AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಕೇಸ್​ಗೆ ಮತ್ತೊಂದು ಟ್ವಿಸ್ಟ್; ಉಡುಪಿ ಪೊಲೀಸರ ತನಿಖೆ ವೇಳೆ ಮಹತ್ವದ ಮಾಹಿತಿ ಲಭ್ಯ

ಸಂತೋಷ್ ಪಾಟೀಲ್ ಕುಟುಂಬಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಜಿಪಿಎ ಅಷ್ಟೇ ಅಲ್ಲಾ ಬೇರೆ ಎಲ್ಲಾ ಮಾಹಿತಿ ನಮ್ಮ ಬಳಿ ಇದೆ ಅಂತ ತಿಳಿಸಿದ್ದಾರೆ. ಸಬ್ ರಿಜಿಸ್ಟ್ರಾರ್ ಕಚೇರಿಗೆ ಸಂತೋಷ್ ಕರೆದೊಯ್ದಿರುವುದು

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಕೇಸ್​ಗೆ ಮತ್ತೊಂದು ಟ್ವಿಸ್ಟ್; ಉಡುಪಿ ಪೊಲೀಸರ ತನಿಖೆ ವೇಳೆ ಮಹತ್ವದ ಮಾಹಿತಿ ಲಭ್ಯ
ಸಂತೋಷ್ ಪಾಟೀಲ್ (ಸಂಗ್ರಹ ಚಿತ್ರ)
TV9 Web
| Updated By: sandhya thejappa|

Updated on:Apr 20, 2022 | 10:26 AM

Share

ಬೆಳಗಾವಿ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ (Suicide) ಕೇಸ್​ಗೆ ಮತ್ತೊಂದು ಟ್ವಿಸ್ಟ್ (Twist) ಸಿಕ್ಕಿದೆ. ಹಿಂಡಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಮನ್ನೋಳ್ಕರ್ ಅವರು ಸಂತೋಷ್ ಪಾಟೀಲ್ ಮನೆಯನ್ನ ಜಿಪಿಎ (GPA) ಮಾಡಿಸಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಉಡುಪಿ ಪೊಲೀಸರ ತನಿಖೆಯ ವೇಳೆ ಮಾಹಿತಿ ಲಭ್ಯವಾಗಿದೆ. 40 ಲಕ್ಷಕ್ಕೆ ಜಿಪಿಎ ಮಾಡಿಸಿಕೊಂಡ ಬಗ್ಗೆ ಪೊಲೀಸರಿಗೆ ದಾಖಲೆ ಸಿಕ್ಕಿದೆ. ಈ ಬಗ್ಗೆ ಹೇಳಿಕೆ ನೀಡಿರುವ ನಾಗೇಶ್ ಮನ್ನೋಳ್ಕರ್, ಕಾಮಗಾರಿ ವ್ಯವಹಾರಕ್ಕೂ ಮನೆ ಜಿಪಿಎ ವಿಚಾರಕ್ಕೂ ಸಂಬಂಧವಿಲ್ಲ ಎಂದಿದ್ದಾರೆ.

ಮತ್ತೊಂದೆಡೆ ಸಂತೋಷ್ ಪಾಟೀಲ್ ಕುಟುಂಬಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಜಿಪಿಎ ಅಷ್ಟೇ ಅಲ್ಲಾ ಬೇರೆ ಎಲ್ಲಾ ಮಾಹಿತಿ ನಮ್ಮ ಬಳಿ ಇದೆ ಅಂತ ತಿಳಿಸಿದ್ದಾರೆ. ಸಬ್ ರಿಜಿಸ್ಟ್ರಾರ್ ಕಚೇರಿಗೆ ಸಂತೋಷ್ ಕರೆದೊಯ್ದಿರುವುದು. ನೋಂದಣಿ ಮಾಡಿಸಿಕೊಂಡ ದಾಖಲೆಗಳು ನಮ್ಮ ಬಳಿ ಇವೆ. ಯಾವ ಆಸ್ತಿಯನ್ನು ನೋಂದಣಿ ಮಾಡಿಸಿಕೊಂಡಿದ್ದಾರೆಂದು ಗೊತ್ತಿದೆ. ಸರ್ಕಾರ ಏನು ಮಾಡುತ್ತೋ ಮಾಡಲಿ, ಆಮೇಲೆ ಮಾತಾಡುತ್ತೇವೆ ಅಂತ ಡಿಕೆಶಿ ಹೇಳಿದ್ದಾರೆ.

ಹಿಂಡಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಮನ್ನೋಳಕರ್ ನೇತೃತ್ವದಲ್ಲಿ ಈಚೆಗೆ ಉಪಗುತ್ತಿಗೆದಾರರು ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದರು. ಉಡುಪಿ ಪೊಲೀಸರ ವಿಚಾರಣೆಗೆ ಹಾಜರಾಗದ ಇವರು ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ಸಂತೋಷ್ ಪಾಟೀಲ ಹಲವು ಕಾಮಗಾರಿಗಳನ್ನು ಮಾಡಿಸಿದ್ದರು.

ಕಾಮಗಾರಿ ಮಂಜೂರಾತಿ ಪಡೆಯುವ ವೇಳೆ ರಮೇಶ್ ಜಾರಕಿಹೊಳಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಮನ್ನೋಳಕರ್ ಲೆಟರ್ ಹೆಡ್ ಮೂಲಕವೇ ಮೃತ ಸಂತೋಷ್ ಪಾಟೀಲ ಕಾಮಗಾರಿಯ ವಿವರಗಳನ್ನು ಈಶ್ವರಪ್ಪ ಅವರಿಗೆ ಒದಗಿಸಿ, ಅನುದಾನ ಬಿಡುಗಡೆಗೆ ಮನವಿ ಮಾಡಿದ್ದರು. ಆಗ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಈಶ್ವರಪ್ಪ ಮೌಖಿಕ ಸೂಚನೆ ಮೇರೆಗೆ ₹ 4.12 ಕೋಟಿ ವೆಚ್ಚದಲ್ಲಿ 108 ಕಾಮಗಾರಿ ಮಾಡಿಸಿದ್ದೇನೆ ಎಂದು ಸಂತೋಷ ಪಾಟೀಲ್ ಹೇಳಿದ್ದರು.

ಇದನ್ನೂ ಓದಿ

‘ಡಾನ್ಸಿಂಗ್​ ಚಾಂಪಿಯನ್​’ ಶೋ​ ನಡುವೆ ಮೇಘನಾ ರಾಜ್​ ಫೋಟೋಶೂಟ್​; ಇಲ್ಲಿವೆ ಚೆಂದದ ಫೋಟೋಗಳು

‘ಕೆಜಿಎಫ್​ 2’ನಲ್ಲಿ ರವೀನಾ ಟಂಡನ್​ ಕಂಡು ಥಿಯೇಟರ್​ ಪರದೆಗೆ ದುಡ್ಡು ಎಸೆದ ಫ್ಯಾನ್ಸ್​; ವಿಡಿಯೋ ಹಂಚಿಕೊಂಡ ನಟಿ

Published On - 10:24 am, Wed, 20 April 22