AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಸುವರ್ಣಸೌಧದಲ್ಲಿ ಶಾವಿಗೆ ಒಣಗಿಹಾಕಿದ್ದ ಕಾರ್ಮಿಕ ಮಹಿಳೆ ಗುತ್ತಿಗೆಯಿಂದ ವಜಾ; ಗುತ್ತಿಗೆದಾರನಿಗೆ ಲೋಕೋಪಯೋಗಿ ಇಲಾಖೆಯಿಂದ ನೋಟಿಸ್ ಜಾರಿ

ದಿನಗೂಲಿ ಆಧಾರದ ಮೇಲೆ ಸ್ವಚ್ಛತಾ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಿಳೆಯನ್ನು ಗುತ್ತಿಗೆದಾರ ಕೆಲಸದಿಂದ ವಜಾ ಮಾಡಿದ್ದಾರೆ. ಅಚಾತುರ್ಯದಿಂದ ಘಟನೆ ನಡೆದಿದೆ ಎಂದು ಸಮಜಾಯಿಷಿ ನೀಡಿದ್ದು. ಘಟನೆ ಮರುಕಳಿಸಿದಂತೆ ಎಲ್ಲಾ ಗುತ್ತಿಗೆದಾರರಿಗೂ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಯಿಂದ ನೋಟಿಸ್ ಕಳಿಸಲಾಗಿದೆ.

ಬೆಳಗಾವಿ ಸುವರ್ಣಸೌಧದಲ್ಲಿ ಶಾವಿಗೆ ಒಣಗಿಹಾಕಿದ್ದ ಕಾರ್ಮಿಕ ಮಹಿಳೆ ಗುತ್ತಿಗೆಯಿಂದ ವಜಾ; ಗುತ್ತಿಗೆದಾರನಿಗೆ ಲೋಕೋಪಯೋಗಿ ಇಲಾಖೆಯಿಂದ ನೋಟಿಸ್ ಜಾರಿ
ಸುವರ್ಣಾಸೌಧದ ಮುಖ್ಯ ದ್ವಾರದ ಮುಂದೆ ಶಾವಿಗೆ ಒಣಹಾಕಿರುವುದು.
TV9 Web
| Updated By: ಆಯೇಷಾ ಬಾನು|

Updated on:Jun 01, 2022 | 4:14 PM

Share

ಬೆಳಗಾವಿ: ಜಿಲ್ಲೆಯ ಸುವರ್ಣಾಸೌಧದ ಮುಖ್ಯ ದ್ವಾರದ ಮೆಟ್ಟಿಲುಗಳ ಮೇಲೆ ಶಾವಿಗೆ ಒಣಗಿಸಲು ಹಾಕಿರುವ ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿ ಗುತ್ತಿಗೆದಾರನಿಗೆ ಲೋಕೋಪಯೋಗಿ ಇಲಾಖೆಯಿಂದ ನೋಟಿಸ್ ಕಳಿಸಲಾಗಿದೆ. ಸ್ವಚ್ಛತಾ ಕಾರ್ಯ ಗುತ್ತಿಗೆ ಪಡೆದಿದ್ದ ಗುತ್ತಿಗೆದಾರನಿಗೆ ಇಲಾಖೆ ನೋಟಿಸ್ ಕಳಿಸಿದ್ದು ಕೊಂಡಸಕೊಪ್ಪ ಗ್ರಾಮದ ಕಾರ್ಮಿಕ ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

ದಿನಗೂಲಿ ಆಧಾರದ ಮೇಲೆ ಸ್ವಚ್ಛತಾ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಿಳೆಯನ್ನು ಗುತ್ತಿಗೆದಾರ ಕೆಲಸದಿಂದ ವಜಾ ಮಾಡಿದ್ದಾರೆ. ಅಚಾತುರ್ಯದಿಂದ ಘಟನೆ ನಡೆದಿದೆ ಎಂದು ಸಮಜಾಯಿಷಿ ನೀಡಿದ್ದು. ಘಟನೆ ಮರುಕಳಿಸಿದಂತೆ ಎಲ್ಲಾ ಗುತ್ತಿಗೆದಾರರಿಗೂ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಯಿಂದ ನೋಟಿಸ್ ಕಳಿಸಲಾಗಿದೆ. ನೋಟಿಸ್ ನೀಡಿದ ಬಗ್ಗೆ ಬೆಳಗಾವಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌ಗೆ ಪತ್ರದ ಮೂಲಕ ಮಾಹಿತಿ ನೀಡಲಾಗಿದೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ಜೆಡಿಎಸ್ ನಿಯೋಗದಿಂದ ಸಿದ್ದರಾಮಯ್ಯ ಭೇಟಿ

ಘಟನೆ ಹಿನ್ನೆಲೆ ಓರ್ವ ಕಾರ್ಮಿಕ ಮಹಿಳೆಗೆ ಸಾಂಬ್ರಾ ಮೂಲದ ಕಾರ್ಮಿಕ ಮಹಿಳೆ ಶಾವಿಗೆ ತಂದು ಕೊಟ್ಟಿದ್ದರು. ಶಾವಿಗೆ ಹಸಿ ಇದ್ದವು ಎಂಬ ಕಾರಣಕ್ಕೆ ಸೀರೆ ಹಾಸಿ ಮಹಿಳೆ ಶಾವಿಗೆ ಒಣಹಾಕಿದ್ದಾರೆ. ಮಧ್ಯಾಹ್ನ ಪೆಟ್ರೋಲಿಂಗ್ ವೇಳೆ ಶಾವಿಗೆ ಒಣಹಾಕಿದ್ದನ್ನು ಭದ್ರತಾ ಸಿಬ್ಬಂದಿ ಗಮನಿಸಿದ್ದಾರೆ. ತಕ್ಷಣ ಶಾವಿಗೆ ತೆರವುಗೊಳಿಸಿ ಕಾರ್ಮಿಕ ಮಹಿಳೆಯರಿಗೆ ತರಾಟೆ ತೆಗೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಪೋಟೋಗಳು ವೈರಲ್ ಆಗುತ್ತಿದ್ದಂತೆ ಸಾಕಷ್ಟು ಜನರು ಟೀಕೆ ಟಿಪ್ಪಣಿ ಮಾಡಿದ್ದಾರೆ. ಚಳಿಗಾಲ ಅಧಿವೇಶನಕ್ಕಾಗಿ ತಯಾರಿ ನಡೆಸುವ ಮುಂಚಿತವಾಗಿಯೇ ಸಂಡಿಗೆ, ಹಪ್ಪಳ ಒಣಗಿಸಲಾಗುತ್ತಿದೆ ಎಂದು ಕೆಲವರು ಹಾಸ್ಯಮಯವಾಗಿ ಟ್ವೀಟ್ ಮಾಡಿದ್ದಾರೆ. ಇನ್ನೂ ಕೆಲವರು ಸರ್ಕಾರ ಇಲ್ಲಿ ಸಂಡಿಗೆ, ಹಪ್ಪಳ ಮೇಳ ಹಮ್ಮಿಕೊಳ್ಳಲಿದೆ ಎಂದು ಕಮೆಂಟ್ ಮಾಡಿದ್ದಾರೆ. ಇದನ್ನೂ ಓದಿ: Theatre: ಅಂಕಪರದೆ: ‘ನಡುರಾತ್ರಿಯ ಪುಳಕ’ ನೋಡಲು ಜೂನ್ 1ಕ್ಕೆ ರಂಗಶಂಕರಕ್ಕೆ ಬನ್ನಿ

ಶ್ರಮಿಕ ವರ್ಗದವರಿಗೆ ಅವಮಾನಿಸುವ ಉದ್ದೇಶ ಇಲ್ಲ ಇನ್ನು ಶಾವಿಗೆ ಒಣ ಹಾಕಿದ ಮಹಿಳೆಯನ್ನ ಕೆಲಸದಿಂದ ವಜಾಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿ ಬೆಳಗಾವಿಯಲ್ಲಿ ಶಾಸಕ ಪಿ. ರಾಜೀವ್ ಪ್ರತಿಕ್ರಿಯಿಸಿದ್ದಾರೆ. ಶಾವಿಗೆ ಒಣ ಹಾಕಿದ ಶ್ರಮಿಕ ವರ್ಗದವರಿಗೆ ಅವಮಾನಿಸುವ ಯಾವ ಉದ್ದೇಶ ಇಲ್ಲ. ಅವರ ಕರ್ತವ್ಯವನ್ನು ಗೌರವಿಸುತ್ತೇನೆ. ಆದ್ರೆ ಆ ಸ್ಥಳ ಉಪಯೋಗಿಸುವುದು ಸೂಕ್ತವಲ್ಲ. ಉತ್ತರ ಕರ್ನಾಟಕ ಅಭಿವೃದ್ಧಿ ಹಾಗೂ ಆಡಳಿತ ಹಿಂದುಳಿದಿದೆ ಎಂಬ ಆರೋಪವಿದೆ. ಉತ್ತರ ಕರ್ನಾಟಕ ಅಭಿವದ್ಧಿಗೊಳಿಸುವ ಉದ್ದೇಶದಿಂದ ಸುವರ್ಣ ವಿಧಾನಸೌಧ ಕಟ್ಟಿದ್ದೇವೆ. ಸುವರ್ಣಸೌಧ ಸದ್ಭಳಿಕೆ ಆಗಬೇಕು ಕೆಲವೊಂದು ಇಲಾಖೆಗಳು ವರ್ಗಾವಣೆ ಮಾಡಿದ್ದೇವೆ. ಉಸ್ತುವಾರಿ ಹೊತ್ತಿರುವ ಅಧಿಕಾರಿಗಳು ಅದರ ಘನತೆ ಗೌರವ ಕಾಪಾಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳಿಗೆ ಮಾತನಾಡುತ್ತೇನೆ. ಯಾರನ್ನೋ ಒಬ್ಬರನ್ನು ಬಲಿ ಹಾಕಿ ರಕ್ಷಣೆ ಮಾಡಿಕೊಳ್ಳೋದು ತಪ್ಪು. ಕೊನೆಗೆ ಬಲಿ ಆದವರು ಬಡಪಾಯಿಗಳೇ ಅದು ಆಗಬಾರದು ಇದರ ಬಗ್ಗೆ ಮಾತನಾಡುತ್ತೇನೆ. ಇನ್ನು ಮುಂದೆ ಈ ತರ ಘಟನೆಗಳು ಆಗಬಾರದು ಇದು ಸದ್ಬಳಕೆ ಆಗಬೇಕು ಎಂದ ಹೇಳಿದ್ರು.

Published On - 3:16 pm, Wed, 1 June 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!