AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಟು ದೆಹಲಿಗೆ ವಿಮಾನ ಸೇವೆ ಮತ್ತೆ ಆರಂಭ, ಪ್ರಯಾಣಿಕರಿಗೆ ಕನ್ನಡದಲ್ಲೇ ಸ್ವಾಗತ

ಹಲವು ಕಾರಣಗಳಿಂದ ಬೆಳಗಾವಿ ವಿಮಾನ (Belagavi Airport) ನಿಲ್ದಾಣದಿಂದ ಕೆಲವು ಪ್ರಮುಖ ಸ್ಥಳಗಳಿಗೆ ವಿಮಾನ ಸಂಚಾರ ಕಳೆದ ಕೆಲವು ವರ್ಷಗಳಿಂದ ಸ್ಥಗಿತಗೊಂಡಿತ್ತು. ಇದೀಗ ಬೆಳಗಾವಿಯಿಂದ ದೆಹಲಿಗೆ ನೇರ ವಿಮಾನ ಸೇವೆ ಮತ್ತೆ ಆರಂಭಗೊಂಡಿದ್ದು, ಅಧಿಕಾರಿಯೊಬ್ಬರು ವಿಮಾನದ ಪ್ರಯಾಣಿಕರನ್ನು ಕನ್ನಡದಲ್ಲೇ ಸ್ವಾಗತಿಸಿದರು.

ಬೆಳಗಾವಿ ಟು ದೆಹಲಿಗೆ ವಿಮಾನ ಸೇವೆ ಮತ್ತೆ ಆರಂಭ, ಪ್ರಯಾಣಿಕರಿಗೆ ಕನ್ನಡದಲ್ಲೇ ಸ್ವಾಗತ
ಬೆಳಗಾವಿಯಿಂದ ದೆಹಲಿಗೆ ವಿಮಾನ ಸೇವೆ ಮತ್ತೆ ಆರಂಭ
Sahadev Mane
| Edited By: |

Updated on: Oct 06, 2023 | 8:55 AM

Share

ಬೆಳಗಾವಿ, ಅ.6: ಹಲವು ಕಾರಣಗಳಿಂದ ಬೆಳಗಾವಿ ವಿಮಾನ (Belagavi Airport) ನಿಲ್ದಾಣದಿಂದ ಕೆಲವು ಪ್ರಮುಖ ಸ್ಥಳಗಳಿಗೆ ವಿಮಾನ ಸಂಚಾರ ಕಳೆದ ಕೆಲವು ವರ್ಷಗಳಿಂದ ಸ್ಥಗಿತಗೊಂಡಿತ್ತು. ಇದೀಗ ಬೆಳಗಾವಿಯಿಂದ ದೆಹಲಿಗೆ (Delhi) ನೇರ ವಿಮಾನ ಸೇವೆ ಮತ್ತೆ ಆರಂಭಗೊಂಡಿದ್ದು, ಅಧಿಕಾರಿಯೊಬ್ಬರು ವಿಮಾನದ ಪ್ರಯಾಣಿಕರನ್ನು ಕನ್ನಡದಲ್ಲೇ ಸ್ವಾಗತಿಸಿದರು.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಅಕ್ಷಯ ಪಾಟೀಲ್ ಅವರು ಪ್ರಯಾಣಿಕರನ್ನು ಕನ್ನಡದಲ್ಲಿ ಸ್ವಾಗತಿಸಿದರು. ನೇರ ವಿಮಾನ ಸೇವೆಗೆ ಕಾರಣರಾದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರಿಗೆ ಅಭಿನಂದನೆ ಸಲ್ಲಿಕೆ ಮಾಡಲಾಯಿತು.

ಇನ್ನೂ ಮುಂದೆ ದೆಹಲಿ ದೂರ ಇಲ್ಲ ಕೇವಲ ‌2.10 ನಿಮಿಷದಲ್ಲಿ ತಲುಪುತ್ತೇವೆ. ದೆಹಲಿ‌ ವಿಮಾನದಿಂದ ಜನರಿಗೆ ಅನಕೂಲ‌ ಆಗಿದೆ. ಇದೇ ರೀತಿ‌ ಬೆಳಗಾವಿ, ‌ಹುಬ್ಬಳಿಯಿಂದ ದೇಶ‌ ವಿದೇಶಕ್ಕೆ ವಿಮಾನ ಸೇವೆ ಸಿಗಲಿ. ಎಲ್ಲೂರು ಆರಾಮವಆಗಿ ಕುಳಿತುಕೊಳ್ಳಿ. 2 ಗಂಟೆ 10 ನಿಮಿಷದಲ್ಲಿ ದೆಹಲಿ ತಲಪುತ್ತೇವೆ ಎಂದು ಅಕ್ಷಯ್ ಹೇಳಿದರು.

ಇದನ್ನೂ ಓದಿ: ಬೆಳಗಾವಿ: ದರೋಡೆ ಪ್ರಕರಣದಲ್ಲಿ ಸಿಕ್ಕಿಬಿದ್ದು ಮಹಿಳೆ ಮೇಲಿನ ಗ್ಯಾಂಗ್ ರೇಪ್ ಬಾಯ್ಬಿಟ್ಟ ಆರೋಪಿಗಳು

ಕೆಲವು ತಿಂಗಳುಗಳ ಹಿಂದೆ ಬೆಳಗಾವಿ ಮತ್ತು ದೆಹಲಿ ನಡುವಣ ವಿಮಾನ ಕೂಡ ಸ್ಥಗಿತಗೊಂಡಿತ್ತು. ಇದರಿಂದ ರಾಷ್ಟ್ರ ರಾಜಧಾನಿಗೆ ತೆರಳುವ ಹೆಚ್ಚಿನ ಸಂಖ್ಯೆಯ ವಿಮಾನ ಪ್ರಯಾಣಿಕರು ತೊಂದರೆಗೆ ಒಳಗಾಗಿದ್ದರು. ದೀರ್ಘಾವಧಿಯ ನಂತರ ಅಕ್ಟೋಬರ್ 5 ರಿಂದ ಬೆಳಗಾವಿ ಮತ್ತು ದೆಹಲಿ ನಡುವಿನ ದೈನಂದಿನ ವಿಮಾನ ಸಂಚಾರ ಪ್ರಾರಂಭವಾಗಿದೆ.

ಮೂಲಗಳ ಪ್ರಕಾರ, ಬೆಳಗಾವಿ-ದೆಹಲಿ ವಿಮಾನ ಟಿಕೆಟ್ ಕಾಯ್ದಿರಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಇಂಡಿಗೋ ಏರ್‌ಲೈನ್ಸ್ ಎರಡು ನಗರಗಳ ನಡುವೆ ವಿಮಾನ ಸೇವೆ ನೀಡಲಿದ್ದು, ದೆಹಲಿ-ಬೆಳಗಾವಿ ವಿಮಾನವು ದೆಹಲಿಯಿಂದ ಪ್ರತಿದಿನ ಮಧ್ಯಾಹ್ನ 3.45 ಕ್ಕೆ ಟೇಕ್ ಆಫ್ ಆಗಲಿದ್ದು, ಸಂಜೆ 6.05 ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿ-ದೆಹಲಿ ವಿಮಾನವು ಬೆಳಗಾವಿಯಿಂದ ಸಂಜೆ 6.35 ಕ್ಕೆ ಹೊರಟು ದೆಹಲಿಯನ್ನು ರಾತ್ರಿ 9 ಕ್ಕೆ ತಲುಪಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ