AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಗಡಿಯಲ್ಲಿ ಹೈಅಲರ್ಟ್: ಶಬರಿಮಲೆ, ಮಹಾರಾಷ್ಟ್ರದಿಂದ ಬರುವವರಿಗೆ RTPCR ಟೆಸ್ಟ್​​​ ಕಡ್ಡಾಯ

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ ಹಿನ್ನಲೆ ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಮಹತ್ವದ ಸಭೆ ನಡೆದಿದ್ದು, ಮಹಾರಾಷ್ಟ್ರ ಕರ್ನಾಟಕ ಗಡಿಯಲ್ಲಿ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಚರ್ಚೆಯಾಗಿದೆ. ಈ ವೇಳೆ ಕೆಲ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಬೆಳಗಾವಿ ಗಡಿಯಲ್ಲಿ ಹೈಅಲರ್ಟ್: ಶಬರಿಮಲೆ, ಮಹಾರಾಷ್ಟ್ರದಿಂದ ಬರುವವರಿಗೆ RTPCR ಟೆಸ್ಟ್​​​ ಕಡ್ಡಾಯ
ಸಾಂದರ್ಭಿಕ ಚಿತ್ರ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ| Edited By: |

Updated on: Dec 21, 2023 | 3:24 PM

Share

ಬೆಳಗಾವಿ, (ಡಿಸೆಂಬರ್ 21): ಕರ್ನಾಟಕದಲ್ಲಿ ಮತ್ತೆ ಕೊರೋನಾ (Coronavirus) ಆತಂಕ ಶುರುವಾಗಿದ್ದು, ಆರೋಗ್ಯ ಇಲಾಖೆ ಹೈಅಲರ್ಟ್ ಆಗಿದೆ. ಇನ್ನು ಗಡಿ ಜಿಲ್ಲೆ ಬೆಳಗಾವಿಯಲ್ಲೂ (Belagavi) ಸಹ ಕಟ್ಟುನಿಟ್ಟಿನ ಕ್ರಮಕ್ಕೆ ಇಲ್ಲಿನ ಅಧಿಕಾರಿಗಳು ಮುಂದಾಗಿದ್ದಾರೆ. ಈ ಬಗ್ಗೆ ಇಂದು (ಡಿಸೆಂಬರ್ 21) ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಶಾಸಕ ಗಣೇಶ್​​ ಹುಕ್ಕೇರಿ ನೇತೃತ್ವದಲ್ಲಿ ಕೋವಿಡ್​​ ಸಭೆ ನಡೆದಿದ್ದು. ನೆಗಡಿ, ಕೆಮ್ಮು, ಜ್ವರದ ಲಕ್ಷಣ ಇದ್ದವರಿಗೆ ಆರ್​​ಟಿಪಿಸಿಆರ್​​​​ ಟೆಸ್ಟ್​​​ ಕಡ್ಡಾಯ ಹಾಗೂ ಕೇರಳದ ಶಬರಿಮಲೆಗೆ ತೆರಳಿದವರಿಗೂ ಕಡ್ಡಾಯವಾಗಿ ತಪಾಸಣೆ ಮಾಡುವಂತೆ ಸೂಚನೆ ನೀಡಿದ್ದಾರೆ.

ಮಹಾರಾಷ್ಟ್ರ, ಕರ್ನಾಟಕ ಗಡಿಯಲ್ಲಿ ಹೆಚ್ಚಿನ ನಿಗಾ ವಹಿಸುವ ಕುರಿತು ಚರ್ಚೆ ನಡೆದಿದ್ದು, ಡಿಸೆಂಬರ್​​ 23ರಿಂದ ಪ್ರತಿ ತಾಲೂಕಿನಲ್ಲಿ 5 ಸಾವಿರ ಕೋವಿಡ್​​ ತಪಾಸಣೆಗೆ ಸೂಚನೆ ನೀಡಲಾಗಿದೆ. ಪಿಹೆಚ್​​​​ಸಿ, ಸಿಹೆಚ್​​​ಸಿ ತಾಲೂಕು ಆಸ್ಪತ್ರೆಯಲ್ಲಿ RTPCR​​ ಟೆಸ್ಟ್​​​ಗೆ ನಿರ್ಧರಿಸಲಾಗಿದೆ.

ಇದನ್ನೂ ಓದಿ: ಕೋವಿಡ್ ಸಭೆ ಅಂತ್ಯ: ಕ್ರಿಸ್​ಮಸ್​, ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ ಎಂದ ಸಿಎಂ

ಮಹಾರಾಷ್ಟ್ರದಿಂದ ಬರುವವರ ಮೇಲೆ ಕೋವಿಡ್​​​ ತಪಾಸಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಾಗೇ ನೆಗಡಿ, ಕೆಮ್ಮು, ಜ್ವರದ ಲಕ್ಷಣ ಇದ್ದವರಿಗೆ ಆರ್​​ಟಿಪಿಸಿಆರ್​​​​ ಟೆಸ್ಟ್​​​ ಕಡ್ಡಾಯ ಮಾಡಲಾಗಿದ್ದು, ಕೇರಳದ ಶಬರಿಮಲೆಗೆ ತೆರಳಿದವರಿಗೂ ಕಡ್ಡಾಯ ತಪಾಸಣೆಗೆ ಸೂಚಿಸಲಾಗಿದೆ. ಅಲ್ಲದೇ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್​​ ಬೆಡ್​​​ ಇರಿಸಬೇಕೆಂದು ಶಾಸಕ ಗಣೇಶ್​​ ಹುಕ್ಕೇರಿ ಸೂಚನೆ ನೀಡಿದ್ದಾರೆ.

ಈ ಸಭೆಯಲ್ಲಿ ತಾಲೂಕು ಕಂದಾಯ ಇಲಾಖೆ, ಪೊಲೀಸ್, ಆರೋಗ್ಯ ಇಲಾಖೆ ಹಾಗೂ ಸ್ಥಳಿಯ ಸಂಸ್ಥೆಗಳ ಅಧಿಕಾರಿಗಳು ಭಾಗಿಯಾಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್  ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್