AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯವರು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ; ಆದರೂ ಮಹಾನಗರ ಪಾಲಿಕೆ ಫಲಿತಾಂಶ ಸಮಾಧಾನ ತಂದಿದೆ: ಡಿ.ಕೆ.ಶಿವಕುಮಾರ್

Karnataka Civil Body Polls Result: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಗ್ಗೆ ಮಾತನಾಡಿದ ಅವರು ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಕಾಂಗ್ರೆಸ್‌ಗೆ 15 ವರ್ಷದಿಂದ ಅಧಿಕಾರ ಇಲ್ಲ. ಆದರೆ ಈ ಬಾರಿ ಕಾಂಗ್ರೆಸ್‌ಗೆ ಒಳ್ಳೆಯ ಫಲಿತಾಂಶ ಬಂದಿದೆ. ಈ ಬಾರಿ ಸಂಖ್ಯೆ ಉತ್ತಮವಾಗಿದೆ. ಜನ ನೀಡಿರುವ ಫಲಿತಾಂಶವನ್ನ ಸ್ವೀಕರಿಸುತ್ತೇವೆ.

ಬಿಜೆಪಿಯವರು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ; ಆದರೂ ಮಹಾನಗರ ಪಾಲಿಕೆ ಫಲಿತಾಂಶ ಸಮಾಧಾನ ತಂದಿದೆ: ಡಿ.ಕೆ.ಶಿವಕುಮಾರ್
ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ)
TV9 Web
| Updated By: Skanda|

Updated on:Sep 06, 2021 | 3:13 PM

Share

ಬೆಂಗಳೂರು: ಮಹಾನಗರ ಪಾಲಿಕೆಗಳ ಫಲಿತಾಂಶಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಬೆಳಗಾವಿ ಪಾಲಿಕೆಯಲ್ಲಿ ನಮಗೆ ಒಳ್ಳೆಯ ನಂಬರ್ ಬಂದಿದೆ. ಅಲ್ಲಿ ನಾವು ಅಭ್ಯರ್ಥಿಯನ್ನೇ ಸರಿಯಾಗಿ ಹಾಕಿರಲಿಲ್ಲ. ಆದರೂ ಫಲಿತಾಂಶ ಚೆನ್ನಾಗಿದೆ. ಸ್ಥಳಿಯ ಚುನಾವಣೆಯಲ್ಲಿ ಸ್ಥಳಿಯ ವಿಚಾರಗಳು ಮಹತ್ವವಾಗುತ್ತೆ. ಇಂತಹ ಚುನಾವಣೆಯಲ್ಲಿ ಅಧಿಕಾರದಲ್ಲಿ ಇರುವವರಿಗೆ ಲಾಭ ಆಗುತ್ತೆ. ಜನ ನೀಡಿರುವ ಫಲಿತಾಂಶವನ್ನ ಸ್ವೀಕರಿಸುತ್ತೇವೆ ಎಂದು ಹೇಳಿದ್ದಾರೆ.

ಅಂತೆಯೇ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಗ್ಗೆ ಮಾತನಾಡಿದ ಅವರು ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಕಾಂಗ್ರೆಸ್‌ಗೆ 15 ವರ್ಷದಿಂದ ಅಧಿಕಾರ ಇಲ್ಲ. ಆದರೆ ಈ ಬಾರಿ ಕಾಂಗ್ರೆಸ್‌ಗೆ ಒಳ್ಳೆಯ ಫಲಿತಾಂಶ ಬಂದಿದೆ. ಈ ಬಾರಿ ಸಂಖ್ಯೆ ಉತ್ತಮವಾಗಿದೆ. ಜನ ನೀಡಿರುವ ಫಲಿತಾಂಶವನ್ನ ಸ್ವೀಕರಿಸುತ್ತೇವೆ. ಅನೇಕ ಕಡೆ ನಮ್ಮ ಬಂಡಾಯ ಅಭ್ಯರ್ಥಿಗಳೇ ಗೆದ್ದಿದ್ದಾರೆ. ಆದರೂ ನನಗೆ ಫಲಿತಾಂಶ ಸಮಾಧಾನ ತಂದಿದೆ. ಗಾಬರಿ ಆಗುವಂತದ್ದು ಏನು ಇಲ್ಲ ನಮಗೆ. ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಬೇಕಾದ ಕೆಲಸ ಮಾಡ್ತೀವಿ ಎಂದು ತಿಳಿಸಿದ್ದಾರೆ.

ನಾವು ಕೂಡ ಗಂಭಿರವಾಗಿಯೇ ಪ್ರಚಾರ ಮಾಡಿದ್ದೇವೆ. ನಮ್ಮ ಹಿರಿಯ ನಾಯಕರು ಹೋಗಿದ್ದರು ಎಂದಿದ್ದಾರೆ. ಪ್ರಚಾರ ಮಾಡಲು ಕೈ ನಾಯಕರು ಹಿಂದೇಟು ಹಾಕಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಪ್ರಚಾರಕ್ಕೆ ನಮಗೆ ಎಲ್ಲಿ ಸಮರ್ಪಕ ಅವಕಾಶ ಇತ್ತು ಅಧಿಕಾರವನ್ನ ಅವರು ಮಿಸ್ ಯೂಸ್ ಮಾಡಿಕೊಂಡಿದ್ದಾರೆ. ಹಾಗಿದ್ದರೂ ನಾವು ಎಷ್ಟು ಬೇಕೋ ಅಷ್ಟು ಮಾಡಿದ್ದೇವೆ. ಕೆಲವೊಂದು ಕಡೆ ಬಿಜೆಪಿ ಶಾಸಕರು ಇದ್ದಾರೆ. ಆದರೂ ಕೂಡ ನಮ್ಮವರು ಗೆದ್ದಿದ್ದಾರೆ ಎಂದು ಹೇಳುತ್ತಾ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆಂದು ಆರೋಪಿಸಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆ ವಾರ್ಡ್​ವಾರು ಗೆಲುವಿನ ಪಟ್ಟಿ ಹೀಗಿದೆ:

ಬಿಜೆಪಿ: ವಾರ್ಡ್​ ನಂಬರ್ – 45,26,6,15,16,22,23,24,53,54,57,58,36,17,31,32,33,55,35,29,30,42,43,44,37,40,41,49,50,21,28,39,4,46,34,51 ಬಿಜೆಪಿ ಒಟ್ಟು ಗೆಲುವು: 36

ಪಕ್ಷೇತರ: ವಾರ್ಡ್​ ನಂಬರ್ – 25,10, 1,47,14,38,48,12,27,7,9,10 ಪಕ್ಷೇತರಲ್ಲಿ ಎರಡು ಎಂಇಎಸ್ ಸೇರಿ ಒಟ್ಟು 12 ಗೆಲುವು

ಕಾಂಗ್ರೆಸ್: ವಾರ್ಡ್​ ನಂಬರ್ – 2, 5, 8,52,11,13,20,56,3 ಕಾಂಗ್ರೆಸ್ ಒಟ್ಟು ಗೆಲುವು: 09

AIMIM – 1 ಸ್ಥಾನ ಗೆಲುವು

ಕಲಬುರಗಿ ಗೆಲುವಿನ ಅಂಕಿ ಅಂಶ ಹೀಗಿದೆ:

ಕಾಂಗ್ರೆಸ್- 26 ಗೆಲುವು ಬಿಜೆಪಿ- 23 ಗೆಲುವು ಜೆಡಿಎಸ್- 3 ಗೆಲುವು ಪಕ್ಷೇತರ- 1 ಗೆಲುವು

ಇದನ್ನೂ ಓದಿ: ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಸಿಹಿ; ಕಲಬುರಗಿಯಲ್ಲಿ ಕಾಂಗ್ರೆಸ್​ಗೆ ಹೆಚ್ಚು ಖುಷಿ 

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಅಸಾದುದ್ದೀನ್ ಓವೈಸಿ ಅಭ್ಯರ್ಥಿಗೆ ಗೆಲುವು; ಉಳಿದ ಪಾಲಿಕೆಗಳ ತಾಜಾ ಫಲಿತಾಂಶ ಇಲ್ಲಿದೆ

Published On - 12:40 pm, Mon, 6 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ