AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟಿ ರವಿ ಬಂಧನ: ಬಿಜೆಪಿ ನಾಯಕರನ್ನು ಠಾಣೆಯೊಳಗೆ ಬಿಟ್ಟಿದ್ದಕ್ಕೆ ಖಾನಾಪುರ ಸಿಪಿಐ ಅಮಾನತು, ಬಂದ್​ಗೆ ಕರೆ

ಸಿಟಿ ರವಿ ಅವರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ. ರಾಜಕೀಯ ಮುಖಂಡರ ಠಾಣೆ ಪ್ರವೇಶ ಮತ್ತು ಕರ್ತವ್ಯ ಲೋಪದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಬಿಜೆಪಿ ಮತ್ತು ಇತರ ಸಂಘಟನೆಗಳು ಈ ಅಮಾನತಿನನ್ನು ಖಂಡಿಸಿ ಖಾನಾಪುರ ಬಂದ್‌ಗೆ ಕರೆ ನೀಡಿವೆ. ಬೆಳಗಾವಿಯಲ್ಲಿ ಗೃಹ ಸಚಿವರು ಮತ್ತು ಉಪಮುಖ್ಯಮಂತ್ರಿಗಳು ಸಭೆ ನಡೆಸಿದ್ದು, ಈ ವಿಚಾರದಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಸಿಟಿ ರವಿ ಬಂಧನ: ಬಿಜೆಪಿ ನಾಯಕರನ್ನು ಠಾಣೆಯೊಳಗೆ ಬಿಟ್ಟಿದ್ದಕ್ಕೆ ಖಾನಾಪುರ ಸಿಪಿಐ ಅಮಾನತು, ಬಂದ್​ಗೆ ಕರೆ
ಸಿಟಿ ರವಿ, ಸಿಪಿಐ ಮಂಜುನಾಥ್​​
Sahadev Mane
| Edited By: |

Updated on:Dec 25, 2024 | 2:04 PM

Share

ಬೆಳಗಾವಿ, ಡಿಸೆಂಬರ್​​ 25:  ವಿಧಾನ ಪರಿಷತ್​ ಸದಸ್ಯ ಸಿಟಿ ರವಿ (CT Ravi) ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪುರ (Khanapur) ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಿ ಐಜಿಪಿ ವಿಕಾಸ್ ಕುಮಾರ್ ವಿಕಾಸ್ ಆದೇಶ ಹೊರಡಿಸಿದ್ದಾರೆ.

ರಾಜಕೀಯ ಮುಖಂಡರು ಠಾಣೆಯೊಳಗೆ ಬಂದಿದ್ದರಿಂದ ಅಮಾನತು: ಐಜಿಪಿ

ಸಿಪಿಐ ಮಂಜುನಾಥ್ ನಾಯಕ್ ​ಅಮಾನತಿಗೆ ಐಜಿಪಿ ವಿಕಾಸ್ ಕುಮಾರ್ ಕಾರಣ ನೀಡಿದ್ದಾರೆ. ಡಿಸೆಂಬರ್​ 19ರಂದು ಸಿ.ಟಿ.ರವಿಯವರನ್ನು ಹಿರೇಬಾಗೇವಾಡಿ ಠಾಣೆಯಿಂದ ಖಾನಾಪುರ ಠಾಣೆಗೆ ಕರೆದುಕೊಂಡು ಬರಲಾಗಿತ್ತು. ಠಾಣೆಯ ಸಿಬ್ಬಂದಿಯನ್ನಿಟ್ಟುಕೊಂಡು ಸೂಕ್ತ ಭದ್ರತೆ ನೀಡುವಂತೆ ಸೂಚಿಸಲಾಗಿತ್ತು. ಆಪಾದಿತರನ್ನು (ಸಿಟಿ ರವಿ) ಹೊರತುಪಡಿಸಿ ಯಾರನ್ನೂ ಒಳಬೀಡದಂತೆ ಆದೇಶಿಸಲಾಗಿತ್ತು.

ಆದರೆ, ಸಿಪಿಐ ಮಂಜುನಾಥ್ ನಾಯಕ್ ಸೂಕ್ತ ಬಂದೋಬಸ್ತ್ ಮಾಡಿರಲ್ಲ. ರಾಜಕೀಯ ಮುಖಂಡರು ಖಾನಾಪುರ ಠಾಣೆ ಒಳಗೆ ನುಗ್ಗಿ ಬಂದಿದ್ದರು. ಇದರಿಂದ ಠಾಣೆಯೊಳಗೆ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು. ರಾಜಕೀಯ ಮುಖಂಡರನ್ನು ತಡೆಯುವಲ್ಲಿ ವಿಫಲರಾಗಿದ್ದರು. ಮೇಲಧಿಕಾರಿಗಳ ಆದೇಶ ಉಲ್ಲಂಘನೆ ಮಾಡಿ, ಕರ್ತವ್ಯ ಲೋಪ, ಬೇಜವಾಬ್ದಾರಿತನ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತಿನಲ್ಲಿಟ್ಟು ಆದೇಶ ಹೊರಡಿಸಲಾಗಿದೆ ಎಂದು ಆದೇಶ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಸಿಟಿ ರವಿಯನ್ನು ಇಡೀ ರಾತ್ರಿ ಸುತ್ತಾಡಿಸಿದ್ದೇಕೆ? ಬೆಳಗಾವಿ ಪೊಲೀಸ್ ಆಯುಕ್ತ​ ಯಡಾ ಮಾರ್ಟಿನ್ ಕೊಟ್ಟ ಕಾರಣ ಇಲ್ಲಿದೆ

ಖಾನಾಪುರ ಬಂದ್​ಗೆ ಕರೆ

ಸಿಪಿಐ ಮಂಜುನಾಥ್​​ ನಾಯಕ್​​ ಅಮಾನತು ಖಂಡಿಸಿ ಬಿಜೆಪಿ, ಜೆಡಿಎಸ್​, ದಲಿತ ಪರ, ಕನ್ನಡ ಪರ ಸಂಘಟನೆಗಳು ಅಮಾನತು ಹಿಂಪಡೆಯುವಂತೆ ಆಗ್ರಹಿಸಿ ಖಾನಾಪುರ ಪಟ್ಟಣ ಬಂದ್​ಗೆ ಕರೆ ನೀಡಿವೆ.

ಸರ್ಕಾರ ಮಧ್ಯಪ್ರವೇಶಿಸುವುದಿಲ್ಲ: ಪರಮೇಶ್ವರ್​

ಬೆಳಗಾವಿ ಪೊಲೀಸ್​ ಆಯುಕ್ತರ ​ಕಚೇರಿಯಲ್ಲಿ ಬುಧವಾರ ಗೃಹ ಸಚಿವ ಡಾ.ಪರಮೇಶ್ವರ್, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಸಭೆ ನಡೆಸಿದರು. ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಜಿ ಪರಮೇಶ್ವರ್​, ಸಭೆಯಲ್ಲಿ ಸಿ.ಟಿ.ರವಿ ಪ್ರಕರಣದ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ. ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಸುತ್ತಿದೆ. ತನಿಖಾ ಹಂತದಲ್ಲಿ ಇರುವಾಗ ನಾನು ಆ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.

ಖಾನಾಪುರ ಸಿಪಿ​ಐ ಅಮಾನತು ಇಲಾಖೆ ಅಧಿಕಾರಿಗಳ ನಿರ್ಧಾರವಾಗಿದೆ. ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ ಎಂದರು.

ಬಿಜೆಪಿ ಆಕ್ರೋಶ

ಬೆಳಗಾವಿ ಪೊಲೀಸ್ ಆಯುಕ್ತರ ಕಚೇರಿಗೆ ಬಿಜೆಪಿಯ ಅನಿಲ್ ಬೆನಕೆ, ಸುಭಾಷ್​ ಪಾಟೀಲ್ ನೇತೃತ್ವದ ನಿಯೋಗ ಭೇಟಿ ನೀಡಿತು. ಪೊಲೀಸ್ ಆಯುಕ್ತ ಯಡಾ ಮಾರ್ಟಿನ್, ಐಜಿಪಿ ವಿಕಾಸ್ ಕುಮಾರ್ ಅವರನ್ನು ಭೇಟಿಯಾಗಿ ಸಿಟಿ ರವಿ ಮೇಲೆ ಹಲ್ಲೆ ಮಾಡಿದರವನ್ನು ಅರೆಸ್ಟ್ ಮಾಡುವಂತೆ ಆಗ್ರಹಿಸಿತು. ಇದೇ ವೇಳೆ, ಸಿಪಿಐ ಮಂಜುನಾಥ್ ಅಮಾನತು ಮಾಡಿದ್ದಕ್ಕೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:06 pm, Wed, 25 December 24

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್