AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka News: ಬರೋಬ್ಬರಿ 200 ಕ್ವಿಂಟಾಲ್ ಗೋವಿನ ಚರ್ಮ ಜಪ್ತಿ, ಹುಲಿ ದಾಳಿಗೆ ಎಂಟು ಆಡು ಬಲಿ

ಕರ್ನಾಟಕ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಿದ್ದೇವೆ. ಹಾಗಾದರೆ, ಇಷ್ಟೊಂದು ಪ್ರಮಾಣದ ಗೋವಿನ ಚರ್ಮ ಎಲ್ಲಿಂದ ಬಂತು? ಎಂದು ಪತ್ತೆ ಹಚ್ಚಿ ತನಿಖೆ ನಡೆಸಲು ಪೊಲೀಸರಿಗೆ ಸಚಿವರು ಸೂಚನೆ ನೀಡಿದ್ದಾರೆ.

Karnataka News: ಬರೋಬ್ಬರಿ 200 ಕ್ವಿಂಟಾಲ್ ಗೋವಿನ ಚರ್ಮ ಜಪ್ತಿ, ಹುಲಿ ದಾಳಿಗೆ ಎಂಟು ಆಡು ಬಲಿ
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on: Dec 15, 2021 | 6:16 PM

Share

ಬೆಳಗಾವಿ: ಪೊಲೀಸರು ಬರೋಬ್ಬರಿ 200 ಕ್ವಿಂಟಾಲ್​ ಗೋವಿನ ಚರ್ಮ ಜಪ್ತಿ ಮಾಡಿದ ಘಟನೆ ಬೆಳಗಾವಿಯ ಮಾರಿಹಾಳ ಎಂಬಲ್ಲಿ ನಡೆದಿದೆ. ಇಲ್ಲಿನ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 200 ಕ್ಚಿಂಟಾಲ್ ಗೋವಿನ ಚರ್ಮ ಜಪ್ತಿ ಮಾಡಲಾಗಿದೆ. ಸ್ಥಳಕ್ಕೆ ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್​ ಭೇಟಿ ನೀಡಿದ್ದಾರೆ. ಟ್ರಕ್​ನಲ್ಲಿ ಅಕ್ರಮ ಸಾಗಿಸುತ್ತಿದ್ದಾಗ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಿದ್ದೇವೆ. ಹಾಗಾದರೆ, ಇಷ್ಟೊಂದು ಪ್ರಮಾಣದ ಗೋವಿನ ಚರ್ಮ ಎಲ್ಲಿಂದ ಬಂತು? ಎಂದು ಪತ್ತೆ ಹಚ್ಚಿ ತನಿಖೆ ನಡೆಸಲು ಪೊಲೀಸರಿಗೆ ಸಚಿವರು ಸೂಚನೆ ನೀಡಿದ್ದಾರೆ. ಈ ಬಗ್ಗೆ ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಸೂಚನೆ ನೀಡಿದ್ದಾರೆ.

ಕೊಡಗು: ಜಿಲ್ಲೆಯಲ್ಲಿ ಹುಲಿ ದಾಳಿಗೆ ಎಂಟು ಆಡು ಬಲಿ ಕೊಡಗು ಜಿಲ್ಲೆಯಲ್ಲಿ ಹುಲಿ ದಾಳಿಗೆ ಎಂಟು ಆಡು ಬಲಿ ಆದ ದುರ್ಘಟನೆ ನಡೆದಿದೆ. ಇಲ್ಲಿನ ವಿರಾಜಪೇಟೆ ತಾಲ್ಲೂಕಿನ ನಾಣಚ್ಚಿ ಗ್ರಾಮದಲ್ಲಿ ಘಟನೆ ನಡೆದಿದೆ. ಗದ್ದೆ ಬಯಲಿನಲ್ಲಿ ಇದ್ದ ಆಡುಗಳನ್ನು ಹುಲಿ ಕೊಂದಿದೆ. ಹುಲಿಯ ಚಲನವಲನ ಮೊಬೈಲ್ ನಲ್ಲಿ ಸೆರೆ ಆಗಿದೆ. ನಾಣಚ್ಚಿ ಅಂಗನವಾಡಿ ಸಮೀಪವೇ ಕಂಡು ಬಂದ ಹುಲಿಯಿಂದಾಗಿ ಸಾರ್ವಜನಿಕರಲ್ಲಿ ತೀವ್ರ ಆತಂಕ ಮನೆಮಾಡಿದೆ. ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಸಿನಿಮಾ ಸ್ಟೈಲ್ ನಲ್ಲಿ ಕಾಪಿ ಮಾಡಿ ಸಿಕ್ಕಿ ಬಿದ್ದ ಅಭ್ಯರ್ಥಿ ಸಿನಿಮಾ ಶೈಲಿಯಲ್ಲಿ ಕಾಪಿ ಮಾಡಿ ಅಭ್ಯರ್ಥಿ ಸಿಕ್ಕಿ ಬಿದ್ದ ಘಟನೆ ನಡೆದಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣಾ ಪೊಲೀಸರಿಂದ ಪರೀಕ್ಷಾರ್ಥಿಯ ಬಂಧನ ಮಾಡಲಾಗಿದೆ. ವೀರನಗೌಡ ಬಂಧಿತ ಆರೋಪಿ ಆಗಿದ್ದಾನೆ. ಎಲೆಕ್ಟ್ರಾನಿಕ್ ಟ್ರಾನ್ಸ್​ಮೀಟರ್ ಬಳಸಿ ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿದ್ದ. ಲೋಕೋಪಯೋಗಿ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗೆ ನಡೆಯುತ್ತಿದ್ದ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ. ಕೆಪಿಎಸ್​ಸಿಯಿಂದ ನಡೆಯುತ್ತಿದ್ದ ಪರೀಕ್ಷೆಯಲ್ಲಿ ಘಟನೆ ನಡೆದಿದೆ. ಕಾಪಿ‌ ಮಾಡುತ್ತಿದ್ದಾಗಲೇ ಪರೀಕ್ಷಾ ಕೇಂದ್ರದ ಮುಖ್ಯಸ್ಥರ ಬಳಿ ಲಾಕ್ ಆಗಿದ್ದ. ಬಳಿಕ ಟ್ರಾನ್ಸ್​ಮೀಟರ್ ಸಹಿತ ಆರೋಪಿಯ ಬಂಧನ ಮಾಡಲಾಗಿದೆ.

ಬೆಂಗಳೂರು: ಗಾಂಜಾ ಮಾರುತ್ತಿದ್ದ ಆರೋಪಿಗಳ ಬಂಧನ ಬೆಂಗಳೂರಿನಲ್ಲಿ ಗಾಂಜಾ ಮಾರುತ್ತಿದ್ದ ಆರೋಪಿಗಳ ಬಂಧನ ಮಾಡಲಾಗಿದೆ. ಬ್ಯಾಟರಾಯನಪುರ ಠಾಣೆ ಪೊಲೀಸರಿಂದ ಇಬ್ಬರ ಬಂಧನ ಮಾಡಲಾಗಿದೆ. 2 ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತುಕಾನ್ ಮಂಡಲ್ ಹಾಗೂ ನಿತ್ಯಾನಂದ ಸೇಥಿ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತ ಆರೋಪಿಗಳಿಂದ 8 ಕೆ.ಜಿ 500 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಚಿತ್ರದುರ್ಗ: ಚಿಂದಿ ಆಯುತ್ತಿದ್ದ ಮಹಿಳೆಯರಿಬ್ಬರು ರೈಲು ಹರಿದು ಸಾವು

ಇದನ್ನೂ ಓದಿ: Crime News: ಅಪ್ರಾಪ್ತೆ ಅತ್ಯಾಚಾರ; ಮೂವರ ಬಂಧನ, ಆತ್ಮಹತ್ಯೆಗೆ ಯತ್ನಿಸಿದ್ದ ಪತ್ನಿ ಸಾವಿನ ಸುದ್ದಿ ತಿಳಿದು ಪತಿ ನೇಣಿಗೆ ಶರಣು

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ