Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಮುರುಗೇಶ್ ನಿರಾಣಿ ಭೇಟಿ ಬಳಿಕ ಮೃದುವಾದ ಸಂತೋಷ್ ಕುಟುಂಬಸ್ಥರು, ಸಂತೋಷ್ ಸಾವು ವಿಧಿಲಿಖಿತ ಎಂದ ಸೋದರ ಪ್ರಶಾಂತ್

Minister Murugesh Nirani: ಸಂತೋಷ್ ಕುಟುಂಬಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವುದಾಗಿ ಬಿಜೆಪಿ ವರಿಷ್ಠರು ಭರವಸೆ ನೀಡಿದ್ದಾರೆ.  ಸರ್ಕಾರ ನಮ್ಮ ಪರ ಇರುವುದಾಗಿ ಸಚಿವ ನಿರಾಣಿ ತಿಳಿಸಿದ್ದಾರೆ. ನಿನ್ನೆ ನಮ್ಮ ಮನೆಗೆ ಭೇಟಿ ನೀಡಿದ್ದ ವೇಳೆ ಇದನ್ನ ತಿಳಿಸಿದ್ದಾರೆ. ನಮಗೆ ಎಲ್ಲಾ ಕೆಲಸ ಮಾಡಿಕೊಡುವುದಾಗಿ ಹೇಳಿದ್ದಾರೆ ಎಂದು ಮೃತ ಸಂತೋಷ್ ಸೋದರ ಪ್ರಶಾಂತ್ ತಿಳಿಸಿದ್ದಾರೆ.

ಸಚಿವ ಮುರುಗೇಶ್ ನಿರಾಣಿ ಭೇಟಿ ಬಳಿಕ ಮೃದುವಾದ ಸಂತೋಷ್ ಕುಟುಂಬಸ್ಥರು, ಸಂತೋಷ್ ಸಾವು ವಿಧಿಲಿಖಿತ ಎಂದ ಸೋದರ ಪ್ರಶಾಂತ್
ಮಾಜಿ ಸಚಿವ ಕೆಎಸ್ ಈಶ್ವರಪ್ಪ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Apr 15, 2022 | 1:52 PM

ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ (Contractor Santosh suicide) ಸಬಂಧಪಟ್ಟಂತೆ ಗುರುವಾರ ಸಂಜೆ ನಡೆದ ಕ್ಷಿಪ್ರ ಬೆಳವಣಿಗೆಗಳಲ್ಲಿ ಪ್ರಕರಣದ ಪ್ರಥಮ ಆರೋಪಿ, ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್​ ಈಶ್ವರಪ್ಪ ಅವರು ತಮ್ಮ ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದಾರೆ (KS Eshwarappa Resignation). ಅತ್ತ ಈಶ್ವರಪ್ಪ ಅವರಿಂದ ರಾಜೀನಾಮೆ ನಿರ್ಧಾರ ಹೊರಬೀಳುತ್ತಿದ್ದಂತೆ ಇತ್ತ ಗಣಿ ಸಚಿವ ಮುರುಗೇಶ್​ ನಿರಾಣಿ (Minister Murugesh Nirani) ಅವರು ಬೆಳಗಾವಿಯಲ್ಲಿ ಸಂತೋಷ್ ಪಾಟೀಲ್ ನಿವಾಸಕ್ಕೆ ತೆರಳಿ, ಕುಟುಂಬಸ್ಥರನ್ನುಸಂತೈಸಿದ್ದಾರೆ. ಆ ವೇಳೆ ಸರ್ಕಾರದ ವತಿಯಿಂದ ಮೃತ ಸಂತೋಷ್ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ಮತ್ತು ಬಾಕಿಯಿರುವ ಕಾಮಗಾರಿ ಯೋಜನಾ ಮೊತ್ತವನ್ನು ಪಾವತಸುವ ಭರವಸೆ ನೀಡಿದ್ದಾರೆ. ಜೊತೆಗೆ ವೈಯಕ್ತಿವಾಗಿ ಕುಟುಂಬಕ್ಕೆ 5 ಲಕ್ಷ ರೂಪಾಯಿ ಹಣವನ್ನೂ ನೀಡಿದ್ದಾರೆ. ಈ ಬೆಳವಣಿಗೆಗಳ ತರುವಾಯ ಸಂತೋಷ್ ಕುಟುಂಬಸ್ಥರು ತಮ್ಮಪಟ್ಟನ್ನು ಸಡಿಲಿಸಿದ್ದು, ಸರ್ಕಾರದ ಬಗ್ಗೆ ಮೃಧು ಧೋರಣೆ ತಳೆದಂತೆ ಕಂಡುಬಂದಿದ್ದಾರೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ತಿಥಿ ಕಾರ್ಯದ ಬಳಿಕ ಬೆಳಗಾವಿ ತಾಲೂಕಿನ ಬಡಸ ಗ್ರಾಮದಲ್ಲಿಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರ ಸೋದರ, ದೊಡ್ಡಪ್ಪನ ಮಗ ಪ್ರಶಾಂತ್ ಅವರು ಸಂತೋಷ್ ಆತ್ಮಹತ್ಯೆ ವಿಧಿಲಿಖಿತವೆಂದು ಹೇಳಿದ್ದಾರೆ. ಜೊತೆಗೆ ಕೆ.ಎಸ್. ಈಶ್ವರಪ್ಪ ಬಂಧಿಸುವುದು ಇಲಾಖೆಗೆ ಬಿಟ್ಟಿದ್ದು. ನಾವು ಈಗ ದೂರು ನೀಡಿದ್ದೇವೆ ತನಿಖೆ ನಡೆಯುತ್ತಿದೆ. ಇಲಾಖೆಯಿಂದ ಏನು ಕ್ರಮವಾಗತ್ತೋ ಅವರಿಗೆ ಬಿಟ್ಟಿದ್ದು. ಪೊಲೀಸರು ಮತ್ತು ಸರ್ಕಾರ ಅದನ್ನು ನೋಡಿಕೊಳ್ಳುತ್ತದೆ ಅಂದಿದ್ದಾರೆ.

ಸಂತೋಷ್ ಕುಟುಂಬಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವುದಾಗಿ ಬಿಜೆಪಿ ವರಿಷ್ಠರು ಭರವಸೆ ನೀಡಿದ್ದಾರೆ. ಸಂತೋಷ್ ಪತ್ನಿಗೆ ಸರ್ಕಾರಿ ನೌಕರಿ ಕೊಡುವ ಭರವಸೆ ನೀಡಿದ್ದಾರೆ. ಕಾಮಗಾರಿಗೆ ಅನುಮೋದನೆ ನೀಡಿ ಬಿಲ್ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಬಿಲ್ ಬಿಡುಗಡೆ ಮಾಡುವ ಆಶ್ವಾಸನೆಯನ್ನು ಕೊಟ್ಟಿದ್ದಾರೆ. ಸರ್ಕಾರ ನಮ್ಮ ಪರ ಇರುವುದಾಗಿ ಸಚಿವ ನಿರಾಣಿ ತಿಳಿಸಿದ್ದಾರೆ. ನಿನ್ನೆ ನಮ್ಮ ಮನೆಗೆ ಭೇಟಿ ನೀಡಿದ್ದ ವೇಳೆ ಇದನ್ನ ತಿಳಿಸಿದ್ದಾರೆ. ನಮಗೆ ಎಲ್ಲಾ ಕೆಲಸ ಮಾಡಿಕೊಡುವುದಾಗಿ ಹೇಳಿದ್ದಾರೆ ಎಂದು ಪ್ರಶಾಂತ್ ತಿಳಿಸಿದ್ದಾರೆ.

ಸಾಫ್ಟ್ ಆದ್ರಾ ಸಂತೋಷ್ ಪಾಟೀಲ್ ಸಹೋದರ.. ಈಶ್ವರಪ್ಪ ಬಂಧನ ಅವರಿಗೆ ಬಿಟ್ಟಿದ್ದು ಅಂದ್ರು

ಇದೂ ಓದಿ: ಸಂತೋಷ್‌ ಮನೆಗೆ ಸಚಿವ ನಿರಾಣಿ ಭೇಟಿ: ಪತ್ನಿಗೆ ನೌಕರಿ, ಕಾಮಗಾರಿ ಬಾಕಿ ಬಿಲ್ ಬಿಡುಗಡೆಗೆ ಸರ್ಕಾರದಿಂದ ಕ್ರಮದ ಭರವಸೆ

Published On - 1:39 pm, Fri, 15 April 22

ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ