AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಟು ದೆಹಲಿಗೆ ವಿಮಾನ ಸೇವೆ ಮತ್ತೆ ಆರಂಭ, ಪ್ರಯಾಣಿಕರಿಗೆ ಕನ್ನಡದಲ್ಲೇ ಸ್ವಾಗತ

ಹಲವು ಕಾರಣಗಳಿಂದ ಬೆಳಗಾವಿ ವಿಮಾನ (Belagavi Airport) ನಿಲ್ದಾಣದಿಂದ ಕೆಲವು ಪ್ರಮುಖ ಸ್ಥಳಗಳಿಗೆ ವಿಮಾನ ಸಂಚಾರ ಕಳೆದ ಕೆಲವು ವರ್ಷಗಳಿಂದ ಸ್ಥಗಿತಗೊಂಡಿತ್ತು. ಇದೀಗ ಬೆಳಗಾವಿಯಿಂದ ದೆಹಲಿಗೆ ನೇರ ವಿಮಾನ ಸೇವೆ ಮತ್ತೆ ಆರಂಭಗೊಂಡಿದ್ದು, ಅಧಿಕಾರಿಯೊಬ್ಬರು ವಿಮಾನದ ಪ್ರಯಾಣಿಕರನ್ನು ಕನ್ನಡದಲ್ಲೇ ಸ್ವಾಗತಿಸಿದರು.

ಬೆಳಗಾವಿ ಟು ದೆಹಲಿಗೆ ವಿಮಾನ ಸೇವೆ ಮತ್ತೆ ಆರಂಭ, ಪ್ರಯಾಣಿಕರಿಗೆ ಕನ್ನಡದಲ್ಲೇ ಸ್ವಾಗತ
ಬೆಳಗಾವಿಯಿಂದ ದೆಹಲಿಗೆ ವಿಮಾನ ಸೇವೆ ಮತ್ತೆ ಆರಂಭ
ಸಹದೇವ್​ ಮಾನೆ
| Edited By: Rakesh Nayak Manchi|

Updated on: Oct 06, 2023 | 8:55 AM

Share

ಬೆಳಗಾವಿ, ಅ.6: ಹಲವು ಕಾರಣಗಳಿಂದ ಬೆಳಗಾವಿ ವಿಮಾನ (Belagavi Airport) ನಿಲ್ದಾಣದಿಂದ ಕೆಲವು ಪ್ರಮುಖ ಸ್ಥಳಗಳಿಗೆ ವಿಮಾನ ಸಂಚಾರ ಕಳೆದ ಕೆಲವು ವರ್ಷಗಳಿಂದ ಸ್ಥಗಿತಗೊಂಡಿತ್ತು. ಇದೀಗ ಬೆಳಗಾವಿಯಿಂದ ದೆಹಲಿಗೆ (Delhi) ನೇರ ವಿಮಾನ ಸೇವೆ ಮತ್ತೆ ಆರಂಭಗೊಂಡಿದ್ದು, ಅಧಿಕಾರಿಯೊಬ್ಬರು ವಿಮಾನದ ಪ್ರಯಾಣಿಕರನ್ನು ಕನ್ನಡದಲ್ಲೇ ಸ್ವಾಗತಿಸಿದರು.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಅಕ್ಷಯ ಪಾಟೀಲ್ ಅವರು ಪ್ರಯಾಣಿಕರನ್ನು ಕನ್ನಡದಲ್ಲಿ ಸ್ವಾಗತಿಸಿದರು. ನೇರ ವಿಮಾನ ಸೇವೆಗೆ ಕಾರಣರಾದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರಿಗೆ ಅಭಿನಂದನೆ ಸಲ್ಲಿಕೆ ಮಾಡಲಾಯಿತು.

ಇನ್ನೂ ಮುಂದೆ ದೆಹಲಿ ದೂರ ಇಲ್ಲ ಕೇವಲ ‌2.10 ನಿಮಿಷದಲ್ಲಿ ತಲುಪುತ್ತೇವೆ. ದೆಹಲಿ‌ ವಿಮಾನದಿಂದ ಜನರಿಗೆ ಅನಕೂಲ‌ ಆಗಿದೆ. ಇದೇ ರೀತಿ‌ ಬೆಳಗಾವಿ, ‌ಹುಬ್ಬಳಿಯಿಂದ ದೇಶ‌ ವಿದೇಶಕ್ಕೆ ವಿಮಾನ ಸೇವೆ ಸಿಗಲಿ. ಎಲ್ಲೂರು ಆರಾಮವಆಗಿ ಕುಳಿತುಕೊಳ್ಳಿ. 2 ಗಂಟೆ 10 ನಿಮಿಷದಲ್ಲಿ ದೆಹಲಿ ತಲಪುತ್ತೇವೆ ಎಂದು ಅಕ್ಷಯ್ ಹೇಳಿದರು.

ಇದನ್ನೂ ಓದಿ: ಬೆಳಗಾವಿ: ದರೋಡೆ ಪ್ರಕರಣದಲ್ಲಿ ಸಿಕ್ಕಿಬಿದ್ದು ಮಹಿಳೆ ಮೇಲಿನ ಗ್ಯಾಂಗ್ ರೇಪ್ ಬಾಯ್ಬಿಟ್ಟ ಆರೋಪಿಗಳು

ಕೆಲವು ತಿಂಗಳುಗಳ ಹಿಂದೆ ಬೆಳಗಾವಿ ಮತ್ತು ದೆಹಲಿ ನಡುವಣ ವಿಮಾನ ಕೂಡ ಸ್ಥಗಿತಗೊಂಡಿತ್ತು. ಇದರಿಂದ ರಾಷ್ಟ್ರ ರಾಜಧಾನಿಗೆ ತೆರಳುವ ಹೆಚ್ಚಿನ ಸಂಖ್ಯೆಯ ವಿಮಾನ ಪ್ರಯಾಣಿಕರು ತೊಂದರೆಗೆ ಒಳಗಾಗಿದ್ದರು. ದೀರ್ಘಾವಧಿಯ ನಂತರ ಅಕ್ಟೋಬರ್ 5 ರಿಂದ ಬೆಳಗಾವಿ ಮತ್ತು ದೆಹಲಿ ನಡುವಿನ ದೈನಂದಿನ ವಿಮಾನ ಸಂಚಾರ ಪ್ರಾರಂಭವಾಗಿದೆ.

ಮೂಲಗಳ ಪ್ರಕಾರ, ಬೆಳಗಾವಿ-ದೆಹಲಿ ವಿಮಾನ ಟಿಕೆಟ್ ಕಾಯ್ದಿರಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಇಂಡಿಗೋ ಏರ್‌ಲೈನ್ಸ್ ಎರಡು ನಗರಗಳ ನಡುವೆ ವಿಮಾನ ಸೇವೆ ನೀಡಲಿದ್ದು, ದೆಹಲಿ-ಬೆಳಗಾವಿ ವಿಮಾನವು ದೆಹಲಿಯಿಂದ ಪ್ರತಿದಿನ ಮಧ್ಯಾಹ್ನ 3.45 ಕ್ಕೆ ಟೇಕ್ ಆಫ್ ಆಗಲಿದ್ದು, ಸಂಜೆ 6.05 ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿ-ದೆಹಲಿ ವಿಮಾನವು ಬೆಳಗಾವಿಯಿಂದ ಸಂಜೆ 6.35 ಕ್ಕೆ ಹೊರಟು ದೆಹಲಿಯನ್ನು ರಾತ್ರಿ 9 ಕ್ಕೆ ತಲುಪಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!