AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹಕ್ಕೆ ನಲುಗಿದ ರೈತರ ಬದುಕು; ಬೆಳಗಾವಿಯಲ್ಲಿ 36 ಸಾವಿರ ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಬೆಳಗಾವಿ ತಾಲೂಕಿನ ಅಂಬೇವಾಡಿ, ಕಡೋಲಿ, ಕಂಗ್ರಾಳಿ, ಯಳ್ಳೂರು ಸುತ್ತಮುತ್ತ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, 100ಕ್ಕೂ ಹೆಚ್ಚು ರಸ್ತೆಗಳು ಪ್ರವಾಹಕ್ಕೆ ಕೊಚ್ಚಿಹೋಗಿವೆ.

ಪ್ರವಾಹಕ್ಕೆ ನಲುಗಿದ ರೈತರ ಬದುಕು; ಬೆಳಗಾವಿಯಲ್ಲಿ 36 ಸಾವಿರ ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ
ಜಲಾವೃತಗೊಂಡ ಬೆಳೆ
TV9 Web
| Edited By: |

Updated on:Jul 31, 2021 | 9:06 AM

Share

ಬೆಳಗಾವಿ: ಜಿಲ್ಲೆಯಲ್ಲಿ ಸುಮಾರು 10 ದಿನಕ್ಕೂ ಹೆಚ್ಚು ಕಾಲ ಸುರಿದ ಭಾರೀ ಮಳೆಯಿಂದ ರೈತರು ಅಕ್ಷರಶಃ ಕಂಗಾಲಾಗಿದ್ದಾರೆ. ಕಬ್ಬು, ಭತ್ತ, ಮೆಕ್ಕೆಜೋಳ, ತರಕಾರಿ ಬೆಳೆಗಳು ಸೇರಿ 36 ಸಾವಿರ ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿಯಾಗಿದೆ. ಬೆಳಗಾವಿ ತಾಲೂಕಿನ ಅಂಬೇವಾಡಿ, ಕಡೋಲಿ, ಕಂಗ್ರಾಳಿ, ಯಳ್ಳೂರು ಸುತ್ತಮುತ್ತ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, 100ಕ್ಕೂ ಹೆಚ್ಚು ರಸ್ತೆಗಳು ಪ್ರವಾಹಕ್ಕೆ ಕೊಚ್ಚಿಹೋಗಿವೆ. ಪ್ರವಾಹಕ್ಕೆ ತುರ್ತಾಗಿ ಬೆಳಗಾವಿಗೆ 220 ಕೋಟಿ ರೂ. ಪರಿಹಾರ ಬೇಕಿದೆ ಎಂದು ಅಂದಾಜಿಸಲಾಗಿದೆ.

ಕೃಷ್ಣಾ ತೀರದಲ್ಲಿ ಮುಂದುವರಿದ ಪ್ರವಾಹದ ಭೀತಿ ಕೃಷ್ಣಾ ತೀರದಲ್ಲಿ ಪ್ರವಾಹದ ಭೀತಿ ಮುಂದುವರಿದಿದೆ. ಆಲಮಟ್ಟಿ ಡ್ಯಾಂಗೆ ಒಳ ಹರಿವು ಮತ್ತು ಹೊರ ಹರಿವು ಸ್ವಲ್ವ ಇಳಿಮುಖವಾಗಿದೆ. ಒಳ ಹರಿವು 3,84,444 ಕ್ಯೂಸೆಕ್, ಹೊರ ಹರಿವು 4,20,000 ಕ್ಯೂಸೆಕ್ ಇದೆ. 519.60 ಮೀಟರ್ ಸಾಮರ್ಥ್ಯದ ಡ್ಯಾಂನಲ್ಲಿ 517.12 ಮೀಟರ್ ನೀರು ಸಂಗ್ರಹವಾಗಿದೆ. ನದಿ ಪಾತ್ರದ ಮೂಲಕ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯ ಬಸವ ಸಾಗರಕ್ಕೆ ನೀರು ಹರಿಬಿಡಲಾಗಿದೆ.

ಮುದ್ದೇಬಿಹಾಳ ತಾಲೂಕಿನ ಕೆಲ ಗ್ರಾಮಗಳಲ್ಲಿ ಉಂಟಾದ ಪ್ರವಾಹದಿಂದ ಅಪಾರ ಪ್ರಮಾಣ ಕಬ್ಬು, ಶೇಂಗಾ, ಉದ್ದು, ತೊಗರಿ ಸೇರಿದಂತೆ ಇತರೆ ಬೆಳೆಗಳು ಜಲಾವೃತವಾಗಿದ್ದು, ಗ್ರಾಮಸ್ಥರು ಪ್ರವಾಹದಿಂದ ತತ್ತರಿಸಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕು ವ್ಯಾಪ್ತಿಯಲ್ಲಿ ಕೃಷ್ಣಾ ನದಿ ನೀರು ನುಗ್ಗಿ ಮ್ಯಾದರಗಡ್ಡೆ ಜಲಾವೃತಗೊಂಡಿದ್ದು, ಜನರು ಪರದಾಟ ಪಡುತ್ತಿದ್ದಾರೆ. ದಿನಬಳಕೆ ವಸ್ತುಗಳಿಲ್ಲದೆ ಸುಮಾರು 20 ಕುಟುಂಬಗಳು ಪರದಾಡುತ್ತಿವೆ. ಸರ್ಕಾರ ನಮ್ಮನ್ನು ಶಾಶ್ವತವಾಗಿ ಸ್ಥಳಾಂತರ ಮಾಡುತ್ತಿಲ್ಲ. ಪರಿಹಾರದ ಹೆಸರಲ್ಲಿ ಅಕ್ರಮ ನಡೆಸುತ್ತಿದ್ದಾರೆ ಅಂತ ನಿವಾಸಿಗಳು ವಿಡಿಯೋ ಮಾಡಿ ಅಳಲು ತೋಡಿಕೊಂಡಿದ್ದಾರೆ.

ಅಳಲು ತೋಡಿಕೊಂಡ ನಿವಾಸಿಗಳು

ನದಿ ನೀರಿನ ಹರಿವು ಕಡಿಮೆಯಾದರೂ ತಪ್ಪದ‌ ಗೋಳು ಹಾವೇರಿ ಜಿಲ್ಲೆಯ ಸವಣೂರು, ರಟ್ಟೀಹಳ್ಳಿ, ಹಾವೇರಿ, ಹಾನಗಲ್ ತಾಲೂಕಿನ ಹಲವೆಡೆ ಜನರು ಪರದಾಟ ಪಡುತ್ತಿದ್ದಾರೆ. ನದಿಗಳ ನೀರಿನ ಹರಿವು ಹೆಚ್ಚಾಗಿ ಬ್ರಿಡ್ಜ್ ಕಂ ಬಾಂದಾರ್​ಗಳ ರಸ್ತೆಗಳ ಮೇಲೆ ನೀರು ಹರಿಯುತಿತ್ತು. ನೀರಿನ ಹರಿವು ಕಡಿಮೆ ಆಗುತ್ತಿದ್ದಂತೆ ಬ್ರಿಡ್ಜ್ ಕಂ ಬಾಂದಾರ್​ಗಳ ರಸ್ತೆಗಳನ್ನು ತೆರವುಗೊಳಿಸಲಾಗಿದೆ. ಆದರೆ ನದಿ ನೀರಿನ ಹರಿವಿಗೆ ರಸ್ತೆಗಳು ಕಿತ್ತು ಹೋಗಿದ್ದು, ಓಡಾಡುವುದಕ್ಕೆ ಜನರು ಪರದಾಡುತ್ತಿದ್ದಾರೆ.

ಇದನ್ನೂ ಓದಿ

ಕೊರೊನಾ ಆತಂಕ: ಕೇರಳ-ಕರ್ನಾಟಕ ಗಡಿಯಲ್ಲಿ ಕಠಿಣ ಕ್ರಮ ಜಾರಿ; ಇಂದು ಸಂಜೆ ಜಿಲ್ಲಾಡಳಿತಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ

ಮುಖ್ಯಮಂತ್ರಿ ಠಾಕ್ರೆ ಮತ್ತು ವಿರೋಧ ಪಕ್ಷದ ನಾಯಕ ಫಡ್ನವೀಸ್ ಕೊಲ್ಹಾಪುರದಲ್ಲಿ ಏಕಕಾಲಕ್ಕೆ ಪ್ರತ್ಯಕ್ಷರಾಗಿ ಮುಖಾಮುಖಿಯಾದರು!

crop which was in the area of ​​36 thousand hectares due to heavy rains was destroyed)

Published On - 8:55 am, Sat, 31 July 21

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ