18ನೇ ಫೆಬ್ರುವರಿ 1907ರಂದು ನಿರ್ಮಿಸಿದ ಈ ಜಲಾಶಯವು ಸ್ವಯಂಚಾಲಿತ ಗೇಟ್ಗಳಿಂದ ವಿಶ್ವಪ್ರಸಿದ್ಧಿಯಾಗಿದೆ. ಈ ಗೇಟ್ಗಳು ಚಾಲನೆಯಾಗಲು ಯಾವುದೇ ಎಲೆಕ್ಟ್ರಿಕ್ ಅಥವಾ ಮೆಕ್ಯಾನಿಕಲ್ ಶಕ್ತಿ ಬೇಕಿಲ್ಲ. ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರು ಸಹ ಈ ಜಲಾಶಯ ನಿರ್ಮಾಣಕ್ಕಾಗಿ ಶ್ರಮಿಸಿದ್ದರು. ಕೊಲ್ಹಾಪುರ ಜಿಲ್ಲೆಯು ಕಬ್ಬು ಬೆಳೆಗೆ ಪ್ರಸಿದ್ಧವಾಗಲು ಈ ಜಲಾಶಯದ ಕೊಡುಗೆ ಬಹುದೊಡ್ಡದು. ಕೊಲ್ಹಾಪುರ ನಗರದ ಕುಡಿಯುವ ನೀರಿನ ಬೇಡಿಕೆಯನ್ನೂ ಈ ಜಲಾಶಯ ತಣಿಸುತ್ತದೆ.
ಜಲಾಶಯದ ಗೇಟ್ ಏಕಾಏಕಿ ತೆರೆದುಕೊಂಡ ಹಿನ್ನೆಲೆಯಲ್ಲಿ ಪಂಚಗಂಗಾ ನದಿಯಲ್ಲಿ ನೀರಿನ ಪ್ರಮಾಣ ನಿರಂತರ ಏರಿಕೆಯಾಗುತ್ತಿದೆ. ನದಿಯಲ್ಲಿ ಸುಮಾರು 5 ಅಡಿಗಳಷ್ಟು ನೀರು ಹೆಚ್ಚಾಗುವ ಸಾಧ್ಯತೆಯಿದೆ. ಜನರು ನದಿದಂಡೆಯಿಂದ ದೂರ ಇರಬೇಕು ಎಂದು ಕೊಲ್ಹಾಪುರ ಜಿಲ್ಲಾಡಳಿತ ಮನವಿ ಮಾಡಿದೆ. ಜಲಾಶಯದ ಗೇಟ್ ಅವಘಡದ ಕಾರಣಗಳ ಬಗ್ಗೆ ಮಹಾರಾಷ್ಟ್ರ ಸರ್ಕಾರ ತನಿಖೆಗೆ ಆದೇಶಿಸಿದೆ.. ಪ್ರಾಥಮಿಕ ವರದಿಗಳ ಪ್ರಕಾರ ಶಾರ್ಟ್ ಸರ್ಕೀಟ್ನಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಜಲಾಶಯದಿಂದ 4,000 ಕ್ಯೂಸೆಕ್ಸ್ನಷ್ಟು ನೀರು ಹೊರಬರುತ್ತಿದೆ.
ಇದನ್ನೂ ಓದಿ: ಜೋಡೆತ್ತುಗಳಲ್ಲಿ ಒಂದು ಈಗ ಮೇಕೆದಾಟು ಕಡೆ ಹೊಂಟೈತೆ ಎಂದು ಡಿಕೆ ಶಿವಕುಮಾರ್ಗೆ ಲೇವಡಿ ಮಾಡಿದ ರೇವಣ್ಣ
ಇದನ್ನೂ ಓದಿ: ಆಗ ಸುಮ್ಮನಿದ್ದ ಕಾಂಗ್ರೆಸ್ ನಾಯಕರಿಗೆ ಈಗೇಕೆ ಉತ್ಸಾಹ, ಮೇಕೆದಾಟು ಇವರಿಗೆ ವ್ಯಾಪಾರ: ಕಾಂಗ್ರೆಸ್, ಬಿಜೆಪಿ ವಿರುದ್ಧ ರೇವಣ್ಣ ವಾಗ್ದಾಳಿ