AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘಟಪ್ರಭಾ ನದಿ ದಡದಲ್ಲಿ ಮೊಸಳೆ ಮರಿ ಪ್ರತ್ಯಕ್ಷ! ಗ್ರಾಮಸ್ಥರು ಮಾಡಿದ್ದೇನು?

ಬೆಳಗಾವಿ: ಘಟಪ್ರಭಾ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದು ಸದ್ಯ ಮೊಸಳೆಗಳು ದಡಕ್ಕೆ ಬರ್ತಿವೆ. ಇನ್ನೂ ಗೋಕಾಕ್ ತಾಲೂಕಿನ ಸಾವಳಗಿ ಗ್ರಾಮದ ಪಕ್ಕದಲ್ಲಿರುವ ಘಟಪ್ರಭಾ ನದಿಯಲ್ಲಿ ಇಂದು 18 ಮೊಸಳೆ ಮರಿಗಳು ಪ್ರತ್ಯಕ್ಷವಾಗಿವೆ. ಇದನ್ನ ಕಂಡ ಗ್ರಾಮಸ್ಥರು ಒಂದು ಕಡೆ ಆತಂಕಕ್ಕೊಳಗಾಗಿದ್ದಾರೆ. ನಾಲ್ಕು ದಿನಗಳ ಹಿಂದಷ್ಟೇ ಇದೇ ಸ್ಥಳದಲ್ಲಿ ನಾಲ್ಕು ಮೊಸಳೆ ಮರಿಗಳು ಈಜಲು ಹೋಗಿದ್ದ ವ್ಯಕ್ತಿಗೆ ಕಂಡಿದ್ದವು. ಇದೀಗ ಮತ್ತೆ 18 ಮರಿಗಳು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಮೊಸಳೆ ಮರಿಗಳನ್ನು ರಕ್ಷಣೆ ಮಾಡಿದ್ದಾರೆ. ಎಲ್ಲವೂ 15 ದಿನಗಳ ಹಿಂದಷ್ಟೇ ಜನಸಿರುವ […]

ಘಟಪ್ರಭಾ ನದಿ ದಡದಲ್ಲಿ ಮೊಸಳೆ ಮರಿ ಪ್ರತ್ಯಕ್ಷ! ಗ್ರಾಮಸ್ಥರು ಮಾಡಿದ್ದೇನು?
ಸಾಧು ಶ್ರೀನಾಥ್​
| Edited By: |

Updated on: May 29, 2020 | 6:10 PM

Share

ಬೆಳಗಾವಿ: ಘಟಪ್ರಭಾ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದು ಸದ್ಯ ಮೊಸಳೆಗಳು ದಡಕ್ಕೆ ಬರ್ತಿವೆ. ಇನ್ನೂ ಗೋಕಾಕ್ ತಾಲೂಕಿನ ಸಾವಳಗಿ ಗ್ರಾಮದ ಪಕ್ಕದಲ್ಲಿರುವ ಘಟಪ್ರಭಾ ನದಿಯಲ್ಲಿ ಇಂದು 18 ಮೊಸಳೆ ಮರಿಗಳು ಪ್ರತ್ಯಕ್ಷವಾಗಿವೆ. ಇದನ್ನ ಕಂಡ ಗ್ರಾಮಸ್ಥರು ಒಂದು ಕಡೆ ಆತಂಕಕ್ಕೊಳಗಾಗಿದ್ದಾರೆ. ನಾಲ್ಕು ದಿನಗಳ ಹಿಂದಷ್ಟೇ ಇದೇ ಸ್ಥಳದಲ್ಲಿ ನಾಲ್ಕು ಮೊಸಳೆ ಮರಿಗಳು ಈಜಲು ಹೋಗಿದ್ದ ವ್ಯಕ್ತಿಗೆ ಕಂಡಿದ್ದವು.

ಇದೀಗ ಮತ್ತೆ 18 ಮರಿಗಳು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಮೊಸಳೆ ಮರಿಗಳನ್ನು ರಕ್ಷಣೆ ಮಾಡಿದ್ದಾರೆ. ಎಲ್ಲವೂ 15 ದಿನಗಳ ಹಿಂದಷ್ಟೇ ಜನಸಿರುವ ಮರಿಗಳಾಗಿದ್ದು, ಅವುಗಳನ್ನ ಸ್ಥಳೀಯ ಯುವಕರು ಕೈಯಲ್ಲಿ ಹಿಡಿದು ಖುಷಿ ಪಟ್ಟುಕೊಂಡಿದ್ದಾರೆ.

ಸದ್ಯ ಅರಣ್ಯ ಇಲಾಖೆ ಸಿಬ್ಬಂದಿಗೆ ಮೊಸಳೆ ಮರಿಗಳು ಪ್ರತ್ಯಕ್ಷವಾಗಿರುವ ಸುದ್ದಿ ತಿಳಿಸಿದ್ದು, ಗ್ರಾಮಸ್ಥರು ಹಾಗೂ ಅರಣ್ಯ ಅಧಿಕಾರಿಗಳು ತಾಯಿ ಮೊಸಳೆಯನ್ನ ಹುಡುಕುವ ಕೆಲಸ ಮಾಡುತ್ತಿದ್ದಾರೆ. ಘಟಪ್ರಭಾ ನದಿ ತಟದಲ್ಲಿ ಪದೇ ಪದೇ ಮೊಸಳೆಗಳು ಪ್ರತ್ಯಕ್ಷವಾಗುತ್ತಿದ್ದು, ಜಮೀನುಗಳಿಗೆ ಹೋಗಲು ರೈತರು ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಘಟಪ್ರಭಾ ನದಿಯಲ್ಲಿ ನೀರು ಕಡಿಮೆಯಾಗಿದ್ದಕ್ಕೆ ಮೊಸಳೆಗಳು ಗ್ರಾಮ ಮತ್ತು ಜಮೀನುಗಳತ್ತ ಮುಖ ಮಾಡುತ್ತಿದ್ದು ಸಾವಳಗಿ ಗ್ರಾಮ ಮತ್ತು ಗೋಕಾಕ್ ತಾಲೂಕಿನ ಹಾಗೂ ಹುಕ್ಕೇರಿ ತಾಲೂಕಿನ ಇಪ್ಪತ್ತೈದಕ್ಕೂ ಅಧಿಕ ಗ್ರಾಮಗಳ ಜನರಲ್ಲಿ ಮೊಸಳೆ ಭೀತಿ ಕಾಡುತ್ತಿದೆ. ಇನ್ನು ಪದೇ ಪದೇ ಮೊಸಳೆ ಮರಿಗಳು ಪ್ರತ್ಯಕ್ಷವಾಗುತ್ತಿದ್ದು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.‌

ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ