AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾಳ ದಿನ ಆಚರಣೆಗೆ ಅನುಮತಿ ನೀಡಲ್ಲ ಎಂದು ಕಡ್ಡಿಮುರಿದಂತೆ ಎಂಇಎಸ್​ಗೆ ಮುಖಭಂಗ ಮಾಡಿದ ಡಿಸಿ ರೋಷನ್

ರಾಜ್ಯೋತ್ಸವ ದಿನವೇ ಕರಾಳ ದಿನಕ್ಕೆ ಅನುಮತಿ ಕೋರಿ ಎಂಇಎಸ್ ನಿಂದ ಡಿಸಿಗೆ ಮನವಿ ಮಾಡಲಾಗಿತ್ತು. ಆದರೆ ಡಿಸಿ ಮೊಹಮ್ಮದ್‌ ರೋಷನ್ ಅವರು ನವೆಂಬರ್‌ 1 ರಂದು ಎಂಇಎಸ್ ಕರಾಳ‌ ದಿನಾಚರಣೆಗೆ ಅನುಮತಿ ಇಲ್ಲ ಎಂದು ಕಡ್ಡಿಮುರಿದಂತೆ ಹೇಳಿದ್ದಾರೆ. ಯಾವುದೇ ರೀತಿಯ ಕರ್ನಾಟಕದ ಐಕ್ಯತೆ ಧಕ್ಕೆ ತರುವ ಹೋರಾಟ, ಪ್ರತಿಭಟನೆಗೆ ಅವಕಾಶ ಕೊಡುವುದಿಲ್ಲ ಎಂದಿದ್ದಾರೆ.

ಕರಾಳ ದಿನ ಆಚರಣೆಗೆ ಅನುಮತಿ ನೀಡಲ್ಲ ಎಂದು ಕಡ್ಡಿಮುರಿದಂತೆ ಎಂಇಎಸ್​ಗೆ ಮುಖಭಂಗ ಮಾಡಿದ ಡಿಸಿ ರೋಷನ್
ಬೆಳಗಾವಿ ಡಿಸಿ ಮೊಹಮ್ಮದ್‌ ರೋಷನ್
Sahadev Mane
| Edited By: |

Updated on: Oct 15, 2024 | 1:52 PM

Share

ಬೆಳಗಾವಿ, ಅ.15: ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಮುಖಂಡರಿಗೆ ಮುಖಭಂಗವಾಗಿದೆ. ಮೊನ್ನೆಯಷ್ಟೇ ಬೆಳಗಾವಿಯ (Belagavi) ಮರಾಠಾ ಮಂಡಲ ಕಾರ್ಯಾಲಯದಲ್ಲಿ ಎಂಇಎಸ್ (MES) ಮುಖಂಡರು ಸಭೆ ನಡೆಸಿ ಕನ್ನಡ ರಾಜ್ಯೋತ್ಸವಕ್ಕೆ ಪ್ರತಿಯಾಗಿ ಕರಾಳ ದಿನ ಆಚರಣೆಗೆ ‌ನಿರ್ಧಾರ ಮಾಡಿದ್ದರು. ಡಿಸಿ ರೋಷನ್ ಎಚ್ಚರಿಕೆ ನೀಡಿದ್ದರೂ ಕರಾಳ ದಿನ ಆಚರಿಸಿಯೇ ಆಚರಿಸುತ್ತೇವೆ ಎಂದು ಸಭೆಯಲ್ಲಿ ತೀರ್ಮಾನಿಸಿದ್ದರು. ಆದರೆ ಈಗ ಕರಾಳ ದಿನಕ್ಕೆ ಅನುಮತಿ ಇಲ್ಲ ಎಂದು ಎಂಇಎಸ್ ಪುಂಡರಿಗೆ ಕಡ್ಡಿಮುರಿದಂತೆ ಡಿಸಿ ಮೊಹಮ್ಮದ್‌ ರೋಷನ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯೋತ್ಸವ ದಿನವೇ ಕರಾಳ ದಿನಕ್ಕೆ ಅನುಮತಿ ಕೋರಿ ಎಂಇಎಸ್ ನಿಂದ ಡಿಸಿಗೆ ಮನವಿ ಮಾಡಲಾಗಿತ್ತು. ಆದರೆ ಡಿಸಿ ಮೊಹಮ್ಮದ್‌ ರೋಷನ್ ಅವರು ನವೆಂಬರ್‌ 1 ರಂದು ಎಂಇಎಸ್ ಕರಾಳ‌ ದಿನಾಚರಣೆಗೆ ಅನುಮತಿ ಇಲ್ಲ ಎಂದು ಕಡ್ಡಿಮುರಿದಂತೆ ಹೇಳಿದ್ದಾರೆ. ಬೆಳಗಾವಿ ಡಿಸಿ ಕಚೇರಿಯಲ್ಲಿ ಎಂಇಎಸ್ ಮುಖಂಡರಿಗೆ ಬುದ್ಧಿವಾದ ಹೇಳಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಕಾನೂನಿನ ಚೌಕಟ್ಟಿನಲ್ಲಿ ಪ್ರತಿಭಟಿಸುವ ಹಕ್ಕಿದೆ. ನವೆಂಬರ್. 1ರಂದು ಬಿಟ್ಟು ಪರ್ಯಾಯ ದಿನ ಕಾನೂನಿನ ಚೌಕಟ್ಟಿನಲ್ಲಿ ಪ್ರತಿಭಟನೆ ಮಾಡಲು ಅವಕಾಶ ಕೊಡ್ತೇನಿ.

ಇದನ್ನೂ ಓದಿ: ಗಡಿಯಲ್ಲಿ ಮತ್ತೆ ಕಿರಿಕ್ ಮಾಡಲು ಮುಂದಾದ ‌ನಾಡದ್ರೋಹಿ‌ MES: ಅನುಮತಿ ಇಲ್ಲದಿದ್ದರೂ ಕರಾಳದಿನ ಆಚರಣೆಗೆ ಸಿದ್ಧತೆ

ಆದ್ರೆ ಯಾವುದೇ ರೀತಿಯ ಕರ್ನಾಟಕದ ಐಕ್ಯತೆ ಧಕ್ಕೆ ತರುವ ಹೋರಾಟ, ಪ್ರತಿಭಟನೆಗೆ ಅವಕಾಶ ಕೊಡುವುದಿಲ್ಲ. ಗಣೇಶೋತ್ಸವ, ಈದ್ ಮಿಲಾದ್ ಸಾಮರಸ್ಯದಿಂದ ಆಚರಣೆ ಮಾಡಿದ್ದೇವೆ. ಹಾಗೇ ನೀವೂ ರಾಜ್ಯೋತ್ಸವ ದಿನ ಬಿಟ್ಟು ಬೇರೆ ದಿನ ಹೋರಾಟ ಮಾಡಿ ಎಂದು ಡಿಸಿ ಮೊಹಮ್ಮದ್‌ ರೋಷನ್ ಬುದ್ಧಿ ಹೇಳಿದ್ದಾರೆ. ಇದಕ್ಕೆ ಎಂಇಎಸ್ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದು ಡಿಸಿ ಗರಂ ಆಗಿದ್ದಾರೆ. ಭಾಷಾ ಸಾಮಾರಸ್ಯ ಕಾಪಾಡುವುದು ಮುಖ್ಯವಾಗಿದೆ. ಪ್ರತಿ ರಾಜ್ಯೋತ್ಸವ ಸೇರಿದ್ರೇ ಈ ವರೆಗೆ ಬೆಳಗಾವಿ ಜಿಲ್ಲೆಯಲ್ಲಿ 2 ಸಾವಿರ ಕೇಸ್ ದಾಖಲಾಗಿವೆ. ನನಗೆ ಜಿಲ್ಲಾಧಿಕಾರಿ ಆಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿಯಿದೆ. ಜಿಲ್ಲಾಧಿಕಾರಿಯಾಗಿ ನಾನು ತೆಗೆದುಕೊಳ್ಳುವ ನಿರ್ಧಾರಕ್ಕೆ ನೀವು ಬದ್ಧರಾಗಿರಿ. ಗಡಿ ವಿವಾದ ಸುಪ್ರೀಂ ಕೋರ್ಟ್ ನಲ್ಲಿದೆ. ಕಾನೂನು ಸುವ್ಯವಸ್ಥೆ ಹಾಳಾದ್ರೆ ಸುಪ್ರೀಂ ಕೋರ್ಟ್ ನನ್ನನ್ನು ಕರೆಸುತ್ತೆ. ನಾನು ತೆಗೆದುಕೊಳ್ಳುವ ನಿರ್ಧಾರಕ್ಕೆ ಒಪ್ಪಿಕೊಳ್ಳಬೇಕೆಂದು ಹೇಳಿ ಡಿಸಿ ರೋಷನ್​ ಅವರು ಎಂಇಎಸ್​ ಪುಂಡರಿ ಕಡ್ಡಿ ಮುರಿದಂತೆ ಖಡಕ್ ಆಗಿ ಹೇಳಿ ಕಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!