AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಕಾಮಗಾರಿ ಮಾಡಿದ್ರೂ ಬಿಲ್ ಇಲ್ಲ, ಎಕ್ಸಿಕ್ಯೂಟಿವ್ ಇಂಜಿನಿಯರ್ ಮುಂದೆ ವಿಷ ಸೇವಿಸಿದ ಗುತ್ತಿಗೆದಾರ

ಗುತ್ತಿಗೆದಾರ ನಾಗಪ್ಪ ಬಂಗಿ ಎನ್ನುವವರು ಬೆಳಗಾವಿಯ ಕೋಟೆ ಆವರಣದಲ್ಲಿರುವ ಕಚೇರಿ ಬಳಿ ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ್​​ ಇಂಜಿನಿಯರ್ S.S.ಸೊಬರದ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಸಿದ್ದಾರೆ. ಸದ್ಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೆಳಗಾವಿ: ಕಾಮಗಾರಿ ಮಾಡಿದ್ರೂ  ಬಿಲ್ ಇಲ್ಲ, ಎಕ್ಸಿಕ್ಯೂಟಿವ್ ಇಂಜಿನಿಯರ್ ಮುಂದೆ ವಿಷ ಸೇವಿಸಿದ ಗುತ್ತಿಗೆದಾರ
ವಿಷ ಸೇವಿಸಿದ ಗುತ್ತಿಗೆದಾರ ನಾಗಪ್ಪ ಬಂಗಿ
ಸಹದೇವ್​ ಮಾನೆ
| Edited By: ಆಯೇಷಾ ಬಾನು|

Updated on: Oct 11, 2023 | 12:54 PM

Share

ಬೆಳಗಾವಿ, ಅ.11: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ತವರು ಜಿಲ್ಲೆಯಲ್ಲಿ ಗುತ್ತಿಗೆದಾರರಿಗೆ ಸಂಕಷ್ಟ ಎದುರಾಗಿದೆ. ವರ್ಕ್ ಆರ್ಡರ್ ಪಡೆದು ಕಾಮಗಾರಿ ಮಾಡಿದರೂ ಬಿಲ್ ಆಗುತ್ತಿಲ್ಲ. ಕಳೆದ ಒಂದು ವರ್ಷದಿಂದ ಕಚೇರಿಗೆ ಅಲೆದು ಅಲೆದು ಸುಸ್ತಾಗಿದೆ ಎಂದು ಗುತ್ತಿಗೆದಾರರೊಬ್ಬರು ಅಧಿಕಾರಿಗಳ ಮುಂದೆಯೇ ಬೇಸತ್ತು ವಿಷ (Poison) ಸೇವಿಸಿದ್ದಾರೆ. ಗುತ್ತಿಗೆದಾರ ನಾಗಪ್ಪ ಬಂಗಿ ಎನ್ನುವವರು ಬೆಳಗಾವಿಯ ಕೋಟೆ ಆವರಣದಲ್ಲಿರುವ ಕಚೇರಿ ಬಳಿ ಲೋಕೋಪಯೋಗಿ ಇಲಾಖೆ (Public Works Department) ಎಕ್ಸಿಕ್ಯೂಟಿವ್​​ ಇಂಜಿನಿಯರ್ S.S.ಸೊಬರದ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಸಿದ್ದಾರೆ. ಸದ್ಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ರಸ್ತೆ ನಿರ್ವಹಣೆ ಬಿಲ್ ಮಂಜೂರು ಮಾಡದ ಹಿನ್ನೆಲೆ ಗುತ್ತಿಗೆದಾರ ನಾಗಪ್ಪ ಬಂಗಿ ಆತ್ಮಹತ್ಯೆಗೆ ಯತ್ನಿಸಿದ್ದು ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇಂದು ವಿಷದ ಬಾಟಲ್ ಜೊತೆಗೆ ಲೋಕೋಪಯೋಗಿ ಇಲಾಖೆ ಕಚೇರಿ ಬಳಿ ಬಂದಿದ್ದ ನಾಗಪ್ಪ ಬಂಗಿ ಅವರು ಬೇಜವಾಬ್ದಾರಿ ತೋರಿದ ಅಧಿಕಾರಿಗಳು ಬರದಿದ್ರೇ ವಿಷ ಕುಡಿಯುವುದಾಗಿ ಎಚ್ಚರಿಕೆ ನೀಡಿದ್ದರು. ಕುಟುಂಬ ಸಮೇತ ಆಗಮಿಸಿ ಕಚೇರಿ ಮುಂದೆ ಧರಣಿ ಕುಳಿತಿದ್ದರು. ಅಧಿಕಾರಿಗಳಿಂದ ಸ್ಪಂದನೆ ಸಿಗದ ಕಾರಣ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೇಕಾಬಿಟ್ಟಿಯಾಗಿ ಕೆಲಸ, ತಾರಕಕ್ಕೇರಿದ ಸಚಿವ-ಬಿಜೆಪಿ ಶಾಸಕ ನಡುವಿನ ಫೈಟ್ -ಮುಂದೇನು? 

ನಾಗಪ್ಪ ಅವರು 2022ರಲ್ಲಿ ಹಲಗಾ ಗ್ರಾಮದಿಂದ ತಿಗಡಿ ಗ್ರಾಮದ ವರೆಗೆ ರಸ್ತೆ ಮಾಡಿದ್ದರು. ಇಲಾಖೆಯು ನಿರ್ಮಿಸಿದ್ದ ರಸ್ತೆ ನಿರ್ವಹಣೆಗೆ ವರ್ಕ್ ಆರ್ಡರ್ ಕೊಟ್ಟಿತ್ತು. 6 ಲಕ್ಷ 50 ಸಾವಿರ ವೆಚ್ಚದಲ್ಲಿ ಈಗಾಗಲೇ ಕಾಮಗಾರಿ ಮುಗಿಸಿದ್ದು ಕಾಮಗಾರಿ ಮುಗಿದರೂ ಬಿಲ್ ನೀಡದೆ ಅಧಿಕಾರಿಗಳು ಸತಾಯಿಸುತ್ತಿರುವ ಹಿನ್ನೆಲೆ ಎಇಇ ರಾಮೇಶ್ ಹೆಗಡೆ, ಎಇಇ ಬಸವರಾಜ್ ಹಲಗಿ ವಿರುದ್ಧ ಆಕ್ರೋಶ ಹೊರ ಹಾಕಿ ವಿಷ ಸೇವಿಸಿದ್ದಾರೆ. ಬಿಲ್ ಕೊಡಿ ಇಲ್ಲವಾದ್ರೇ ಕುಟುಂಬ ಸಮೇತ ಕಚೇರಿ ಎದುರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅಧಿಕಾರಿಗಳಿಗೆ ಗುತ್ತಿಗೆದಾರ ನಾಗಪ್ಪ ಬಂಗಿ ಮನವಿ ಮಾಡಿದ್ದರು. ಈ ಹಿಂದೆ ಬಿಲ್ ಮಂಜೂರು ಮಾಡದಿದ್ದಕ್ಕೆ ಸಂತೋಷ ಪಾಟೀಲ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದ. ಇದೀಗ ಜಿಲ್ಲೆಯಲ್ಲಿ ಮತ್ತೊಬ್ಬ ಗುತ್ತಿಗೆದಾರ ಸಂಕಷ್ಟದಲ್ಲಿದ್ದಾರೆ.

ಬೆಳಗಾವಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ