Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಕಾಕ್​ನ ಈ ದೇವಸ್ಥಾನದಲ್ಲಿ ದೇವಿಗೆ ಹೆಂಡ, ಸಿಗರೇಟಿನ ಅರ್ಪಣೆ; ಮಂಗಳಮುಖಿಯಿಂದ ಪೂಜೆ

ಇಷ್ಟಗಳನ್ನು ಈಡೇರಿಸುವಂತೆ ದೇವಿಯಲ್ಲಿ ಹರಕೆ ಹೊತ್ತಿಕೊಳ್ಳುವ ಭಕ್ತರು ಈ ದೇವಸ್ಥಾನದ ಹಿಂದಿರುವ ಮರಕ್ಕೆ ತೆಂಗಿನಕಾಯಿ ಕಟ್ಟುತ್ತಾರೆ. ತಮ್ಮ ಬೇಡಿಕೆ ಈಡೇರಿದ ನಂತರ ಚೌಡೇಶ್ವರಿ ದೇವಿಗೆ ಹೂವು, ಹಣ್ಣು, ಕಾಯಿ, ಎಣ್ಣೆಯ ಜೊತೆಗೆ ಹೆಂಡ, ಸಿಗರೇಟ್ ಇಟ್ಟು ಹರಕೆ ತೀರಿಸುತ್ತಾರೆ.

ಗೋಕಾಕ್​ನ ಈ ದೇವಸ್ಥಾನದಲ್ಲಿ ದೇವಿಗೆ ಹೆಂಡ, ಸಿಗರೇಟಿನ ಅರ್ಪಣೆ; ಮಂಗಳಮುಖಿಯಿಂದ ಪೂಜೆ
ಮಂಗಳಮುಖಿ ಸತ್ಯಪ್ಪ
Follow us
ಸುಷ್ಮಾ ಚಕ್ರೆ
|

Updated on: Oct 04, 2023 | 3:35 PM

ಬೆಳಗಾವಿ: ಒಂದೊಂದು ದೇವರಿಗೆ ಒಂದೊಂದು ವಸ್ತುಗಳು ಪ್ರಿಯವಾದುದು. ಆ ದೇವರಿಗೆ ಇಷ್ಟವಾದ ವಸ್ತು, ತಿಂಡಿಗಳನ್ನೇ ಭಕ್ತರು ಅರ್ಪಿಸುತ್ತಾರೆ. ದೇವರ ಪೂಜೆಗೆ ಹೋಗುವಾಗ ಹಣ್ಣು-ಕಾಯಿ, ಹೂವು ತೆಗೆದುಕೊಂಡು ಹೋಗುವುದು ಮಾಮೂಲಿ. ಆದರೆ, ಬೆಳಗಾವಿಯ ಗೋಕಾಕ್​ನ ಕಡಬಗಟ್ಟಿ ಗುಡ್ಡದ ಶ್ರೀ ಚೌಡೇಶ್ವರಿ ದೇವಿ ಮಂದಿರದಲ್ಲಿ ದೇವಿಗೆ ಭಕ್ತರು ಹೆಂಡ, ಸಿಗರೇಟು ಅರ್ಪಿಸುತ್ತಾರೆ. ಈ ದೇವಾಲಯದಲ್ಲಿ ಮಂಗಳಮುಖಿಯೊಬ್ಬರು ದೇವಿಗೆ ಪೂಜೆ ಸಲ್ಲಿಸುವುದು ಮತ್ತೊಂದು ವಿಶೇಷ.

ತಮ್ಮ ಬೇಡಿಕೆಗಳನ್ನು, ಇಷ್ಟಗಳನ್ನು ಈಡೇರಿಸುವಂತೆ ದೇವಿಯಲ್ಲಿ ಹರಕೆ ಹೊತ್ತಿಕೊಳ್ಳುವ ಭಕ್ತರು ಈ ದೇವಸ್ಥಾನದ ಹಿಂದಿರುವ ಮರಕ್ಕೆ ತೆಂಗಿನಕಾಯಿ ಕಟ್ಟುತ್ತಾರೆ. ತಮ್ಮ ಬೇಡಿಕೆ ಈಡೇರಿದ ನಂತರ ಚೌಡೇಶ್ವರಿ ದೇವಿಗೆ ಹೂವು, ಹಣ್ಣು, ಕಾಯಿ, ಎಣ್ಣೆಯ ಜೊತೆಗೆ ಹೆಂಡ, ಸಿಗರೇಟ್ ಇಟ್ಟು ಹರಕೆ ತೀರಿಸುತ್ತಾರೆ.

ಇದನ್ನೂ ಓದಿ: ಗದಗದ ನರೇಗಲ್ ಪಟ್ಟಣದಲ್ಲೊಂದು ಐತಿಹಾಸಿಕ ಆಚರಣೆ; ರಾಕ್ಷಸರ, ಕಾಳಿಕಾದೇವಿ ನಡುವೆ ಇಲ್ಲಿ ನಡೆಯುತ್ತೆ ಭೀಕರ ಕಾಳಗ

ಪ್ರತಿವರ್ಷ ಜೋಕುಮಾರ ಹುಣ್ಣಿಮೆ ದಿನ ಇಲ್ಲಿ ಜಾತ್ರೆ ನಡೆಯುತ್ತದೆ. ಈ ವೇಳೆ ಚೌಡೇಶ್ವರಿ ದೇವಿಗೆ ವಿಶೇಷ ಪೂಜೆ ಮಾಡಲಾಗುತ್ತದೆ. ಚಿನ್ನ, ಬೆಳ್ಳಿಗಳಿಂದ ದೇವಿಯನ್ನು ಅಲಂಕರಿಸಲಾಗುತ್ತದೆ. ಈ ವೇಳೆ ದೇವಿಯನ್ನು ನೋಡಲು ಸಾವಿರಾರು ಜನ ಸೇರುತ್ತಾರೆ.

ದೇವಿಯ ದರ್ಶನಕ್ಕೆ ಬಂದ ಭಕ್ತರು ನೀಡುವ ಹೆಂಡವನ್ನು ದೇವಿಗೆ ಕುಡಿಸಲಾಗುತ್ತದೆ. ಆ ದೇವಿಯ ಎದುರು ಸಿಗರೇಟ್ ಕೂಡ ಹಚ್ಚಲಾಗುತ್ತದೆ.ಈ ದೇವಸ್ಥಾನದಲ್ಲಿ ಸತ್ಯಪ್ಪ ಎಂಬ ಮಂಗಳಮುಖಿ ಅರ್ಚಕರಾಗಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಇಂದು 11 ದಿನದ ಸಾರ್ವಜನಿಕ ಗಣೇಶ ವಿಸರ್ಜನೆ ಮೆರವಣಿಗೆ: ನಗರದಲ್ಲಿ ಪೊಲೀಸ್​ ಸರ್ಪಗಾವಲು

ಈ ಚೌಡೇಶ್ವರಿ ದೇವಿ ಬಹಳ ಶಕ್ತಿಶಾಲಿ ಎಂಬುದು ಭಕ್ತರ ನಂಬಿಕೆ. ಈ ದೇವಿ ಮಕ್ಕಳಿಲ್ಲದವರಿಗೆ ಮಕ್ಕಳನ್ನು ಕರುಣಿಸಿದ್ದಾಳೆ. ಅನಾರೋಗ್ಯವಿದ್ದವರಿಗೆ ಆರೋಗ್ಯ ನೀಡಿದ್ದಾಳೆ, ಹಲವು ಜನರ ಬದುಕಿಗೆ ದಾರಿದೀಪವಾಗಿದ್ದಾಳೆ. ಕಳೆದ 26 ವರ್ಷಗಳಿಂದ ಇಲ್ಲಿ ಜಾತ್ರೆ ನಡೆಯುತ್ತಿದೆ. ಕರ್ನಾಟಕ ಮಾತ್ರವಲ್ಲದೆ, ಆಂಧ್ರಪ್ರದೇಶ, ಗೋವಾ, ಮಹಾರಾಷ್ಟ್ರ, ಮುಂಬೈ, ಪುಣೆ, ಕೊಲ್ಹಾಪುರ, ಕೇರಳದಿಂದಲೂ ಭಕ್ತರು ಈ ದೇವಿಯ ದರ್ಶನಕ್ಕೆ ಆಗಮಿಸುತ್ತಾರೆ. ಕಳೆದ 26 ವರ್ಷಗಳಿಂದಲೂ ಮಂಗಳಮುಖಿ ಸತ್ಯಪ್ಪ ಅವರೇ ಈ ದೇವಿಗೆ ಪೂಜೆ ಸಲ್ಲಿಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ