AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾಳ ದಿನ ಆಚರಣೆಗೆ ಅನುಮತಿ ನೀಡಲ್ಲ ಎಂದು ಕಡ್ಡಿಮುರಿದಂತೆ ಎಂಇಎಸ್​ಗೆ ಮುಖಭಂಗ ಮಾಡಿದ ಡಿಸಿ ರೋಷನ್

ರಾಜ್ಯೋತ್ಸವ ದಿನವೇ ಕರಾಳ ದಿನಕ್ಕೆ ಅನುಮತಿ ಕೋರಿ ಎಂಇಎಸ್ ನಿಂದ ಡಿಸಿಗೆ ಮನವಿ ಮಾಡಲಾಗಿತ್ತು. ಆದರೆ ಡಿಸಿ ಮೊಹಮ್ಮದ್‌ ರೋಷನ್ ಅವರು ನವೆಂಬರ್‌ 1 ರಂದು ಎಂಇಎಸ್ ಕರಾಳ‌ ದಿನಾಚರಣೆಗೆ ಅನುಮತಿ ಇಲ್ಲ ಎಂದು ಕಡ್ಡಿಮುರಿದಂತೆ ಹೇಳಿದ್ದಾರೆ. ಯಾವುದೇ ರೀತಿಯ ಕರ್ನಾಟಕದ ಐಕ್ಯತೆ ಧಕ್ಕೆ ತರುವ ಹೋರಾಟ, ಪ್ರತಿಭಟನೆಗೆ ಅವಕಾಶ ಕೊಡುವುದಿಲ್ಲ ಎಂದಿದ್ದಾರೆ.

ಕರಾಳ ದಿನ ಆಚರಣೆಗೆ ಅನುಮತಿ ನೀಡಲ್ಲ ಎಂದು ಕಡ್ಡಿಮುರಿದಂತೆ ಎಂಇಎಸ್​ಗೆ ಮುಖಭಂಗ ಮಾಡಿದ ಡಿಸಿ ರೋಷನ್
ಬೆಳಗಾವಿ ಡಿಸಿ ಮೊಹಮ್ಮದ್‌ ರೋಷನ್
Sahadev Mane
| Edited By: |

Updated on: Oct 15, 2024 | 1:52 PM

Share

ಬೆಳಗಾವಿ, ಅ.15: ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಮುಖಂಡರಿಗೆ ಮುಖಭಂಗವಾಗಿದೆ. ಮೊನ್ನೆಯಷ್ಟೇ ಬೆಳಗಾವಿಯ (Belagavi) ಮರಾಠಾ ಮಂಡಲ ಕಾರ್ಯಾಲಯದಲ್ಲಿ ಎಂಇಎಸ್ (MES) ಮುಖಂಡರು ಸಭೆ ನಡೆಸಿ ಕನ್ನಡ ರಾಜ್ಯೋತ್ಸವಕ್ಕೆ ಪ್ರತಿಯಾಗಿ ಕರಾಳ ದಿನ ಆಚರಣೆಗೆ ‌ನಿರ್ಧಾರ ಮಾಡಿದ್ದರು. ಡಿಸಿ ರೋಷನ್ ಎಚ್ಚರಿಕೆ ನೀಡಿದ್ದರೂ ಕರಾಳ ದಿನ ಆಚರಿಸಿಯೇ ಆಚರಿಸುತ್ತೇವೆ ಎಂದು ಸಭೆಯಲ್ಲಿ ತೀರ್ಮಾನಿಸಿದ್ದರು. ಆದರೆ ಈಗ ಕರಾಳ ದಿನಕ್ಕೆ ಅನುಮತಿ ಇಲ್ಲ ಎಂದು ಎಂಇಎಸ್ ಪುಂಡರಿಗೆ ಕಡ್ಡಿಮುರಿದಂತೆ ಡಿಸಿ ಮೊಹಮ್ಮದ್‌ ರೋಷನ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯೋತ್ಸವ ದಿನವೇ ಕರಾಳ ದಿನಕ್ಕೆ ಅನುಮತಿ ಕೋರಿ ಎಂಇಎಸ್ ನಿಂದ ಡಿಸಿಗೆ ಮನವಿ ಮಾಡಲಾಗಿತ್ತು. ಆದರೆ ಡಿಸಿ ಮೊಹಮ್ಮದ್‌ ರೋಷನ್ ಅವರು ನವೆಂಬರ್‌ 1 ರಂದು ಎಂಇಎಸ್ ಕರಾಳ‌ ದಿನಾಚರಣೆಗೆ ಅನುಮತಿ ಇಲ್ಲ ಎಂದು ಕಡ್ಡಿಮುರಿದಂತೆ ಹೇಳಿದ್ದಾರೆ. ಬೆಳಗಾವಿ ಡಿಸಿ ಕಚೇರಿಯಲ್ಲಿ ಎಂಇಎಸ್ ಮುಖಂಡರಿಗೆ ಬುದ್ಧಿವಾದ ಹೇಳಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಕಾನೂನಿನ ಚೌಕಟ್ಟಿನಲ್ಲಿ ಪ್ರತಿಭಟಿಸುವ ಹಕ್ಕಿದೆ. ನವೆಂಬರ್. 1ರಂದು ಬಿಟ್ಟು ಪರ್ಯಾಯ ದಿನ ಕಾನೂನಿನ ಚೌಕಟ್ಟಿನಲ್ಲಿ ಪ್ರತಿಭಟನೆ ಮಾಡಲು ಅವಕಾಶ ಕೊಡ್ತೇನಿ.

ಇದನ್ನೂ ಓದಿ: ಗಡಿಯಲ್ಲಿ ಮತ್ತೆ ಕಿರಿಕ್ ಮಾಡಲು ಮುಂದಾದ ‌ನಾಡದ್ರೋಹಿ‌ MES: ಅನುಮತಿ ಇಲ್ಲದಿದ್ದರೂ ಕರಾಳದಿನ ಆಚರಣೆಗೆ ಸಿದ್ಧತೆ

ಆದ್ರೆ ಯಾವುದೇ ರೀತಿಯ ಕರ್ನಾಟಕದ ಐಕ್ಯತೆ ಧಕ್ಕೆ ತರುವ ಹೋರಾಟ, ಪ್ರತಿಭಟನೆಗೆ ಅವಕಾಶ ಕೊಡುವುದಿಲ್ಲ. ಗಣೇಶೋತ್ಸವ, ಈದ್ ಮಿಲಾದ್ ಸಾಮರಸ್ಯದಿಂದ ಆಚರಣೆ ಮಾಡಿದ್ದೇವೆ. ಹಾಗೇ ನೀವೂ ರಾಜ್ಯೋತ್ಸವ ದಿನ ಬಿಟ್ಟು ಬೇರೆ ದಿನ ಹೋರಾಟ ಮಾಡಿ ಎಂದು ಡಿಸಿ ಮೊಹಮ್ಮದ್‌ ರೋಷನ್ ಬುದ್ಧಿ ಹೇಳಿದ್ದಾರೆ. ಇದಕ್ಕೆ ಎಂಇಎಸ್ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದು ಡಿಸಿ ಗರಂ ಆಗಿದ್ದಾರೆ. ಭಾಷಾ ಸಾಮಾರಸ್ಯ ಕಾಪಾಡುವುದು ಮುಖ್ಯವಾಗಿದೆ. ಪ್ರತಿ ರಾಜ್ಯೋತ್ಸವ ಸೇರಿದ್ರೇ ಈ ವರೆಗೆ ಬೆಳಗಾವಿ ಜಿಲ್ಲೆಯಲ್ಲಿ 2 ಸಾವಿರ ಕೇಸ್ ದಾಖಲಾಗಿವೆ. ನನಗೆ ಜಿಲ್ಲಾಧಿಕಾರಿ ಆಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿಯಿದೆ. ಜಿಲ್ಲಾಧಿಕಾರಿಯಾಗಿ ನಾನು ತೆಗೆದುಕೊಳ್ಳುವ ನಿರ್ಧಾರಕ್ಕೆ ನೀವು ಬದ್ಧರಾಗಿರಿ. ಗಡಿ ವಿವಾದ ಸುಪ್ರೀಂ ಕೋರ್ಟ್ ನಲ್ಲಿದೆ. ಕಾನೂನು ಸುವ್ಯವಸ್ಥೆ ಹಾಳಾದ್ರೆ ಸುಪ್ರೀಂ ಕೋರ್ಟ್ ನನ್ನನ್ನು ಕರೆಸುತ್ತೆ. ನಾನು ತೆಗೆದುಕೊಳ್ಳುವ ನಿರ್ಧಾರಕ್ಕೆ ಒಪ್ಪಿಕೊಳ್ಳಬೇಕೆಂದು ಹೇಳಿ ಡಿಸಿ ರೋಷನ್​ ಅವರು ಎಂಇಎಸ್​ ಪುಂಡರಿ ಕಡ್ಡಿ ಮುರಿದಂತೆ ಖಡಕ್ ಆಗಿ ಹೇಳಿ ಕಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Sahadev Mane
Sahadev Mane
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ