AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi News: ಗಂಡ ಬೇರೆ ಮನೆ ಮಾಡಲಿಲ್ಲ ಅಂತ ಅತ್ತೆಯನ್ನೇ ಹೊಡೆದು ಕೊಂದ ಸೊಸೆ: ಸಾವಿಗೆ ಅವಳೇ ಕಾರಣವೆಂದು ಆರೋಪಿಸಿದ ಕುಟುಂಬಸ್ಥರು

ಗಂಡ ಬೇರೆ‌ ಮನೆ ಮಾಡಲಿಲ್ಲವೆಂದು ತವರು ಮನೆಯವರನ್ನ ಕರೆಯಿಸಿ ಅತ್ತೆ, ಗಂಡನ ಮೇಲೆ ಹಲ್ಲೆ ಮಾಡಿದ್ದು, ತೀವ್ರವಾಗಿ ಹಲ್ಲೆಗೊಳಗಾಗಿದ್ದ ಮಹಾಬೂಬಿ ಯಾಕೂಶಿ(53) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದಿದೆ.

Belagavi News: ಗಂಡ ಬೇರೆ ಮನೆ ಮಾಡಲಿಲ್ಲ ಅಂತ ಅತ್ತೆಯನ್ನೇ ಹೊಡೆದು ಕೊಂದ ಸೊಸೆ: ಸಾವಿಗೆ ಅವಳೇ ಕಾರಣವೆಂದು ಆರೋಪಿಸಿದ ಕುಟುಂಬಸ್ಥರು
ಸೊಸೆ ಮೇಹರೂಣಿ, ಗಂಡ ಸುಬಾನ್ ಯಾಕೂಶಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್| Edited By: |

Updated on:Jun 13, 2023 | 4:30 PM

Share

ಬೆಳಗಾವಿ: ಗಂಡ ಬೇರೆ‌ ಮನೆ ಮಾಡಲಿಲ್ಲವೆಂದು ತವರು ಮನೆಯವರನ್ನ ಕರೆಯಿಸಿ ಅತ್ತೆ, ಗಂಡನ ಮೇಲೆ ಹಲ್ಲೆ ಮಾಡಿದ್ದು, ತೀವ್ರವಾಗಿ ಹಲ್ಲೆಗೊಳಗಾಗಿದ್ದ ಮಹಾಬೂಬಿ ಯಾಕೂಶಿ(53) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬೈಲಹೊಂಗಲ (Bailhongal) ಪಟ್ಟಣದಲ್ಲಿ ನಡೆದಿದೆ. ಮೇ.22ರಂದು ಸೊಸೆ ಮೇಹರೂಣಿ ಯಾಕೂಶಿ ಮತ್ತು ಇಬ್ಬರು ಸಹೋದರರ ಜತೆ ಸೇರಿ ಹಲ್ಲೆ ಮಾಡಲಾಗಿತ್ತು. ಈ ವೇಳೆ ರಾಡ್‌ನಿಂದ ಗಂಡ ಸುಬಾನ್ ಮತ್ತು ಅತ್ತೆ ಮಹಾಬೂಬಿ ಮೇಲೆ ಹಲ್ಲೆ ನಡೆಸಿದ್ದರು. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಮಹಾಬೂಬಿ ಇಂದು(ಜೂ.13) ಸಾವನ್ನಪ್ಪಿದ್ದಾಳೆ. ಈ ಸಾವಿಗೆ ಸೊಸೆ ಮೇಹರೂಣಿ ಮತ್ತು ಇಬ್ಬರು ತಮ್ಮಂದಿರೇ ಕಾರಣ ಅಂತಾ ಪತಿ ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.

ಮೂರು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಮೇಹರೂಣಿ ಮತ್ತು ಸುಬಾನ್

ಇನ್ನು ಇವರಿಬ್ಬರು ಮೂರು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯಾಗಿ ಒಂದು ವರ್ಷ ಚೆನ್ನಾಗಿಯೇ ಇದ್ದ ಸಂಸಾರದಲ್ಲಿ ಬಿರುಗಾಳಿ ಬೀಸಲಾರಂಭಿಸಿತ್ತು. ಹೌದು ಒಂದು ವರ್ಷದ ಬಳಿಕ ಪತ್ನಿ ಮೇಹರೂಣಿ ಬೇರೆ ಮನೆ ಮಾಡುವಂತೆ ಗಂಡನಿಗೆ ಕಿರುಕುಳ ನೀಡಲು ಆರಂಭಿಸಿದ್ದಳು. ಇದನ್ನ ಒಪ್ಪದ ಸುಬಾನ್ ಹಾಗೂ ಅತ್ತೆ ಜೊತೆ ನಿರಂತರ ಜಗಳವಾಡುತ್ತಿದ್ದಳು. ಇದೇ ಜಗಳ ತಾರಕಕ್ಕೇರಿ ಮೇ. 22ರಂದು ಮೇಹರೂಣಿ ಮತ್ತು ಅವಳ ಸಹೋದರರಾದ ಶೋಯೆಬ್‌, ಸಮನ್ ತಿಗಡಿಯನ್ನ ಕರೆಯಿಸಿ ಇಬ್ಬರ ಮೇಲೂ ಹಲ್ಲೆ ಮಾಡಿಸಿದ್ದಳು. ಇದರಿಂದ ತೀವ್ರ ಗಾಯಗೊಂಡ ಅತ್ತೆ ಸಾವನ್ನಪ್ಪಿದ್ದಾಳೆ. ಇದೀಗ ಮೂರು ಜನರ ವಿರುದ್ಧ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೊಸೆ ಮತ್ತು ಸಹೋದರರನ್ನ ಬಂಧಿಸುವಂತೆ ಪತಿ ಮತ್ತು ಕುಟುಂಬಸ್ಥರ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಆಟೋ ಬಾಡಿಗೆ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ, ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದವ ದುರಂತ ಸಾವು

ಕೆಆರ್‌ಎಸ್ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಮೈಸೂರು: ತಾಲೂಕಿನ ಮೀನಾಕ್ಷಿಪುರದ ಕೆಆರ್‌ಎಸ್(KRS) ಹಿನ್ನೀರು ಪ್ರದೇಶದಲ್ಲಿ ಈಜಲು ಹೋಗಿದ್ದ ಹಾಸನದ ಚಿರಂತ್(22), ಬೀದ‌ರ್ ಮೂಲದ ಸುನೀಲ್(22) ಸಾವನ್ನಪ್ಪಿದ್ದಾರೆ. ಇವರಿಬ್ಬರು ಮೈಸೂರಿನಲ್ಲಿ ಇಂಜಿನಿಯರಿಂಗ್​ ಓದುತ್ತಿದ್ದರು. ಇನ್ನು ಇವರಿಬ್ಬರೂ ಅರ್ಧಗಂಟೆ ನೀರಿನಲ್ಲಿ ಈಜಾಡಿದ್ದಾರೆ. ಬಳಿಕ ನೀರಿನ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟುಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:54 am, Tue, 13 June 23

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ