AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂ.ಕೆ.ಹುಬ್ಬಳ್ಳಿಯಲ್ಲಿ ಸ್ನೇಹಿತರ ನಡುವಿನ ಜಗಳ ಬಿಡಿಸಲು ಹೋದ ಡಾಬಾ ಮಾಲೀಕನ ಭೀಕರ ಕೊಲೆ

ಆರೋಪಿ ಅಜೀಜ್ ಹೂವಿನ ವ್ಯಾಪಾರಿ. ಮಂಜುನಾಥ್‌ಗೆ ಆರೋಪಿ ಅಜೀಜ್ 1500 ರೂ. ಹಣ ನೀಡಬೇಕಿತ್ತು. ಇದೇ ವಿಚಾರಕ್ಕೆ ನಿನ್ನೆ ಸಂಜೆ ಡಾಬಾದಲ್ಲಿ ಇಬ್ಬರು ನಡುವೆ ಜಗಳವಾಗಿದೆ. ಜಗಳ ಬಿಡಿಸಲು ಬಂದ ಡಾಬಾ ಮಾಲೀಕ, ಮಂಜುನಾಥನ ಗೆಳೆಯ ಪ್ರಕಾಶ್‌ ಮೇಲೆ ಆರೋಪಿ ಅಜೀಜ್ ಏಳು ಜನ ಹುಡುಗರನ್ನ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾನೆ. ಡಾಬಾದಲ್ಲಿದ್ದ ಜಗ್ಗು, ಚಹಾ ಮಾಡುವ ಪಾತ್ರೆಯಿಂದ ಹಿಗ್ಗಾಮಗ್ಗಾ ಹಲ್ಲೆ ಮಾಡಿದ್ದಾರೆ.

ಎಂ.ಕೆ.ಹುಬ್ಬಳ್ಳಿಯಲ್ಲಿ ಸ್ನೇಹಿತರ ನಡುವಿನ ಜಗಳ ಬಿಡಿಸಲು ಹೋದ ಡಾಬಾ ಮಾಲೀಕನ ಭೀಕರ ಕೊಲೆ
ಎಂ.ಕೆ.ಹುಬ್ಬಳ್ಳಿಯಲ್ಲಿ ಸ್ನೇಹಿತರ ನಡುವಿನ ಜಗಳ ಬಿಡಿಸಲು ಹೋದ ಡಾಬಾ ಮಾಲೀಕನ ಭೀಕರ ಕೊಲೆ
TV9 Web
| Edited By: |

Updated on: Jul 12, 2021 | 11:48 AM

Share

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯಲ್ಲಿ ಜಗಳ ಬಿಡಿಸಲು ಹೋದ ಡಾಬಾ ಮಾಲೀಕ ಪ್ರಕಾಶ್ ನಾಗನೂರ(38) ಎಂಬುವವರನ್ನು ಹತ್ಯೆ ಮಾಡಲಾಗಿದೆ. ಪ್ರಕಾಶ್ ನಾಗನೂರ ಸ್ನೇಹಿತ ಮಂಜುನಾಥ್ ಮತ್ತು ಅಜೀಜ್ ಎಂಬಿಬ್ಬರ ಮಧ್ಯೆ 1,500 ರೂಪಾಯಿಗೆ ನಿನ್ನೆ ಸಂಜೆ ಪ್ರಕಾಶ್ ಡಾಬಾದಲ್ಲಿ ಜಗಳ ನಡೆದಿತ್ತು.

ತನ್ನ ಡಾಬಾದಲ್ಲಿ ಗೆಳೆಯರಿಬ್ಬರ ಮಧ್ಯೆ ನಡೆಯುತ್ತಿದ್ದ ಜಗಳವನ್ನು ಬಿಡಿಸಲು ಪ್ರಕಾಶ್ ಮುಂದಾಗಿದ್ದಾರೆ. ಆವೇಳೆ ಡಾಬಾ ಮಾಲೀಕ ಪ್ರಕಾಶ್ ಅವರ ಮೇಲೆಯೇ ಹಲ್ಲೆ ನಡೆದಿದೆ. ಅಜೀಜ್, 7 ಹುಡುಗರನ್ನು ಸೇರಿಸಿಕೊಂಡು ಹಲ್ಲೆ ನಡೆಸಿದ್ದ ಎಂದು ತಿಳಿದುಬಂದಿದೆ. ಆರೋಪಿಗಳೆಲ್ಲ ಪ್ರಕಾಶ್ ನಾಗನೂರ ಅವರನ್ನು ಹಿಗ್ಗಾಮುಗ್ಗಾ ಹೊಡೆದು ಪರಾರಿಯಾಗಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಪ್ರಕಾಶ್ ನಾಗನೂರ ಅವರು ಆಸ್ಪತ್ರೆ ಸಾಗಿಸುವಾಗ ಮಾರ್ಗಮಧ್ಯದಲ್ಲಿ ಸಾವಿಗೀಡಾಗಿದ್ದಾರೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಅಜೀಜ್ ಹೂವಿನ ವ್ಯಾಪಾರಿ. ಮಂಜುನಾಥ್‌ಗೆ ಆರೋಪಿ ಅಜೀಜ್ 1500 ರೂ. ಹಣ ನೀಡಬೇಕಿತ್ತು. ಇದೇ ವಿಚಾರಕ್ಕೆ ನಿನ್ನೆ ಸಂಜೆ ಡಾಬಾದಲ್ಲಿ ಇಬ್ಬರು ನಡುವೆ ಜಗಳವಾಗಿದೆ. ಜಗಳ ಬಿಡಿಸಲು ಬಂದ ಡಾಬಾ ಮಾಲೀಕ, ಮಂಜುನಾಥನ ಗೆಳೆಯ ಪ್ರಕಾಶ್‌ ಮೇಲೆ ಆರೋಪಿ ಅಜೀಜ್ ಏಳು ಜನ ಹುಡುಗರನ್ನ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾನೆ. ಡಾಬಾದಲ್ಲಿದ್ದ ಜಗ್ಗು, ಚಹಾ ಮಾಡುವ ಪಾತ್ರೆಯಿಂದ ಹಿಗ್ಗಾಮಗ್ಗಾ ಹಲ್ಲೆ ಮಾಡಿದ್ದಾರೆ.

ಮತ್ತೆ ಚುರುಕು ಪಡೆದ ಯೋಗೀಶ್ ಗೌಡ ಹತ್ಯೆ ಪ್ರಕರಣ ತನಿಖೆ: ಗದಗದಲ್ಲಿ ಕೆಎಎಸ್ ಅಧಿಕಾರಿ ಅರೆಸ್ಟ್ (dhaba owner murdered in MK hubballi belagavi during fight between friends)

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ