AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ಗೆ ರಾಜಾತಿಥ್ಯದಿಂದ ಕಟ್ಟುನಿಟ್ಟಾದ ಜೈಲುಗಳು​​​: ಹಿಂಡಲಗಾ ಖೈದಿಗಳ ಪ್ರತಿಭಟನೆ

ಕೊಲೆ ಆರೋಪದಲ್ಲಿ ನಟ ದರ್ಶನ್​ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿದ್ದಾಗ ರಾಜಾತಿಥ್ಯ ನೀಡಿರುವ ಫೋಟೋ ವೈರಲ್​ ಆಗಿತ್ತು. ನಂತರ ಸರ್ಕಾರ ರಾಜ್ಯದ ಎಲ್ಲ ಜೈಲುಗಳಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿಗೆ ತಂದಿದೆ. ಇದರಿಂದ ಆಕ್ರೋಶಗೊಂಡು ಹಿಂಡಲಗಾ ಜೈಲು ಖೈದಿಗಳು ಪ್ರತಿಭಟನೆ ನಡೆಸಿದರು.

ದರ್ಶನ್​ಗೆ ರಾಜಾತಿಥ್ಯದಿಂದ ಕಟ್ಟುನಿಟ್ಟಾದ ಜೈಲುಗಳು​​​: ಹಿಂಡಲಗಾ ಖೈದಿಗಳ ಪ್ರತಿಭಟನೆ
ದರ್ಶನ್​​, ಹಿಂಡಲಗಾ ಜೈಲು
TV9 Web
| Edited By: |

Updated on: Sep 01, 2024 | 1:26 PM

Share

ಬೆಳಗಾವಿ, ಸಪ್ಟೆಂಬರ್​ 01: ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನಗೆ (Darshan) ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ (Bengaluru Central Jail) ರಾಜಾತಿಥ್ಯ ನೀಡಲಾಗಿದೆ ಎಂಬ ಫೋಟೋವೊಂದು ವೈರಲ್​ ಆಗಿತ್ತು. ಈ ಫೋಟೋ ವೈರಲ್​ ಆಗುತ್ತಿದ್ದಂತೆ, ಶೇಕ್​ ಆದ ಸರ್ಕಾರ ರಾಜ್ಯದ ಎಲ್ಲ ಕಾರಾಗೃಹಗಳಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದೆ. ಇದರಿಂದ ಖೈದಿಗಳಿಗೆ ದೊರಕುತ್ತಿದ್ದ ಮತ್ತು ಏರಿಸುವ ವಸ್ತುಗಳು ಬಂದ್​ ಆಗಿವೆ. ಇದರಿಂದ ಆಕ್ರೋಶಗೊಂಡಿರುವ ಬೆಳಗಾವಿಯ ಹಿಂಡಲಗಾ ಜೈಲು (Hindalga Jail) ಖೈದಿಗಳು ವಿಶೇಷ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ ನಡೆಸಿದರು.

ಬೀಡಿ, ಸಿಗರೇಟ್, ತಂಬಾಕು ನೀಡುವಂತೆ ಖೈದಿಗಳು ಬೆಳಗಿನ ಉಪಾಹಾರ ತಿರಸ್ಕರಿಸಿ ಪ್ರತಿಭಟನೆ ನಡೆಸಿದರು. ಬೀಡಿ, ಸಿಗರೇಟ್ ತಂಬಾಕು ಕೊಡುವವರಗೆ ನಾವು ತಿಂಡಿ, ಊಟ ಮಾಡುವುದಿಲ್ಲ ಎಂದು ಪಟ್ಟು ಹಿಡದಿದ್ದಾರೆ ಎಂದು ಟಿವಿ9ಗೆ ಹಿಂಡಲಗಾ ಜೈಲಿನ ಮೂಲಗಳಿಂದ ಮಾಹಿತಿ ದೊರತಿದೆ.

ಪರಪ್ಪನ ಅಗ್ರಹಾರದಲ್ಲಿ ಕೊಲೆ ಆರೋಪಿ ನಟ ದರ್ಶನ್​ಗೆ ರಾಜಾತಿಥ್ಯ ದೊರೆಯುತ್ತಿರುವ ಫೋಟೋ ಹೊರ ಬರುತ್ತಿದ್ದಂತೆ ರಾಜ್ಯ ಸರ್ಕಾರ ಎಚ್ಚತ್ತಿದ್ದು, ಕೂಡಲೆ ಒಂಬತ್ತು ಅಧಿಕಾರಿಗಳನ್ನು ಅಮಾನತು ಮಾಡಿದೆ. ಅಲ್ಲದೇ, ದರ್ಶನ್​​ರನ್ನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್​​ ಮಾಡಲಾಗಿದೆ. ಮತ್ತು ದರ್ಶನ್​ ಚಹಚರರನ್ನು ರಾಜ್ಯ ವಿವಿಧ ಕೇಂದ್ರ ಕಾರಾಗೃಹಗಳಿಗೆ ಶಿಫ್ಟ್​ ಮಾಡಲಾಗಿದೆ.

ಇದನ್ನೂ ಓದಿ: ದರ್ಶನ್​​ಗೆ ಅಭಿಮಾನಿಗಳಿಂದಲೇ ಸಂಕಷ್ಟ? ಪ್ರಕರಣದಲ್ಲಿ ಮುಂದಿನ ಹೆಜ್ಜೆಯೇನು?

ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ನಟ ದರ್ಶನರನ್ನ ಶಿಫ್ಟ್​ ಮಾಡಿರುವ ವಿಚಾರವಾಗಿ ಜಿಲ್ಲೆಯ ಉಸ್ತುವಾರಿ ಸಚಿವ ಜಮೀರ್​ ಅಹ್ಮದ್​ ಮಾತನಾಡಿ, ನಾನು ಬಳ್ಳಾರಿ ಜಿಲ್ಲಾ ಉಸ್ತುವಾರಿ ಮಂತ್ರಿ ಇರಬಹುದು, ಡಿಜಿ ಅಲ್ಲ. ಜೈಲಿನಲ್ಲಿ ರಾಜಾತಿಥ್ಯದ ಫೋಟೋಗಳು ಮಾಧ್ಯಮದಲ್ಲೇ ಬಂದಿದೆ. ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದ್ದು​ ಪೊಲೀಸ್ ಇಲಾಖೆ ತೀರ್ಮಾನ ಎಂದು ಹೇಳಿದರು.

ಬಳ್ಳಾರಿ ಜೈಲಿನಲ್ಲಿ ದರ್ಶನ್

ದರ್ಶನ್ ಬಳ್ಳಾರಿ ಜೈಲಿಗೆ ಬಂದು ಇಂದಿಗೆ ನಾಲ್ಕು ದಿನಗಳಾಗಿವೆ. ಶನಿವಾರ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಪತಿಯನ್ನು ಕಾಣಲು ಬಂದಿದ್ದರು. ಪತಿಗಾಗಿ ಎರಡು ಚೀಲಗಳಲ್ಲಿ ವಿವಿಧ ವಸ್ತುಗಳನ್ನು ತಂದಿದ್ದರು. ಕೆಲವು ತಿಂಡಿಗಳು, ಡ್ರೈ ಫ್ರೂಟ್ಸ್ ಗಳನ್ನು ತಂದಿದ್ದರು. ಬಟ್ಟೆಗಳನ್ನು ತಂದಿದ್ದರು. ಕಾಣಲು ಬಂದ ವಿಜಯಲಕ್ಷ್ಮಿ ಜೊತೆಗೆ ಸುಮಾರು ಅರ್ಧ ಗಂಟೆ ಕಾಲ ದರ್ಶನ್ ಮಾತನಾಡಿದ್ದಾರೆ. ಆ ನಂತರ ತುಸು ನಿರಾಳವಾಗಿ ಇದ್ದರಂತೆ ದರ್ಶನ್.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ