AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕ ಅಭಯ ಪಾಟೀಲ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಸ್: ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಕೋರಿ ಸ್ಪೀಕರ್​ಗೆ ಪತ್ರ

ಶಾಸಕ ಭ್ರಷ್ಟಾಚಾರ ಎಸಗಿದ್ದಾರೆ. ಅಪಾರ ಆಸ್ತಿ ಕಬಳಿಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಸುಜಿತ್​​ ಮುಳಗುಂದ 2012ರಲ್ಲಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಈ ಪ್ರಕರಣ 2017ರಲ್ಲಿ ಎಸಿಬಿಗೆ ವರ್ಗಾವಣೆಯಾಗಿತ್ತು.

ಬಿಜೆಪಿ ಶಾಸಕ ಅಭಯ ಪಾಟೀಲ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಸ್: ವಿಚಾರಣೆಗೆ ಒಳಪಡಿಸಲು  ಪೂರ್ವಾನುಮತಿ ಕೋರಿ ಸ್ಪೀಕರ್​ಗೆ ಪತ್ರ
ಬಿಜೆಪಿ ಶಾಸಕ ಅಭಯ ಪಾಟೀಲ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jun 30, 2022 | 1:44 PM

ಬೆಳಗಾವಿ: ದಕ್ಷಿಣ ಮತ ಕ್ಷೇತ್ರದ ಶಾಸಕ ಅಭಯ ಪಾಟೀಲ (MLA Abhay Patil) ಗೆ ಸದ್ಯ ಸಂಕಷ್ಟ ಎದುರಾಗಿದ್ದು, ಅವರ ವಿರುದ್ಧ ಮಾಡಲಾದ ಭ್ರಷ್ಟಾಚಾರ ಆರೋಪದ ಕುರಿತು ವಿಚಾರಣೆಗೆ ಎಸಿಬಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಎಸಿಬಿ ಡಿವೈಎಸ್‌ಪಿ ಜೆ.ಎಂ.ಕರುಣಾಕರ ಶೆಟ್ಟಿ ಈ ಹಿನ್ನೆಲೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಬಳಿ ಅನುಮತಿ ಕೋರಿ ಪತ್ರ ಬರೆದಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ತನಿಖೆ ಪೂರ್ಣಗೊಳಿಸಿದ್ದಾರೆ. ವಿಚಾರಣೆಗೆ ಒಳಪಡಿಸಲು ಎಸಿಬಿ ಡಿವೈಎಸ್‌ಪಿ ಜೆ.ಎಂ.ಕರುಣಾಕರ ಶೆಟ್ಟಿ ಅವರಿಂದ ಸ್ಪೀಕರ್‌ಗೆ ಪೂರ್ವಾನುಮತಿ ಪತ್ರ ಕೋರಲಾಗಿತ್ತು. ಜೂನ್ 20ರಂದು ಸ್ಪೀಕರ್ ಕಾಗೇರಿಗೆ ಅನುಮತಿ ಕೋರಿ ಪತ್ರ ನೀಡಲಾಗಿದ್ದು, ಶಾಸಕ ಅಭಯ ಪಾಟೀಲ್ ಅವರ ಮೇಲೆ ಭ್ರಷ್ಟಾಚಾರ ಆರೋಪದ ತನಿಖೆ ಪೂರ್ಣಗೊಂಡಿದೆ. ಅವರನ್ನು ವಿಚಾರಣೆಗೆ ಒಳಪಡಿಸಿ ಚಾರ್ಜ್ ಶೀಟ್ ಸಲ್ಲಿಸಲು ಅನುಮತಿ ನೀಡಬೇಕು ಎಂದು ಕೋರಿಕೆ ಪತ್ರದಲ್ಲಿ ಎಸಿಬಿ ಡಿವೈಎಸ್‌ಪಿ ಕರುಣಾಕರ ಶೆಟ್ಟಿ ಉಲ್ಲೇಖ ಮಾಡಿದ್ದಾರೆ.

ಏನಿದು ಪ್ರಕರಣ:

ಶಾಸಕ ಭ್ರಷ್ಟಾಚಾರ ಎಸಗಿದ್ದಾರೆ. ಅಪಾರ ಆಸ್ತಿ ಕಬಳಿಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಸುಜಿತ್​​ ಮುಳಗುಂದ 2012ರಲ್ಲಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಈ ಪ್ರಕರಣ 2017ರಲ್ಲಿ ಎಸಿಬಿಗೆ ವರ್ಗಾವಣೆಯಾಗಿತ್ತು. ತನಿಖಾಧಿಕಾರಿಗಳು ತಕ್ಷಣವೇ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಬೇಕು ಎಂದು ಹೈಕೋರ್ಟ್ ಎಸಿಬಿ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.

ಬಿಜೆಪಿ ಮುಖಂಡ ಕೆ.ಎನ್.ಚಕ್ರಪಾಣಿ ವಿರುದ್ಧ FIR ದಾಖಲು

ಬೆಂಗಳೂರು: ಹಲ್ಲೆ ಮತ್ತು ಅವಾಚ್ಯ ಶಬ್ಧಗಳಿಂದ ನಿಂದನೆ ಆರೋಪ ದಡಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರೊ ಪ್ರಭಾವಿ ಬಿಜೆಪಿ ಮುಖಂಡ ಕೆ.ಎನ್​​ ಚಕ್ರಪಾಣಿ ವಿರುದ್ಧ ಎಫ್​​ಐಆರ್​​​ (FIR) ದಾಖಲು ಮಾಡಲಾಗಿದೆ. ಶ್ರೀಧರ್ ಮೂರ್ತಿ ಎಂಬುವರಿಂದ ದೂರು ದಾಖಲು ಮಾಡಿದ್ದು, ಕೊಡಿಗೆಹಳ್ಳಿ‌ ವಿರೂಪಾಕ್ಷಪುರದ ಚಕ್ರಪಾಣಿ ಮನೆ ಎದುರಲ್ಲೆ ಶ್ರೀಧರ್ ಮೂರ್ತಿ ಅಪಾರ್ಟ್ಮೆಂಟ್ ಇದೆ. ಶ್ರೀಧರ್ ಮೂರ್ತಿ ಅಪಾರ್ಟ್ಮೆಂಟ್ ಗೇಟ್ ರಿಪೇರಿ ಮಾಡಿಸುತ್ತಿದ್ದು, ಆಗ 12 ಜನರ ಗ್ಯಾಂಗ್​ನೊಂದಿಗೆ ಚಕ್ರಪಾಣಿ ಎಂಟ್ರಿಯಾಗಿದ್ದಾರೆ. ಇಲ್ಲಿ ಕೆಲಸ ಮಾಡುವಂತಿಲ್ಲ ನಿಲ್ಲಿಸಬೇಕೆಂದು ಅವಾಜ್ ಹಾಕುವುದರೊಂದಿಗೆ ಶ್ರೀಧರ್ ಮೂರ್ತಿ ಮೇಲೆ ಹಲ್ಲೆ ಚಕ್ರಪಾಣಿ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಮುನಿರಾಜು ಸೇರಿ 12 ಜನರನ್ನ ಕರೆತಂದಿದ್ದ ಚಕ್ರಪಾಣಿ, ನಮ್ಮ ಮನೆ ಮುಂದೆ ನೀನು ಇರಬಾರದು. ಇದ್ರೆ ನಿನ್ನನ್ನು ಸುಮ್ಮನೆ ಬಿಡಲ್ಲ ಎಂದು ಜೀವ ಬೆದರಿಕೆ ಆರೋಪ ಮಾಡಲಾಗಿದೆ. ಕುಡಿದು ಬಂದಿದ್ದೀಯಾ ನಾಳೆ ಮಾತಾಡೋಣ ಎಂದು ಹೇಳಿದರು ಚಕ್ರಪಾಣಿ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಸೆಕ್ಷನ್ 143, 448, 323, 504, 506 ರಡಿ ಕೇಸ್ ದಾಖಲು ಮಾಡಲಾಗಿದೆ. ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಮಹಿಳೆಯ ಅಪಹರಿಸಿ, ಮಾನವ ಮಾಂಸವನ್ನು ಬೇಯಿಸಿ ತಿನ್ನುವಂತೆ ಹಿಂಸೆ ಕೊಟ್ಟ ಭಯೋತ್ಪಾದಕರು

ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ