೆ. ಜನಸಂಖ್ಯೆ ಬೆಳೆದಂತೆ ರಾಜ್ಯವನ್ನು ಇಬ್ಭಾಗ ಮಾಡಬೇಕಿದೆ. ಕರ್ನಾಟಕದಲ್ಲಿ ಎರಡು, ಉತ್ತರಪ್ರದೇಶದಲ್ಲಿ ಐದು ರಾಜ್ಯಗಳು, ಮಹಾರಾಷ್ಟ್ರದಲ್ಲಿ ಹೊಸ ಮೂರು ರಾಜ್ಯಗಳು ಉದಯಿಸಲಿವೆ. ಇಡೀ ದೇಶದಲ್ಲಿ ಒಟ್ಟು 50 ರಾಜ್ಯಗಳು ನಿರ್ಮಾಣವಾಗಲಿದೆ. ಈ ಬಗ್ಗೆ ಪ್ರಧಾನಿಗಳು ಚಿಂತನೆ ನಡೆಸಿದ್ದಾರೆಂಬುದು ನನ್ನ ಅನಿಸಿಕೆ. ಉತ್ತರ ಕರ್ನಾಟಕದ ಭಾಗಕ್ಕೆ ಅನ್ಯಾಯವಾದಾಗ ಧ್ವನಿ ಎತ್ತಿದ್ದೇನೆ. ಆ ಭಾಗಕ್ಕೆ ಅನ್ಯಾಯವಾದರೆ ಮುಂದೆಯೂ ಧ್ವನಿ ಎತ್ತುತ್ತೇನೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಆಗಲಿ, ಅಭಿವೃದ್ಧಿಯೂ ಆಗಲಿ ಎಂದು ಈ ಹಿಂದೆ ಉಮೇಶ್ ಕತ್ತಿ ಹೇಳಿದ್ದರು. ಈ ವಿಷಯ ಆ ವೇಳೆ ಭಾರಿ ಚರ್ಚೆಗೆ ಗ್ರಾಸವಾಗಿತ್ತು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:57 am, Wed, 12 November 25