AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಮತಾಂತರ ಮಾಡುತ್ತಿದ್ದಾರೆಂದು ಆರೋಪಿಸಿ ಹಲ್ಲೆ, ಸಾಲಬಾಧೆ ತಾಳಲಾರದೆ ವಿಷಸೇವಿಸಿ ರೈತ ಆತ್ಮಹತ್ಯೆ

ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಲಾಗಿದೆ. ಡಿಸೆಂಬರ್ 29ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಾರ್ಥನೆಯ ವೇಳೆ ಮನೆಗೆ ನುಗ್ಗಿ ಹಲ್ಲೆಗೈದ ಆರೋಪ ಕೇಳಿಬಂದಿದೆ.

Crime News: ಮತಾಂತರ ಮಾಡುತ್ತಿದ್ದಾರೆಂದು ಆರೋಪಿಸಿ ಹಲ್ಲೆ, ಸಾಲಬಾಧೆ ತಾಳಲಾರದೆ ವಿಷಸೇವಿಸಿ ರೈತ ಆತ್ಮಹತ್ಯೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jan 01, 2022 | 3:49 PM

Share

ಬೆಳಗಾವಿ: ಮತಾಂತರ ಮಾಡುತ್ತಿದ್ದಾರೆಂದು ಆರೋಪಿಸಿ ಹಲ್ಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಲಾಗಿದೆ. ಡಿಸೆಂಬರ್ 29ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಾರ್ಥನೆಯ ವೇಳೆ ಮನೆಗೆ ನುಗ್ಗಿ ಹಲ್ಲೆಗೈದ ಆರೋಪ ಕೇಳಿಬಂದಿದೆ.

ತುಕ್ಕಾನಟ್ಟಿಯ ಶಿವಾನಂದ ಗೋಟೂರು, ರಮೇಶ ದಂಡಾಪುರ, ಪರಸಪ್ಪ ಬಾಬು, ಫಕ್ಕೀರಪ್ಪ ಬಾಗೇವಾಡಿ, ಕೃಷ್ಣ ಕಾನಿಟ್ಕರ್, ಚೇತನ ಗಡಾಡಿ, ಮಹಾಂತೇಶ್ ಹತ್ತರಗಿ ವಿರುದ್ಧ ದೂರು ದಾಖಲು ಮಾಡಲಾಗಿದೆ. ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಆದರೆ, ಪೊಲೀಸರು ಈವರೆಗೆ ಯಾರ ವಿರುದ್ಧವೂ ಕ್ರಮಕೈಗೊಳ್ಳದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.

ಹಾವೇರಿ: ಸಾಲಬಾಧೆ ತಾಳಲಾರದೆ ವಿಷಸೇವಿಸಿ ರೈತ ಆತ್ಮಹತ್ಯೆ ಸಾಲಬಾಧೆ ತಾಳಲಾರದೆ ವಿಷಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚೆನ್ನಾಪುರ ತಾಂಡಾದಲ್ಲಿ ನಡೆದಿದೆ. ಲೋಕಪ್ಪ ಲಮಾಣಿ (52) ಎಂಬ ರೈತ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಆರು ಎಕರೆ ಜಮೀನು ಹೊಂದಿದ್ದ ರೈತ ಲೋಕಪ್ಪ, ಬ್ಯಾಂಕ್ ಮತ್ತು ಕೈಸಾಲ ಅಂತಾ ಏಳೂವರೆ ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.

ಈರುಳ್ಳಿ, ಮೆಕ್ಕೆಜೋಳ ಮತ್ತು ಶೇಂಗಾ ಬೆಳೆ ಪದೇಪದೆ ಮಳೆಯಿಂದ ಹಾನಿಯಾಗಿದ್ದಕ್ಕೆ ಬೇಸತ್ತು ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲೇ ವಿಷಸೇವಿಸಿ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂವರು ಗಂಡು ಮತ್ತು ಒಂದು ಹೆಣ್ಣು ಸೇರಿದಂತೆ ನಾಲ್ಕು ಮಕ್ಕಳನ್ನು ರೈತ ಲೋಕಪ್ಪ ಅಗಲಿದ್ದಾರೆ. ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಹಾಸ್ಟೆಲ್​ನ ಕುಡಿಯುವ ನೀರಿಗೆ ವಿಷ ಹಾಕಲು ಯತ್ನಿಸಿದ ಪ್ರಕರಣ; ಅಪರಾಧಿಗೆ 7 ವರ್ಷ ಜೈಲು, 10 ಸಾವಿರ ರೂ. ದಂಡ

ಇದನ್ನೂ ಓದಿ: 20 ಲಕ್ಷ ಲಂಚ ಸ್ವೀಕಾರ ಆರೋಪ, ಸಿಬಿಐ ದಾಳಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೆಂಗಳೂರಿನ ಅಧಿಕಾರಿ ಸಹಿತ ನಾಲ್ವರ ಬಂಧನ

Follow Us
Web contact
Web contact

TV9 Kannada

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?