Sign In

By signing in or creating an account, you agree with Associated Broadcasting Company's Terms & Conditions and Privacy Policy.

Flood Alert: ಮಹಾರಾಷ್ಟ್ರದ ರಾಧಾನಗರಿ ಜಲಾಶಯದಲ್ಲಿ ಅವಘಡ: ಕರ್ನಾಟಕಕ್ಕೆ ಪ್ರವಾಹದ ಅಪಾಯ

ಈ ಗೇಟ್​ಗಳು ಚಾಲನೆಯಾಗಲು ಯಾವುದೇ ಎಲೆಕ್ಟ್ರಿಕ್ ಅಥವಾ ಮೆಕ್ಯಾನಿಕಲ್ ಶಕ್ತಿ ಬೇಕಿಲ್ಲ. ಭಾರತ ರತ್ನ ಸರ್​ ಎಂ.ವಿಶ್ವೇಶ್ವರಯ್ಯ ಅವರು ಸಹ ಈ ಜಲಾಶಯ ನಿರ್ಮಾಣಕ್ಕಾಗಿ ಶ್ರಮಿಸಿದ್ದರು.

Flood Alert: ಮಹಾರಾಷ್ಟ್ರದ ರಾಧಾನಗರಿ ಜಲಾಶಯದಲ್ಲಿ ಅವಘಡ: ಕರ್ನಾಟಕಕ್ಕೆ ಪ್ರವಾಹದ ಅಪಾಯ
ರಾಧಾನಗರಿ ಜಲಾಶಯ (ಸಂಗ್ರಹ ಚಿತ್ರ. ಕೃಪೆ: twitter.com/mumbaikhabar9)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 29, 2021 | 6:11 PM

ಕೊಲ್ಹಾಪುರ: ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿ ಭೋಗವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಮಹತ್ವದ ರಾಧಾನಗರಿ ಜಲಾಶಯದ ಗೇಟ್ ರಿಪೇರಿ ವೇಳೆ ಅವಘಡ ಸಂಬಂಧಿಸಿದ್ದು, ಜಲಾಶಯದಲ್ಲಿದ್ದ ಅಪಾರ ಪ್ರಮಾಣದ ನೀರು ತಾಂತ್ರಿಕ ದೋಷದಿಂದಾಗಿ ನದಿಗೆ ಹರಿದುಬರುತ್ತಿದೆ. ಜಲಾಶಯದ ಗೇಟ್​ಗಳನ್ನು 18 ಅಡಿಗಳಷ್ಟು ಎತ್ತರಿಸಲು ಅಧಿಕಾರಿಗಳು ಮುಂದಾಗಿದ್ದಾಗ ಈ ಅವಘಡ ಸಂಬಂಧಿಸಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಬೆಳಿಗ್ಗೆ 9.30ಕ್ಕೆ ಗೇಟು ಏಕಾಏಕಿ ತೆರೆದುಕೊಂಡಿತು. ಅಪಾರ ಪ್ರಮಾಣದ ನೀರು ನದಿಗೆ ಹರಿದು ಬರುತ್ತಿರುವುದರಿಂದ ಕರ್ನಾಟಕದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲ್ಲೂಕುಗಳ ದೂದಗಂಗಾ, ವೇದಗಂಗಾ ಹಾಗೂ ಕೃಷ್ಣಾ ನದಿ ತೀರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ರಾಧಾನಗರಿ ಜಲಾಶಯದ ಸಾಮರ್ಥ್ಯ 8 ಟಿಎಂ‌ಸಿ ಅಡಿ. ಜಲಾಶಯದ ಆರು ಗೇಟ್​ಗಳ ಪೈಕಿ ಒಂದು ಗೇಟ್ ಏಕಾಏಕಿ ತೆರೆದುಕೊಂಡಿದ್ದು, ನದಿ ತೀರದ ಜನರಲ್ಲಿ ಪ್ರವಾಹದ ಆತಂಕ ತಂದೊಂಡ್ಡಿದೆ.

18ನೇ ಫೆಬ್ರುವರಿ 1907ರಂದು ನಿರ್ಮಿಸಿದ ಈ ಜಲಾಶಯವು ಸ್ವಯಂಚಾಲಿತ ಗೇಟ್​ಗಳಿಂದ ವಿಶ್ವಪ್ರಸಿದ್ಧಿಯಾಗಿದೆ. ಈ ಗೇಟ್​ಗಳು ಚಾಲನೆಯಾಗಲು ಯಾವುದೇ ಎಲೆಕ್ಟ್ರಿಕ್ ಅಥವಾ ಮೆಕ್ಯಾನಿಕಲ್ ಶಕ್ತಿ ಬೇಕಿಲ್ಲ. ಭಾರತ ರತ್ನ ಸರ್​ ಎಂ.ವಿಶ್ವೇಶ್ವರಯ್ಯ ಅವರು ಸಹ ಈ ಜಲಾಶಯ ನಿರ್ಮಾಣಕ್ಕಾಗಿ ಶ್ರಮಿಸಿದ್ದರು. ಕೊಲ್ಹಾಪುರ ಜಿಲ್ಲೆಯು ಕಬ್ಬು ಬೆಳೆಗೆ ಪ್ರಸಿದ್ಧವಾಗಲು ಈ ಜಲಾಶಯದ ಕೊಡುಗೆ ಬಹುದೊಡ್ಡದು. ಕೊಲ್ಹಾಪುರ ನಗರದ ಕುಡಿಯುವ ನೀರಿನ ಬೇಡಿಕೆಯನ್ನೂ ಈ ಜಲಾಶಯ ತಣಿಸುತ್ತದೆ.

ಜಲಾಶಯದ ಗೇಟ್​ ಏಕಾಏಕಿ ತೆರೆದುಕೊಂಡ ಹಿನ್ನೆಲೆಯಲ್ಲಿ ಪಂಚಗಂಗಾ ನದಿಯಲ್ಲಿ ನೀರಿನ ಪ್ರಮಾಣ ನಿರಂತರ ಏರಿಕೆಯಾಗುತ್ತಿದೆ. ನದಿಯಲ್ಲಿ ಸುಮಾರು 5 ಅಡಿಗಳಷ್ಟು ನೀರು ಹೆಚ್ಚಾಗುವ ಸಾಧ್ಯತೆಯಿದೆ. ಜನರು ನದಿದಂಡೆಯಿಂದ ದೂರ ಇರಬೇಕು ಎಂದು ಕೊಲ್ಹಾಪುರ ಜಿಲ್ಲಾಡಳಿತ ಮನವಿ ಮಾಡಿದೆ. ಜಲಾಶಯದ ಗೇಟ್ ಅವಘಡದ ಕಾರಣಗಳ ಬಗ್ಗೆ ಮಹಾರಾಷ್ಟ್ರ ಸರ್ಕಾರ ತನಿಖೆಗೆ ಆದೇಶಿಸಿದೆ.. ಪ್ರಾಥಮಿಕ ವರದಿಗಳ ಪ್ರಕಾರ ಶಾರ್ಟ್​ ಸರ್ಕೀಟ್​ನಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಜಲಾಶಯದಿಂದ 4,000 ಕ್ಯೂಸೆಕ್ಸ್​ನಷ್ಟು ನೀರು ಹೊರಬರುತ್ತಿದೆ.

ಇದನ್ನೂ ಓದಿ: ಜೋಡೆತ್ತುಗಳಲ್ಲಿ ಒಂದು ಈಗ ಮೇಕೆದಾಟು ಕಡೆ ಹೊಂಟೈತೆ ಎಂದು ಡಿಕೆ ಶಿವಕುಮಾರ್​ಗೆ ಲೇವಡಿ ಮಾಡಿದ ರೇವಣ್ಣ ಇದನ್ನೂ ಓದಿ: ಆಗ ಸುಮ್ಮನಿದ್ದ ಕಾಂಗ್ರೆಸ್ ನಾಯಕರಿಗೆ ಈಗೇಕೆ ಉತ್ಸಾಹ, ಮೇಕೆದಾಟು ಇವರಿಗೆ ವ್ಯಾಪಾರ: ಕಾಂಗ್ರೆಸ್, ಬಿಜೆಪಿ ವಿರುದ್ಧ ರೇವಣ್ಣ ವಾಗ್ದಾಳಿ

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್