AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಗಡಿಯಲ್ಲಿ ಹೈಅಲರ್ಟ್: ಶಬರಿಮಲೆ, ಮಹಾರಾಷ್ಟ್ರದಿಂದ ಬರುವವರಿಗೆ RTPCR ಟೆಸ್ಟ್​​​ ಕಡ್ಡಾಯ

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ ಹಿನ್ನಲೆ ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಮಹತ್ವದ ಸಭೆ ನಡೆದಿದ್ದು, ಮಹಾರಾಷ್ಟ್ರ ಕರ್ನಾಟಕ ಗಡಿಯಲ್ಲಿ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಚರ್ಚೆಯಾಗಿದೆ. ಈ ವೇಳೆ ಕೆಲ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಬೆಳಗಾವಿ ಗಡಿಯಲ್ಲಿ ಹೈಅಲರ್ಟ್: ಶಬರಿಮಲೆ, ಮಹಾರಾಷ್ಟ್ರದಿಂದ ಬರುವವರಿಗೆ RTPCR ಟೆಸ್ಟ್​​​ ಕಡ್ಡಾಯ
ಸಾಂದರ್ಭಿಕ ಚಿತ್ರ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on: Dec 21, 2023 | 3:24 PM

Share

ಬೆಳಗಾವಿ, (ಡಿಸೆಂಬರ್ 21): ಕರ್ನಾಟಕದಲ್ಲಿ ಮತ್ತೆ ಕೊರೋನಾ (Coronavirus) ಆತಂಕ ಶುರುವಾಗಿದ್ದು, ಆರೋಗ್ಯ ಇಲಾಖೆ ಹೈಅಲರ್ಟ್ ಆಗಿದೆ. ಇನ್ನು ಗಡಿ ಜಿಲ್ಲೆ ಬೆಳಗಾವಿಯಲ್ಲೂ (Belagavi) ಸಹ ಕಟ್ಟುನಿಟ್ಟಿನ ಕ್ರಮಕ್ಕೆ ಇಲ್ಲಿನ ಅಧಿಕಾರಿಗಳು ಮುಂದಾಗಿದ್ದಾರೆ. ಈ ಬಗ್ಗೆ ಇಂದು (ಡಿಸೆಂಬರ್ 21) ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಶಾಸಕ ಗಣೇಶ್​​ ಹುಕ್ಕೇರಿ ನೇತೃತ್ವದಲ್ಲಿ ಕೋವಿಡ್​​ ಸಭೆ ನಡೆದಿದ್ದು. ನೆಗಡಿ, ಕೆಮ್ಮು, ಜ್ವರದ ಲಕ್ಷಣ ಇದ್ದವರಿಗೆ ಆರ್​​ಟಿಪಿಸಿಆರ್​​​​ ಟೆಸ್ಟ್​​​ ಕಡ್ಡಾಯ ಹಾಗೂ ಕೇರಳದ ಶಬರಿಮಲೆಗೆ ತೆರಳಿದವರಿಗೂ ಕಡ್ಡಾಯವಾಗಿ ತಪಾಸಣೆ ಮಾಡುವಂತೆ ಸೂಚನೆ ನೀಡಿದ್ದಾರೆ.

ಮಹಾರಾಷ್ಟ್ರ, ಕರ್ನಾಟಕ ಗಡಿಯಲ್ಲಿ ಹೆಚ್ಚಿನ ನಿಗಾ ವಹಿಸುವ ಕುರಿತು ಚರ್ಚೆ ನಡೆದಿದ್ದು, ಡಿಸೆಂಬರ್​​ 23ರಿಂದ ಪ್ರತಿ ತಾಲೂಕಿನಲ್ಲಿ 5 ಸಾವಿರ ಕೋವಿಡ್​​ ತಪಾಸಣೆಗೆ ಸೂಚನೆ ನೀಡಲಾಗಿದೆ. ಪಿಹೆಚ್​​​​ಸಿ, ಸಿಹೆಚ್​​​ಸಿ ತಾಲೂಕು ಆಸ್ಪತ್ರೆಯಲ್ಲಿ RTPCR​​ ಟೆಸ್ಟ್​​​ಗೆ ನಿರ್ಧರಿಸಲಾಗಿದೆ.

ಇದನ್ನೂ ಓದಿ: ಕೋವಿಡ್ ಸಭೆ ಅಂತ್ಯ: ಕ್ರಿಸ್​ಮಸ್​, ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ ಎಂದ ಸಿಎಂ

ಮಹಾರಾಷ್ಟ್ರದಿಂದ ಬರುವವರ ಮೇಲೆ ಕೋವಿಡ್​​​ ತಪಾಸಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಾಗೇ ನೆಗಡಿ, ಕೆಮ್ಮು, ಜ್ವರದ ಲಕ್ಷಣ ಇದ್ದವರಿಗೆ ಆರ್​​ಟಿಪಿಸಿಆರ್​​​​ ಟೆಸ್ಟ್​​​ ಕಡ್ಡಾಯ ಮಾಡಲಾಗಿದ್ದು, ಕೇರಳದ ಶಬರಿಮಲೆಗೆ ತೆರಳಿದವರಿಗೂ ಕಡ್ಡಾಯ ತಪಾಸಣೆಗೆ ಸೂಚಿಸಲಾಗಿದೆ. ಅಲ್ಲದೇ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್​​ ಬೆಡ್​​​ ಇರಿಸಬೇಕೆಂದು ಶಾಸಕ ಗಣೇಶ್​​ ಹುಕ್ಕೇರಿ ಸೂಚನೆ ನೀಡಿದ್ದಾರೆ.

ಈ ಸಭೆಯಲ್ಲಿ ತಾಲೂಕು ಕಂದಾಯ ಇಲಾಖೆ, ಪೊಲೀಸ್, ಆರೋಗ್ಯ ಇಲಾಖೆ ಹಾಗೂ ಸ್ಥಳಿಯ ಸಂಸ್ಥೆಗಳ ಅಧಿಕಾರಿಗಳು ಭಾಗಿಯಾಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್  ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!