AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಧ ಪೊಲೀಸ್ ಲಾಂಛನಕ್ಕೆ ಕಾಲಿಂದ ಒದ್ದ ಕಾರಣಕ್ಕೆ ಅರೆಸ್ಟ್: ಬೆಳಗಾವಿ ಎಸ್‌ಪಿ

ಬೆಳಗಾವಿ: ಕೊರೊನಾ ಸೋಂಕು ಕಾಲದಲ್ಲಿ ಮಾಸ್ಕ್ ಧರಿಸದ ಕಾರಣ ಮತ್ತು ಕರ್ತವ್ಯನಿರತ ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ್ದಕ್ಕೆ CRPF ಯೋಧರೊಬ್ಬರನ್ನು ಬಂಧಿಸಿರುವುದಕ್ಕೆ ಭಾರಿ ವಿರೋಧಗಳು ವ್ಯಕ್ತವಾಗಿವೆ. ಈ ಮಧ್ಯೆ ಯೋಧನನ್ನು ಬಂಧಿಸಿರುವುದನ್ನು ಎಸ್‌ಪಿ ಲಕ್ಷ್ಮಣ್ ನಿಂಬರಗಿ ಸಮರ್ಥಿಸಿಕೊಂಡಿದ್ದಾರೆ. ಪೊಲೀಸ್ ಲಾಂಛನಕ್ಕೆ ಕಾಲಿಂದ ಒದ್ದಿರುವ ಕಾರಣಕ್ಕೆ ಯೋಧನ ಅರೆಸ್ಟ್: ಏ.23ರಂದು ಇಬ್ಬರು ಪೇದೆಗಳು ಯಕ್ಸಂಬಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ CRPF ಯೋಧ ಸಚಿನ್ ತನ್ನ ಐದಾರು ಸ್ನೇಹಿತರ ಜತೆ ನಿಂತಿದ್ದರು. ಪೊಲೀಸರನ್ನು ಕಂಡ ತಕ್ಷಣ ಸ್ನೇಹಿತರು […]

ಯೋಧ ಪೊಲೀಸ್ ಲಾಂಛನಕ್ಕೆ ಕಾಲಿಂದ ಒದ್ದ ಕಾರಣಕ್ಕೆ ಅರೆಸ್ಟ್: ಬೆಳಗಾವಿ ಎಸ್‌ಪಿ
ಸಾಧು ಶ್ರೀನಾಥ್​
|

Updated on:Apr 27, 2020 | 5:44 PM

Share

ಬೆಳಗಾವಿ: ಕೊರೊನಾ ಸೋಂಕು ಕಾಲದಲ್ಲಿ ಮಾಸ್ಕ್ ಧರಿಸದ ಕಾರಣ ಮತ್ತು ಕರ್ತವ್ಯನಿರತ ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ್ದಕ್ಕೆ CRPF ಯೋಧರೊಬ್ಬರನ್ನು ಬಂಧಿಸಿರುವುದಕ್ಕೆ ಭಾರಿ ವಿರೋಧಗಳು ವ್ಯಕ್ತವಾಗಿವೆ. ಈ ಮಧ್ಯೆ ಯೋಧನನ್ನು ಬಂಧಿಸಿರುವುದನ್ನು ಎಸ್‌ಪಿ ಲಕ್ಷ್ಮಣ್ ನಿಂಬರಗಿ ಸಮರ್ಥಿಸಿಕೊಂಡಿದ್ದಾರೆ.

ಪೊಲೀಸ್ ಲಾಂಛನಕ್ಕೆ ಕಾಲಿಂದ ಒದ್ದಿರುವ ಕಾರಣಕ್ಕೆ ಯೋಧನ ಅರೆಸ್ಟ್: ಏ.23ರಂದು ಇಬ್ಬರು ಪೇದೆಗಳು ಯಕ್ಸಂಬಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ CRPF ಯೋಧ ಸಚಿನ್ ತನ್ನ ಐದಾರು ಸ್ನೇಹಿತರ ಜತೆ ನಿಂತಿದ್ದರು. ಪೊಲೀಸರನ್ನು ಕಂಡ ತಕ್ಷಣ ಸ್ನೇಹಿತರು ಓಡಿ ಹೋಗಿದ್ದಾರೆ. ಆಗ ಮಾಸ್ಕ್ ಏಕೆ ಧರಿಸಿಲ್ಲ ಎಂದು ಯೋಧನನ್ನು ಪೊಲೀಸರು ಪ್ರಶ್ನಿಸಿದ್ದಾರೆ.

ಈ ವೇಳೆ ವಾಗ್ವಾದ ನಡೆಸಿ ಕಾಲರ್ ಹಿಡಿದು ಪೇದೆಯ ಹೊಟ್ಟೆಗೆ ಸಚಿನ್ ಒದ್ದಿದ್ದಾನೆ. ಇದಾದ ಬಳಿಕ ಮತ್ತೋರ್ವ ಪೇದೆ ಲಾಠಿ ಬೀಸಿ ಆತನನ್ನು ಅರೆಸ್ಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅರ್ಧ ವಿಡಿಯೋ ಮಾತ್ರ ಹರಿದಾಡುತ್ತಿದೆ. ಘಟನೆಯ ಸಂಪೂರ್ಣ ವಿಡಿಯೋ, ಪೊಲೀಸರ ಹೊಟ್ಟೆಗೆ ಒದ್ದಿರುವ, ಬೆಲ್ಟ್ ಮೇಲಿರುವ  ಕರ್ನಾಟಕ ರಾಜ್ಯ ಪೊಲೀಸ್ ಲಾಂಛನಕ್ಕೆ ಕಾಲಿಂದ ಒದ್ದಿರುವ ಗುರುತು ಇರುವ ಫೋಟೋಗಳನ್ನು ಎಸ್‌ಪಿ ಪ್ರದರ್ಶಿಸಿದರು.

ಘಟನೆ ನಡೆದ ದಿನ ಸಚಿನ್​ನನ್ನು ಸದಲಗಾ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತ್ತು. ಘಟನೆ ನಡೆದ ದಿನವೇ ಸಿಆರ್‌ಪಿಎಫ್ ಮೇಲಧಿಕಾರಿಗಳಿಗೂ ಮಾಹಿತಿ ನೀಡಿದ್ದೇವೆ. ಬಂಧಿಸಿದ ದಿನವೇ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಸದಲಗಾ ಠಾಣೆಯಲ್ಲಿ ಸೆಕ್ಷನ್ 353, 323, 504 ಅಡಿಯಲ್ಲಿ ದೂರು ದಾಖಲಾಗಿದೆ ಎಂದು ಎಸ್‌ಪಿ ಲಕ್ಷ್ಮಣ್ ನಿಂಬರಗಿ ಸ್ಪಷ್ಟನೆ ನೀಡಿದ್ದಾರೆ.

ಯೋಧ ಸಚಿನ್ ಬಿಡುಗಡೆಗೆ ಗಣೇಶ್ ಕಾರ್ಣಿಕ್ ಆಗ್ರಹ: ಸಚಿನ್ ಸಾವಂತ್ ಅರೆ ಮಿಲಿಟರಿ ಪಡೆಗೆ ಸೇರಿದ ಸೈನಿಕನೆಂದು ತಿಳಿದ ನಂತರವೂ ಕಾನೂನು ಕೈಗೆತ್ತಿಕೊಂಡಿದ್ದಾರೆ. ಮಾಸ್ಕ್ ಧರಿಸದ ಒಂದೇ ಕಾರಣಕ್ಕೆ ನಿರಪರಾಧಿಯನ್ನು ಅತ್ಯಂತ ಅಮಾನುಷವಾಗಿ ಹಿಂಸಿಸಿರುವುದು ದೇಶದ ಕಾನೂನಿಗೆ, ಸಮವಸ್ತ್ರ ಧರಿಸಿದ ಸೈನಿಕರಿಗೆ ಹಾಗೂ ರಾಜ್ಯದ ಪೊಲೀಸ್ ಇಲಾಖೆಗೆ ಒಂದು ಕಪ್ಪುಚುಕ್ಕೆ ಎಂದು ಮಾಜಿ ಎಂಎಲ್​ಸಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೂಡಲೇ ಯೋಧ ಸಚಿನ್ ಸಾವಂತ್ ಅವರನ್ನು ಗೌರವದಿಂದ ಬಿಡುಗಡೆ ಮಾಡಿ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ಮೇಲೆ ತನಿಖೆ ನಡೆಸಿ ಶಿಸ್ತಿನ ಕ್ರಮ ಕೈಗೊಳ್ಳಬೇಕೆಂದು ಗಣೇಶ್ ಕಾರ್ಣಿಕ್ ಆಗ್ರಹಿಸಿದ್ದಾರೆ.

14 ದಿನಗಳ ನ್ಯಾಯಾಂಗ ಬಂಧನ: ಸಿಆರ್‌ಪಿಎಪ್ ಯೋಧ ಸಚಿನ್‌ ಸಾವಂತ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ. 14 ದಿನಗಳ ಕಾಲ ಯೋಧನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Published On - 2:26 pm, Mon, 27 April 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ