ಬ್ರೇಕಿಂಗ್: ಬೆಳಗಾವಿ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಭೀಕರ ರಸ್ತೆ ಅಪಘಾತ

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪ್ಯಾಸೆಂಜರ್ ಕ್ರೂಸರ್ ವಾಹನವು ಡಿಕ್ಕಿಯ ರಭಸಕ್ಕೆ ಹೆದ್ದಾರಿ ಮೇಲಿಂದ ಆರಡಿ ಜಿಗಿದು ತಲೆಕೆಳಗಾಗಿ ಗದ್ದೆಗೆ ಉರಳಿದೆ.

ಬ್ರೇಕಿಂಗ್: ಬೆಳಗಾವಿ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಭೀಕರ ರಸ್ತೆ ಅಪಘಾತ
ಬ್ರೇಕಿಂಗ್: ಬೆಳಗಾವಿ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಭೀಕರ ರಸ್ತೆ ಅಪಘಾತ
Edited By: ಸಾಧು ಶ್ರೀನಾಥ್​

Updated on: Jun 17, 2021 | 10:44 AM

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ದಾಸ್ತಿಕೊಪ್ಪ ಗ್ರಾಮದ ಸಮೀಪ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕ್ರೂಸರ್ ವಾಹನವು ಡಿವೈಡರ್ ಗೆ ಡಿಕ್ಕಿ ಹೊಡೆದು ಆರಡಿ ಜಿಗಿದು ಪಕ್ಕದ ತೋಟದಲ್ಲಿ ಬಿದ್ದಿದೆ. ಕ್ರೂಸರ್ ವಾಹನದಲ್ಲಿದ್ದ ಪ್ರಯಾಣಿಕರು ಧಾರವಾಡದ ಸೋಮಾಪುರದಿಂದ ಬೈಲಹೊಂಗಲದ ನೇಗಿನಹಾಳ ಗ್ರಾಮಕ್ಕೆ ಹೊರಟ್ಟಿದ್ದರು. ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪ್ಯಾಸೆಂಜರ್ ಕ್ರೂಸರ್ ವಾಹನವು ಡಿಕ್ಕಿಯ ರಭಸಕ್ಕೆ ಹೆದ್ದಾರಿ ಮೇಲಿಂದ ಆರಡಿ ಜಿಗಿದು ತಲೆಕೆಳಗಾಗಿ ಗದ್ದೆಗೆ ಉರಳಿದೆ. ಕ್ರೂಸರ್ ವಾಹನಲ್ಲಿದ್ದ 6 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು,‌ ಕಿತ್ತೂರು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕ್ರೂಸರ್ ವಾಹನಲ್ಲಿದ್ದ 6 ಪ್ರಯಾಣಿಕರಿಗೆ ಗಂಭೀರವಾದ ಗಾಯಗಳು

(cruiser passenger vehicle hit road divider turtles into agriculture field on pune bangalore high way in belagavi district)

ಸಂಚಾರಿ ವಿಜಯ್​ ರೀತಿಯಲ್ಲೇ ಅಪಘಾತದಲ್ಲಿ ಮೃತಪಟ್ಟ ಸ್ಯಾಂಡಲ್​ವುಡ್​ ಕಲಾವಿದರಿವರು

Published On - 10:33 am, Thu, 17 June 21

TV9 Web

TV9 Kannada

Read More
Follow Us