AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದಸ್ಯರನ್ನು ಅಮಾನತು ಮಾಡುವುದು ಕೆಟ್ಟ ಪದ್ಧತಿ; ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಮಾರಕ: ಡಿಕೆ ಶಿವಕುಮಾರ್

ಪರಿಷತ್​ ಸದಸ್ಯರ ಅಮಾನತು ಕಾಂಗ್ರೆಸ್ ಖಂಡಿಸುತ್ತದೆ. ನಾಳೆ 10 ಗಂಟೆಗೆ ಸಭೆ ನಡೆಸಿ ಈ ಬಗ್ಗೆ ಚರ್ಚೆ ನಡೆಸ್ತೇವೆ. ಮುಂದೆ ಏನು ಕ್ರಮಕೈಕೊಳ್ಳಬೇಕೆಂದು ಚರ್ಚೆ ನಡೆಸುತ್ತೇವೆ ಎಂದು ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಸದಸ್ಯರನ್ನು ಅಮಾನತು ಮಾಡುವುದು ಕೆಟ್ಟ ಪದ್ಧತಿ; ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಮಾರಕ: ಡಿಕೆ ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
TV9 Web
| Edited By: |

Updated on: Dec 15, 2021 | 7:22 PM

Share

ಬೆಳಗಾವಿ: ಪರಿಷತ್‌ನ 14 ಕಾಂಗ್ರೆಸ್‌ ಸದಸ್ಯರ ಅಮಾನತು ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಇದು ಬಹಳ ಕೆಟ್ಟ ಪದ್ಧತಿ. ಸಂಸತ್​​ನಲ್ಲೂ ಮಾಡಿದ್ದಾರೆಂದು ಇಲ್ಲಿಯೂ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಮಾರಕ. ಪರಿಷತ್​ ಸದಸ್ಯರ ಅಮಾನತು ಕಾಂಗ್ರೆಸ್ ಖಂಡಿಸುತ್ತದೆ. ನಾಳೆ 10 ಗಂಟೆಗೆ ಸಭೆ ನಡೆಸಿ ಈ ಬಗ್ಗೆ ಚರ್ಚೆ ನಡೆಸ್ತೇವೆ. ಮುಂದೆ ಏನು ಕ್ರಮಕೈಕೊಳ್ಳಬೇಕೆಂದು ಚರ್ಚೆ ನಡೆಸುತ್ತೇವೆ ಎಂದು ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ನೆರೆ ಪರಿಹಾರ, ಸರ್ಕಾರದ ವೈಫಲ್ಯ ಖಂಡಿಸಿ ಟ್ರ್ಯಾಕ್ಟರ್ ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟ್ರ್ಯಾಕ್ಟರ್ ರಾಲಿ ನಡೆಯಲಿದೆ. ಸರ್ಕಾರದ ತಾರತಮ್ಯ, ಜನ ವಿರೋಧಿ ನೀತಿ ಖಂಡಿಸಿ ರಾಲಿ ನಡೆಯಲಿದೆ. ಕಾಂಗ್ರೆಸ್ ಕಚೇರಿಯಿಂದ ಸುವರ್ಣಸೌಧದವರೆಗೂ ರಾಲಿ ನಡೆಯಲಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಡಿ. 22ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಡಿಸೆಂಬರ್ 22 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿಪಡಿಸಲಾಗಿದೆ. ಕೇವಲ ವಿಧಾನಸಭಾ ಸದಸ್ಯರಿಗೆ ಮಾತ್ರ ಸಭೆಗೆ ಆಹ್ವಾನ ನೀಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆಯಾಯ ಕ್ಷೇತ್ರಗಳ ಸಮಸ್ಯೆ ಆಲಿಸಲು ಸಿಎಲ್‌ಪಿ ಸಭೆ ನಡೆಸಲಾಗುವುದು ಎಂದು ತಿಳಿದುಬಂದಿದೆ.

ರೂಲಿಂಗ್ ಕೊಟ್ಟ ಮೇಲೆ ನಾನು ಏನೂ ಮಾತನಾಡಲ್ಲ: ಸಿಎಂ ಬೊಮ್ಮಾಯಿ ಪರಿಷತ್​​ನಲ್ಲಿ 14 ಕಾಂಗ್ರೆಸ್ ಸದಸ್ಯರ ಅಮಾನತು ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಸದನದ ಒಳಗೆ ನಡೆದಿದ್ದನ್ನು ಹೊರಗೆ ಮಾತನಾಡಬಾರದು. ವಿಧಾನಪರಿಷತ್ ಸಭಾವತಿ ರೂಲಿಂಗ್ ಕೊಟ್ಟಿದ್ದಾರೆ. ರೂಲಿಂಗ್ ಕೊಟ್ಟ ಮೇಲೆ ನಾನು ಏನೂ ಮಾತನಾಡಲ್ಲ ಎಂದು ಬೆಳಗಾವಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕ್ಯಾಪ್ಟನ್ ವರುಣ್​ ಸಿಂಗ್​ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಘಟನೆಯಿಂದ ಭಾರತೀಯ ಸೇನೆ ದುಃಖದಲ್ಲಿದೆ. ವರುಣ್​ ಸಿಂಗ್​ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕ್ಯಾಪ್ಟನ್ ವರುಣ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ನಮ್ಮ ಅಮಾನತು ಸರಿಯಲ್ಲ, ಪರಿಷತ್​ನಲ್ಲಿ ಪ್ರತಿಭಟನೆ ಮುಂದುವರಿಸುತ್ತೇವೆ: ನಾರಾಯಣಸ್ವಾಮಿ

ಇದನ್ನೂ ಓದಿ: ವಿಧಾನಪರಿಷತ್‌ನ 14 ಕಾಂಗ್ರೆಸ್‌ ಸದಸ್ಯರ ಅಮಾನತು; ಸಭಾಪತಿ ಬಸವರಾಜ ಹೊರಟ್ಟಿ ಆದೇಶ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ