AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಮತಾಂತರ ಮಾಡುತ್ತಿದ್ದಾರೆಂದು ಆರೋಪಿಸಿ ಹಲ್ಲೆ, ಸಾಲಬಾಧೆ ತಾಳಲಾರದೆ ವಿಷಸೇವಿಸಿ ರೈತ ಆತ್ಮಹತ್ಯೆ

ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಲಾಗಿದೆ. ಡಿಸೆಂಬರ್ 29ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಾರ್ಥನೆಯ ವೇಳೆ ಮನೆಗೆ ನುಗ್ಗಿ ಹಲ್ಲೆಗೈದ ಆರೋಪ ಕೇಳಿಬಂದಿದೆ.

Crime News: ಮತಾಂತರ ಮಾಡುತ್ತಿದ್ದಾರೆಂದು ಆರೋಪಿಸಿ ಹಲ್ಲೆ, ಸಾಲಬಾಧೆ ತಾಳಲಾರದೆ ವಿಷಸೇವಿಸಿ ರೈತ ಆತ್ಮಹತ್ಯೆ
ಸಾಂಕೇತಿಕ ಚಿತ್ರ
TV9 Web
| Updated By: ganapathi bhat|

Updated on: Jan 01, 2022 | 3:49 PM

Share

ಬೆಳಗಾವಿ: ಮತಾಂತರ ಮಾಡುತ್ತಿದ್ದಾರೆಂದು ಆರೋಪಿಸಿ ಹಲ್ಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಲಾಗಿದೆ. ಡಿಸೆಂಬರ್ 29ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಾರ್ಥನೆಯ ವೇಳೆ ಮನೆಗೆ ನುಗ್ಗಿ ಹಲ್ಲೆಗೈದ ಆರೋಪ ಕೇಳಿಬಂದಿದೆ.

ತುಕ್ಕಾನಟ್ಟಿಯ ಶಿವಾನಂದ ಗೋಟೂರು, ರಮೇಶ ದಂಡಾಪುರ, ಪರಸಪ್ಪ ಬಾಬು, ಫಕ್ಕೀರಪ್ಪ ಬಾಗೇವಾಡಿ, ಕೃಷ್ಣ ಕಾನಿಟ್ಕರ್, ಚೇತನ ಗಡಾಡಿ, ಮಹಾಂತೇಶ್ ಹತ್ತರಗಿ ವಿರುದ್ಧ ದೂರು ದಾಖಲು ಮಾಡಲಾಗಿದೆ. ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಆದರೆ, ಪೊಲೀಸರು ಈವರೆಗೆ ಯಾರ ವಿರುದ್ಧವೂ ಕ್ರಮಕೈಗೊಳ್ಳದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.

ಹಾವೇರಿ: ಸಾಲಬಾಧೆ ತಾಳಲಾರದೆ ವಿಷಸೇವಿಸಿ ರೈತ ಆತ್ಮಹತ್ಯೆ ಸಾಲಬಾಧೆ ತಾಳಲಾರದೆ ವಿಷಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚೆನ್ನಾಪುರ ತಾಂಡಾದಲ್ಲಿ ನಡೆದಿದೆ. ಲೋಕಪ್ಪ ಲಮಾಣಿ (52) ಎಂಬ ರೈತ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಆರು ಎಕರೆ ಜಮೀನು ಹೊಂದಿದ್ದ ರೈತ ಲೋಕಪ್ಪ, ಬ್ಯಾಂಕ್ ಮತ್ತು ಕೈಸಾಲ ಅಂತಾ ಏಳೂವರೆ ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.

ಈರುಳ್ಳಿ, ಮೆಕ್ಕೆಜೋಳ ಮತ್ತು ಶೇಂಗಾ ಬೆಳೆ ಪದೇಪದೆ ಮಳೆಯಿಂದ ಹಾನಿಯಾಗಿದ್ದಕ್ಕೆ ಬೇಸತ್ತು ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲೇ ವಿಷಸೇವಿಸಿ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂವರು ಗಂಡು ಮತ್ತು ಒಂದು ಹೆಣ್ಣು ಸೇರಿದಂತೆ ನಾಲ್ಕು ಮಕ್ಕಳನ್ನು ರೈತ ಲೋಕಪ್ಪ ಅಗಲಿದ್ದಾರೆ. ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಹಾಸ್ಟೆಲ್​ನ ಕುಡಿಯುವ ನೀರಿಗೆ ವಿಷ ಹಾಕಲು ಯತ್ನಿಸಿದ ಪ್ರಕರಣ; ಅಪರಾಧಿಗೆ 7 ವರ್ಷ ಜೈಲು, 10 ಸಾವಿರ ರೂ. ದಂಡ

ಇದನ್ನೂ ಓದಿ: 20 ಲಕ್ಷ ಲಂಚ ಸ್ವೀಕಾರ ಆರೋಪ, ಸಿಬಿಐ ದಾಳಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೆಂಗಳೂರಿನ ಅಧಿಕಾರಿ ಸಹಿತ ನಾಲ್ವರ ಬಂಧನ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ