AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪದ ಬುಡವೇ ಕತ್ತಲೆ: ವಿದ್ಯುತ್​​ ನೀಡುವ ಹಿಡಕಲ್ ಡ್ಯಾಂನ ನೀರಾವರಿ ನಿಗಮದ ಕಚೇರಿಯಲ್ಲೇ ಕರೆಂಟಿಲ್ಲ!

Belagavi News: ಬೆಳಗಾವಿಯ ಹಿಡಕಲ್ ಡ್ಯಾಂ ನೀರಾವರಿ ನಿಗಮದ ಕಚೇರಿಗಳು ಬರೋಬ್ಬರಿ 1.98 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದಕ್ಕಾಗಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘವು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದು, ಅಧಿಕಾರಿಗಳು ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ. 2022ರ ಸೆಪ್ಟಂಬರ್​​ನಲ್ಲಿ ಅವರು ವಿದ್ಯುತ್​​ ಬಿಲ್​​ ಪಾವತಿಸಿರೋದು. ಆ ಬಳಿಕ ಒಂದು ರೂಪಾಯಿಯನ್ನೂ ಇಲಾಖೆ ಪಾವತಿಸಿಲ್ಲ ಎನ್ನಲಾಗಿದೆ.

ದೀಪದ ಬುಡವೇ ಕತ್ತಲೆ: ವಿದ್ಯುತ್​​ ನೀಡುವ ಹಿಡಕಲ್ ಡ್ಯಾಂನ ನೀರಾವರಿ ನಿಗಮದ ಕಚೇರಿಯಲ್ಲೇ ಕರೆಂಟಿಲ್ಲ!
ನೀರಾವರಿ ಇಲಾಖೆ ಕಚೇರಿImage Credit source: Tv9 Kannada
Sahadev Mane
| Edited By: |

Updated on: Jun 23, 2026 | 3:43 PM

Share

ಬೆಳಗಾವಿ, ಜೂನ್​​ 23: ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಗ್ರಾಮದಲ್ಲಿ ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹಿಡಕಲ್ ಡ್ಯಾಂ ನೀರಿನಿಂದ ವಿದ್ಯುತ್ ಉತ್ಪಾದಿಸಿಲಾಗುತ್ತೆ. ಆದರೆ ದುರ್ದೈವ ಅಂದರೆ ಇದೇ ಜಲಾಶಯ ಪ್ರದೇಶದಲ್ಲಿರುವ ನೀರಾವರಿ ಇಲಾಖೆ ಕಚೇರಿಯಲ್ಲಿಯೇ ಕರೆಂಟಿಲ್ಲ. ಹೌದು, 1.98 ಕೋಟಿ‌ ರೂ. ವಿದ್ಯುತ್‌ ಬಿಲ್ ಬಾಕಿ ಹಿನ್ನೆಲೆ ನೀರಾವರಿ‌ ಇಲಾಖೆ ಕಚೇರಿಯ ವಿದ್ಯುತ್​​ ಸಂಪರ್ಕ ಕಡಿತಗೊಳಿಸಲಾಗಿದೆ. ಹೀಗಾಗಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕತ್ತಲಲ್ಲೆ ಕಾಲ‌ ಕಳೆಯುತ್ತಿದ್ದಾರೆ.

2022ರಿಂದ 1 ಕೋಟಿ 98 ಲಕ್ಷ 15 ಸಾವಿರ ಬಾಕಿ ವಿದ್ಯುತ್​​ ಬಿಲ್​​ ಬಂದಿಲ್ಲ. ಈ ಸಂಬಂಧ ನೋಟಿಸ್​​ ಕೊಟ್ಟರೂ  ಹಣ ತುಂಬಿಲ್ಲ. ಹೀಗಾಗಿ ಇಲಾಖೆಗೆ ಸಂಬಂಧಿಸಿದ ಮುಖ್ಯ ಅಭಿಯಂತರರ ಕಚೇರಿಗೆ ವಿದ್ಯುತ್​​ ಸರಬರಾಜನ್ನು ಬಂದ್​​ ಮಾಡಿದ್ದೇವೆ. ಇಷ್ಟು ದೊಡ್ಡ ಮೊತ್ತದ ವಿದ್ಯುತ್​​ ಬಿಲ್​​ನ ಬಾಕಿ ಇರಿಸಿಕೊಂಡಿರುವ ಕಾರಣ ಸಂಘದ ಹಿತದೃಷ್ಟಿಯಿಂದ ನಾವು ಕ್ರಮ ಕೈಗೊಂಡಿದ್ದೇವೆ ಎಂದು ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ ಮಹಾವೀರ ನಿಲಜಗಿ ತಿಳಿಸಿದ್ದಾರೆ.

ಇದನ್ನೂ ಓದಿ: ರಾಕಸಕೊಪ್ಪ ಡ್ಯಾಂ ಖಾಲಿ ಖಾಲಿ; ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ

ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘವು ರಾಜ್ಯದಲ್ಲಿ ವಿದ್ಯುತ್​​ ಸರಬರಾಜು ಮಾಡುವ ಏಕೈಕ ಸಹಕಾರಿ ಸಂಘವಾಗಿದ್ದು, ವಿದ್ಯುತ್​​ ಬಿಲ್​​ ಬಾಕಿ ಉಳಿಸಿಕೊಂಡಿರುವ ಬಗ್ಗೆ ಕಳೆದ 4 ವರ್ಷಗಳಿಂದ ನೀರಾವರಿ ಇಲಾಖೆ ಹಲವು ಬಾರಿ ಮಾಹಿತಿ ನೀಡಲಾಗಿದೆ. ಆದರೆ ಕಾರಣ ಹೇಳಿಕೊಂಡು ಇಷ್ಟು ದಿನ ದೂಡಿದ್ದಾರೆ.  ಹೀಗಾಗಿ ಅವರ ವಸತಿ ಪ್ರದೇಶ, ಡ್ಯಾಂ ಇರುವ ಸ್ಥಳ ಸೇರಿ ಯಾವುದಕ್ಕೂ ತೊಂದರೆ ಆಗದಂತೆ ಇಲಾಖೆ ಕಚೇರಿಯ ವಿದ್ಯುತ್​​ ಸಂಪರ್ಕವನ್ನು ಮಾತ್ರ ಕಡಿತಗೊಳಿಸಿದ್ದೇವೆ. ವರ್ಷದಲ್ಲಿ ಕನಿಷ್ಠ 25-50 ಲಕ್ಷ ಹಣವನ್ನಾದರೂ ಅವರು ಕಟ್ಟಬಹುದಿತ್ತು. ಹೀಗಾದರೆ ನಾವು ಸಹಕಾರ ಸಂಘವನ್ನು ನಡೆಸೋದು ಹೇಗೆ? 2022ರ ಸೆಪ್ಟಂಬರ್​​ನಲ್ಲಿ ಅವರು ವಿದ್ಯುತ್​​ ಬಿಲ್​​ ಪಾವತಿಸಿರೋದು. ಆ ಬಳಿಕ ಒಂದು ರೂಪಾಯಿಯನ್ನೂ ಇಲಾಖೆ ಪಾವತಿಸಿಲ್ಲ.  ಈ ಕಾರಣಕ್ಕೆ ಬಿಲ್​​ ಪಾವತಿ ಮಾಡುವವರೆಗೂ ಮರಳಿ ವಿದ್ಯುತ್​​ ಸಂಪರ್ಕ ನೀಡಲ್ಲ ಎಂದು ಸಂಘ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್