AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಕರಾಳ ದಿನ ಆಚರಣೆಗೆ ಅನುಮತಿ ಇಲ್ಲ, ಎಂಇಎಸ್​ಗೆ ಡಿಸಿ ಖಡಕ್​ ಎಚ್ಚರಿಕೆ

ನವೆಂಬರ್​ 1 ಕರ್ನಾಟಕ ರಾಜ್ಯೋತ್ಸವ ದಿನ ಕರಾಳ ದಿನ ಆಚರಿಸಲು ಎಂಇಎಸ್​ಗೆ ಅನುಮತಿ ನೀಡುವುದಿಲ್ಲ. ಒಂದು ವೇಳೆ ಆಚರಿಸಲು ಮುಂದಾದರೆ ಎಂಇಎಸ್​ ಪುಂಡರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದ್ದಾರೆ.

Sahadev Mane
| Edited By: |

Updated on:Oct 09, 2024 | 10:27 AM

Share

ಬೆಳಗಾವಿ, ಅಕ್ಟೋಬರ್​​ 09: ಕರ್ನಾಟಕ ರಾಜ್ಯೋತ್ಸವ ದಿನ (ನವೆಂಬರ್​ 1) ಕರಾಳ ದಿನ ಆಚರಿಸಲು ಅನುಮತಿ ಕೋರಿ ಮಹರಾಷ್ಟ್ರ ಏಕೀಕರಣ ಸಮಿತಿ (MES​) ಮುಖಂಡರಿಗೆ ಅನುಮತಿ ನೀಡುವುದಿಲ್ಲ ಎಂದು ಬೆಳಗಾವಿ (Belagavi) ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದ್ದಾರೆ.

ರಾಜ್ಯೋತ್ಸವ ಹಿನ್ನೆಲೆ ಕನ್ನಡ ಪರ ಸಂಘಟನೆಗಳ ಜತೆ ಜಿಲ್ಲಾಧಿಕಾರಿ ಮೊಹಮ್ಮದ್​ ರೋಷನ್​ ಮಂಗಳವಾರ ಪೂರ್ವಭಾವಿ ಸಭೆ ನಡೆಸಿದರು. ಸಭೆಯಲ್ಲಿ ಎಂಇಎಸ್​ ಪುಂಡರು ಕರಾಳ ದಿನ ಆಚರಿಸುವ ವಿಚಾರವೂ ಪ್ರಸ್ತಾಪವಾಯಿತು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್​ ರೋಷನ್​, ಬೆಳಗಾವಿಯಲ್ಲಿ ಕರಾಳ‌ ದಿನ ಆಚರಣೆಗೆ ಅವಕಾಶ ಕೊಡುವುದಿಲ್ಲ. ಕರಾಳ‌ ದಿನ ಆಚರಣೆಗೆ ಮುಂದಾದರೆ ಪೊಲೀಸರು ಪ್ರಕರಣ ದಾಖಲಿಸುತ್ತಾರೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ “ಕೈ”ಗೆ ಎಂಇಎಸ್​ ಸಾಥ್​​; ಬಿಜೆಪಿ ಕಾರ್ಪೊರೇಟರ್​​​ಗೆ ಜೀವ ಬೆದರಿಕೆ

ಬೆಳಗಾವಿ ಜಿಲ್ಲಾಡಳಿತದ ದಿಟ್ಟತನಕ್ಕೆ ಕನ್ನಡ ಹೋರಾಟಗಾರರು ಚಪ್ಪಾಳೆ ತಟ್ಟಿ ಸ್ವಾಗತಿಸಿದರು. ಈ ಬಾರಿ ದೀಪಾವಳಿ ಹಬ್ಬ ಮತ್ತು ಕನ್ನಡ ರಾಜ್ಯೋತ್ಸವ ಒಟ್ಟಿಗೆ ಬಂದಿದ್ದರಿಂದ ಅದ್ಧೂರಿಯಾಗಿ ರಾಜ್ಯೋತ್ಸವ ಆಚರಿಸಲು ತೀರ್ಮಾನ ಕೈಗೊಳ್ಳಲಾಗಿದೆ.

1956ರಲ್ಲಿ ರಾಜ್ಯಗಳ ಪುನರ್​ ವಿಂಗಡಣೆ ಆದ ಬಳಿಕ ರಾಜ್ಯದ ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರದೊಂದಿಗೆ ವಿಲೀನಗೊಳಿಸಬೇಕೆಂದು ಒತ್ತಾಯಿಸಲು ಎಂಇಎಸ್​ ಹುಟ್ಟಿಕೊಂಡಿತು. ಕರ್ನಾಟಕ ರಾಜ್ಯ ಉದಯವಾದ ದಿನದಂದೇ ಕರಾಳ ದಿನ ಆಚರಿಸುತ್ತ ಬರಲಾಗಿದೆ. ದಶಕಗಳ ಹಿಂದೆ ಬೃಹತ್​ ಪ್ರಮಾಣದ ರ್ಯಾಲಿ ನಡೆಯುತ್ತಿತ್ತು. ಆದರೆ, ಈಗ ಒಂದು ಜಾಗಕ್ಕೆ ಮಾತ್ರ ಸೀಮಿತಗೊಂಡು ಆಚರಿಸುತ್ತ ಬಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:18 am, Wed, 9 October 24

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು