AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಕಾಕ್​ನ ಈ ದೇವಸ್ಥಾನದಲ್ಲಿ ದೇವಿಗೆ ಹೆಂಡ, ಸಿಗರೇಟಿನ ಅರ್ಪಣೆ; ಮಂಗಳಮುಖಿಯಿಂದ ಪೂಜೆ

ಇಷ್ಟಗಳನ್ನು ಈಡೇರಿಸುವಂತೆ ದೇವಿಯಲ್ಲಿ ಹರಕೆ ಹೊತ್ತಿಕೊಳ್ಳುವ ಭಕ್ತರು ಈ ದೇವಸ್ಥಾನದ ಹಿಂದಿರುವ ಮರಕ್ಕೆ ತೆಂಗಿನಕಾಯಿ ಕಟ್ಟುತ್ತಾರೆ. ತಮ್ಮ ಬೇಡಿಕೆ ಈಡೇರಿದ ನಂತರ ಚೌಡೇಶ್ವರಿ ದೇವಿಗೆ ಹೂವು, ಹಣ್ಣು, ಕಾಯಿ, ಎಣ್ಣೆಯ ಜೊತೆಗೆ ಹೆಂಡ, ಸಿಗರೇಟ್ ಇಟ್ಟು ಹರಕೆ ತೀರಿಸುತ್ತಾರೆ.

ಗೋಕಾಕ್​ನ ಈ ದೇವಸ್ಥಾನದಲ್ಲಿ ದೇವಿಗೆ ಹೆಂಡ, ಸಿಗರೇಟಿನ ಅರ್ಪಣೆ; ಮಂಗಳಮುಖಿಯಿಂದ ಪೂಜೆ
ಮಂಗಳಮುಖಿ ಸತ್ಯಪ್ಪ
ಸುಷ್ಮಾ ಚಕ್ರೆ
|

Updated on: Oct 04, 2023 | 3:35 PM

Share

ಬೆಳಗಾವಿ: ಒಂದೊಂದು ದೇವರಿಗೆ ಒಂದೊಂದು ವಸ್ತುಗಳು ಪ್ರಿಯವಾದುದು. ಆ ದೇವರಿಗೆ ಇಷ್ಟವಾದ ವಸ್ತು, ತಿಂಡಿಗಳನ್ನೇ ಭಕ್ತರು ಅರ್ಪಿಸುತ್ತಾರೆ. ದೇವರ ಪೂಜೆಗೆ ಹೋಗುವಾಗ ಹಣ್ಣು-ಕಾಯಿ, ಹೂವು ತೆಗೆದುಕೊಂಡು ಹೋಗುವುದು ಮಾಮೂಲಿ. ಆದರೆ, ಬೆಳಗಾವಿಯ ಗೋಕಾಕ್​ನ ಕಡಬಗಟ್ಟಿ ಗುಡ್ಡದ ಶ್ರೀ ಚೌಡೇಶ್ವರಿ ದೇವಿ ಮಂದಿರದಲ್ಲಿ ದೇವಿಗೆ ಭಕ್ತರು ಹೆಂಡ, ಸಿಗರೇಟು ಅರ್ಪಿಸುತ್ತಾರೆ. ಈ ದೇವಾಲಯದಲ್ಲಿ ಮಂಗಳಮುಖಿಯೊಬ್ಬರು ದೇವಿಗೆ ಪೂಜೆ ಸಲ್ಲಿಸುವುದು ಮತ್ತೊಂದು ವಿಶೇಷ.

ತಮ್ಮ ಬೇಡಿಕೆಗಳನ್ನು, ಇಷ್ಟಗಳನ್ನು ಈಡೇರಿಸುವಂತೆ ದೇವಿಯಲ್ಲಿ ಹರಕೆ ಹೊತ್ತಿಕೊಳ್ಳುವ ಭಕ್ತರು ಈ ದೇವಸ್ಥಾನದ ಹಿಂದಿರುವ ಮರಕ್ಕೆ ತೆಂಗಿನಕಾಯಿ ಕಟ್ಟುತ್ತಾರೆ. ತಮ್ಮ ಬೇಡಿಕೆ ಈಡೇರಿದ ನಂತರ ಚೌಡೇಶ್ವರಿ ದೇವಿಗೆ ಹೂವು, ಹಣ್ಣು, ಕಾಯಿ, ಎಣ್ಣೆಯ ಜೊತೆಗೆ ಹೆಂಡ, ಸಿಗರೇಟ್ ಇಟ್ಟು ಹರಕೆ ತೀರಿಸುತ್ತಾರೆ.

ಇದನ್ನೂ ಓದಿ: ಗದಗದ ನರೇಗಲ್ ಪಟ್ಟಣದಲ್ಲೊಂದು ಐತಿಹಾಸಿಕ ಆಚರಣೆ; ರಾಕ್ಷಸರ, ಕಾಳಿಕಾದೇವಿ ನಡುವೆ ಇಲ್ಲಿ ನಡೆಯುತ್ತೆ ಭೀಕರ ಕಾಳಗ

ಪ್ರತಿವರ್ಷ ಜೋಕುಮಾರ ಹುಣ್ಣಿಮೆ ದಿನ ಇಲ್ಲಿ ಜಾತ್ರೆ ನಡೆಯುತ್ತದೆ. ಈ ವೇಳೆ ಚೌಡೇಶ್ವರಿ ದೇವಿಗೆ ವಿಶೇಷ ಪೂಜೆ ಮಾಡಲಾಗುತ್ತದೆ. ಚಿನ್ನ, ಬೆಳ್ಳಿಗಳಿಂದ ದೇವಿಯನ್ನು ಅಲಂಕರಿಸಲಾಗುತ್ತದೆ. ಈ ವೇಳೆ ದೇವಿಯನ್ನು ನೋಡಲು ಸಾವಿರಾರು ಜನ ಸೇರುತ್ತಾರೆ.

ದೇವಿಯ ದರ್ಶನಕ್ಕೆ ಬಂದ ಭಕ್ತರು ನೀಡುವ ಹೆಂಡವನ್ನು ದೇವಿಗೆ ಕುಡಿಸಲಾಗುತ್ತದೆ. ಆ ದೇವಿಯ ಎದುರು ಸಿಗರೇಟ್ ಕೂಡ ಹಚ್ಚಲಾಗುತ್ತದೆ.ಈ ದೇವಸ್ಥಾನದಲ್ಲಿ ಸತ್ಯಪ್ಪ ಎಂಬ ಮಂಗಳಮುಖಿ ಅರ್ಚಕರಾಗಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಇಂದು 11 ದಿನದ ಸಾರ್ವಜನಿಕ ಗಣೇಶ ವಿಸರ್ಜನೆ ಮೆರವಣಿಗೆ: ನಗರದಲ್ಲಿ ಪೊಲೀಸ್​ ಸರ್ಪಗಾವಲು

ಈ ಚೌಡೇಶ್ವರಿ ದೇವಿ ಬಹಳ ಶಕ್ತಿಶಾಲಿ ಎಂಬುದು ಭಕ್ತರ ನಂಬಿಕೆ. ಈ ದೇವಿ ಮಕ್ಕಳಿಲ್ಲದವರಿಗೆ ಮಕ್ಕಳನ್ನು ಕರುಣಿಸಿದ್ದಾಳೆ. ಅನಾರೋಗ್ಯವಿದ್ದವರಿಗೆ ಆರೋಗ್ಯ ನೀಡಿದ್ದಾಳೆ, ಹಲವು ಜನರ ಬದುಕಿಗೆ ದಾರಿದೀಪವಾಗಿದ್ದಾಳೆ. ಕಳೆದ 26 ವರ್ಷಗಳಿಂದ ಇಲ್ಲಿ ಜಾತ್ರೆ ನಡೆಯುತ್ತಿದೆ. ಕರ್ನಾಟಕ ಮಾತ್ರವಲ್ಲದೆ, ಆಂಧ್ರಪ್ರದೇಶ, ಗೋವಾ, ಮಹಾರಾಷ್ಟ್ರ, ಮುಂಬೈ, ಪುಣೆ, ಕೊಲ್ಹಾಪುರ, ಕೇರಳದಿಂದಲೂ ಭಕ್ತರು ಈ ದೇವಿಯ ದರ್ಶನಕ್ಕೆ ಆಗಮಿಸುತ್ತಾರೆ. ಕಳೆದ 26 ವರ್ಷಗಳಿಂದಲೂ ಮಂಗಳಮುಖಿ ಸತ್ಯಪ್ಪ ಅವರೇ ಈ ದೇವಿಗೆ ಪೂಜೆ ಸಲ್ಲಿಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!