AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka News: ಬರೋಬ್ಬರಿ 200 ಕ್ವಿಂಟಾಲ್ ಗೋವಿನ ಚರ್ಮ ಜಪ್ತಿ, ಹುಲಿ ದಾಳಿಗೆ ಎಂಟು ಆಡು ಬಲಿ

ಕರ್ನಾಟಕ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಿದ್ದೇವೆ. ಹಾಗಾದರೆ, ಇಷ್ಟೊಂದು ಪ್ರಮಾಣದ ಗೋವಿನ ಚರ್ಮ ಎಲ್ಲಿಂದ ಬಂತು? ಎಂದು ಪತ್ತೆ ಹಚ್ಚಿ ತನಿಖೆ ನಡೆಸಲು ಪೊಲೀಸರಿಗೆ ಸಚಿವರು ಸೂಚನೆ ನೀಡಿದ್ದಾರೆ.

Karnataka News: ಬರೋಬ್ಬರಿ 200 ಕ್ವಿಂಟಾಲ್ ಗೋವಿನ ಚರ್ಮ ಜಪ್ತಿ, ಹುಲಿ ದಾಳಿಗೆ ಎಂಟು ಆಡು ಬಲಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 15, 2021 | 6:16 PM

Share

ಬೆಳಗಾವಿ: ಪೊಲೀಸರು ಬರೋಬ್ಬರಿ 200 ಕ್ವಿಂಟಾಲ್​ ಗೋವಿನ ಚರ್ಮ ಜಪ್ತಿ ಮಾಡಿದ ಘಟನೆ ಬೆಳಗಾವಿಯ ಮಾರಿಹಾಳ ಎಂಬಲ್ಲಿ ನಡೆದಿದೆ. ಇಲ್ಲಿನ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 200 ಕ್ಚಿಂಟಾಲ್ ಗೋವಿನ ಚರ್ಮ ಜಪ್ತಿ ಮಾಡಲಾಗಿದೆ. ಸ್ಥಳಕ್ಕೆ ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್​ ಭೇಟಿ ನೀಡಿದ್ದಾರೆ. ಟ್ರಕ್​ನಲ್ಲಿ ಅಕ್ರಮ ಸಾಗಿಸುತ್ತಿದ್ದಾಗ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಿದ್ದೇವೆ. ಹಾಗಾದರೆ, ಇಷ್ಟೊಂದು ಪ್ರಮಾಣದ ಗೋವಿನ ಚರ್ಮ ಎಲ್ಲಿಂದ ಬಂತು? ಎಂದು ಪತ್ತೆ ಹಚ್ಚಿ ತನಿಖೆ ನಡೆಸಲು ಪೊಲೀಸರಿಗೆ ಸಚಿವರು ಸೂಚನೆ ನೀಡಿದ್ದಾರೆ. ಈ ಬಗ್ಗೆ ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಸೂಚನೆ ನೀಡಿದ್ದಾರೆ.

ಕೊಡಗು: ಜಿಲ್ಲೆಯಲ್ಲಿ ಹುಲಿ ದಾಳಿಗೆ ಎಂಟು ಆಡು ಬಲಿ ಕೊಡಗು ಜಿಲ್ಲೆಯಲ್ಲಿ ಹುಲಿ ದಾಳಿಗೆ ಎಂಟು ಆಡು ಬಲಿ ಆದ ದುರ್ಘಟನೆ ನಡೆದಿದೆ. ಇಲ್ಲಿನ ವಿರಾಜಪೇಟೆ ತಾಲ್ಲೂಕಿನ ನಾಣಚ್ಚಿ ಗ್ರಾಮದಲ್ಲಿ ಘಟನೆ ನಡೆದಿದೆ. ಗದ್ದೆ ಬಯಲಿನಲ್ಲಿ ಇದ್ದ ಆಡುಗಳನ್ನು ಹುಲಿ ಕೊಂದಿದೆ. ಹುಲಿಯ ಚಲನವಲನ ಮೊಬೈಲ್ ನಲ್ಲಿ ಸೆರೆ ಆಗಿದೆ. ನಾಣಚ್ಚಿ ಅಂಗನವಾಡಿ ಸಮೀಪವೇ ಕಂಡು ಬಂದ ಹುಲಿಯಿಂದಾಗಿ ಸಾರ್ವಜನಿಕರಲ್ಲಿ ತೀವ್ರ ಆತಂಕ ಮನೆಮಾಡಿದೆ. ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಸಿನಿಮಾ ಸ್ಟೈಲ್ ನಲ್ಲಿ ಕಾಪಿ ಮಾಡಿ ಸಿಕ್ಕಿ ಬಿದ್ದ ಅಭ್ಯರ್ಥಿ ಸಿನಿಮಾ ಶೈಲಿಯಲ್ಲಿ ಕಾಪಿ ಮಾಡಿ ಅಭ್ಯರ್ಥಿ ಸಿಕ್ಕಿ ಬಿದ್ದ ಘಟನೆ ನಡೆದಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣಾ ಪೊಲೀಸರಿಂದ ಪರೀಕ್ಷಾರ್ಥಿಯ ಬಂಧನ ಮಾಡಲಾಗಿದೆ. ವೀರನಗೌಡ ಬಂಧಿತ ಆರೋಪಿ ಆಗಿದ್ದಾನೆ. ಎಲೆಕ್ಟ್ರಾನಿಕ್ ಟ್ರಾನ್ಸ್​ಮೀಟರ್ ಬಳಸಿ ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿದ್ದ. ಲೋಕೋಪಯೋಗಿ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗೆ ನಡೆಯುತ್ತಿದ್ದ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ. ಕೆಪಿಎಸ್​ಸಿಯಿಂದ ನಡೆಯುತ್ತಿದ್ದ ಪರೀಕ್ಷೆಯಲ್ಲಿ ಘಟನೆ ನಡೆದಿದೆ. ಕಾಪಿ‌ ಮಾಡುತ್ತಿದ್ದಾಗಲೇ ಪರೀಕ್ಷಾ ಕೇಂದ್ರದ ಮುಖ್ಯಸ್ಥರ ಬಳಿ ಲಾಕ್ ಆಗಿದ್ದ. ಬಳಿಕ ಟ್ರಾನ್ಸ್​ಮೀಟರ್ ಸಹಿತ ಆರೋಪಿಯ ಬಂಧನ ಮಾಡಲಾಗಿದೆ.

ಬೆಂಗಳೂರು: ಗಾಂಜಾ ಮಾರುತ್ತಿದ್ದ ಆರೋಪಿಗಳ ಬಂಧನ ಬೆಂಗಳೂರಿನಲ್ಲಿ ಗಾಂಜಾ ಮಾರುತ್ತಿದ್ದ ಆರೋಪಿಗಳ ಬಂಧನ ಮಾಡಲಾಗಿದೆ. ಬ್ಯಾಟರಾಯನಪುರ ಠಾಣೆ ಪೊಲೀಸರಿಂದ ಇಬ್ಬರ ಬಂಧನ ಮಾಡಲಾಗಿದೆ. 2 ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತುಕಾನ್ ಮಂಡಲ್ ಹಾಗೂ ನಿತ್ಯಾನಂದ ಸೇಥಿ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತ ಆರೋಪಿಗಳಿಂದ 8 ಕೆ.ಜಿ 500 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಚಿತ್ರದುರ್ಗ: ಚಿಂದಿ ಆಯುತ್ತಿದ್ದ ಮಹಿಳೆಯರಿಬ್ಬರು ರೈಲು ಹರಿದು ಸಾವು

ಇದನ್ನೂ ಓದಿ: Crime News: ಅಪ್ರಾಪ್ತೆ ಅತ್ಯಾಚಾರ; ಮೂವರ ಬಂಧನ, ಆತ್ಮಹತ್ಯೆಗೆ ಯತ್ನಿಸಿದ್ದ ಪತ್ನಿ ಸಾವಿನ ಸುದ್ದಿ ತಿಳಿದು ಪತಿ ನೇಣಿಗೆ ಶರಣು

ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ