AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar Temple Run; ಬೆಳಗಾವಿ ಬೈ ಎಲೆಕ್ಷನ್, ಸತೀಶ್ ಜಾರಕಿಹೊಳಿ ನಾಮ ಪತ್ರ ಸಲ್ಲಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಭರ್ಜರಿ ತಯಾರಿ

ಡಿ.ಕೆ.ಶಿವಕುಮಾರ್‌ ಬೆಳಗಾವಿ ನಗರದ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿ.ಕೆ.ಶಿವಕುಮಾರ್‌ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಾಥ್ ನೀಡಿದ್ರು. ಈ ವೇಳೆ ಮಾತನಾಡಿದ ಡಿಕೆಶಿ ಎಲ್ಲ ವಿಘ್ನಗಳನ್ನು ನಿವಾರಣೆ ಮಾಡುವ ದೇವರು ವಿನಾಯಕ. ರಾಜ್ಯ, ರಾಷ್ಟ್ರದಲ್ಲಿ ವಿಘ್ನ ನಿವಾರಣೆಯಾಗಲಿ ಅಂತಾ ಪೂಜೆ ಮಾಡಿದ್ದೇವೆ.....

DK Shivakumar Temple Run; ಬೆಳಗಾವಿ ಬೈ ಎಲೆಕ್ಷನ್, ಸತೀಶ್ ಜಾರಕಿಹೊಳಿ ನಾಮ ಪತ್ರ ಸಲ್ಲಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಭರ್ಜರಿ ತಯಾರಿ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ಆಯೇಷಾ ಬಾನು
| Edited By: |

Updated on:Mar 29, 2021 | 11:51 AM

Share

ಬೆಳಗಾವಿ: ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಇನ್ನೇನು ಕೆಲವೇ ಕ್ಷಣದಲ್ಲಿ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಳಗಾವಿಗೆ ಆಗಮಿಸಿದ್ದು ಚುನಾವಣೆಯ ಸಿದ್ದತೆಯಲ್ಲಿ ತೊಡಗಿಕೊಂಡಿದ್ದಾರೆ. ಇನ್ನು ನಿನ್ನೆ ಹಲಗಾ ಗ್ರಾಮದ ಬಾಲಾಲ ಆಚಾರ್ಯ ಸಿದ್ಧಸೇನಾ ಮುನಿಯವರನ್ನು ಭೇಟಿ ಮಾಡಿ ಜೈನ ಮುನಿಗಳಿಂದ ಆಶೀರ್ವಾದ ಪಡೆದಿದ್ದಾರೆ. ವಿರೋಧಿಗಳು ಹೆಚ್ಚಾದಂತೆ ನೀವು ಬೆಳತ್ತೀರಿ,‌ ಸಿಎಂ ಆಗ್ತಿರಿ. ನೀವು ಕನಕಪುರದ ಬಂಡೆ, ಕಲ್ಲನ್ನು ಕಟಿದು ಕಟಿದು ಮೂರ್ತಿ ಆಗಿದೆ. ವಿರೋಧಿಗಳು ಎಷ್ಟು ಹೆಚ್ಚಾಗ್ತಾರೆ ಅಷ್ಟು ಮೂರ್ತಿ ಆಗ್ತಿರಿ. ಅಂದರೇ ರಾಜ್ಯದ ಸಿಎಂ ಆಗುತ್ತೀರಿ ಎಂದು ಜೈನ ಮುನಿಗಳು ಆಶೀರ್ವಾದ ಮಾಡಿದ್ದಾರೆ.

ನನಗೆ ಎಲ್ಲಾ ಧರ್ಮದಲ್ಲಿಯೂ ನಂಬಿಕೆ ಇದೆ ನನಗೆ ಎಲ್ಲಾ ಧರ್ಮದಲ್ಲಿಯೂ ನಂಬಿಕೆ ಇದೆ. ಜೈನ ಧರ್ಮಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಬಹಳ ನಂಟಿದೆ. ಹಸ್ತದ ಗುರುತು ಜೈನ ಧರ್ಮದ ಗುರುಗಳ ನೀಡಿದ್ದರು. ಜೈನ ಧರ್ಮಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ಯುಪಿಎ ಸಮಯದಲ್ಲಿ ನೀಡಲಾಗಿತ್ತು. ನಾನು ಮುಖ್ಯಮಂತ್ರಿ ಆಗೋದು ಮುಖ್ಯ ಅಲ್ಲ. ನನಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರೋದು ಮುಖ್ಯ. ನಮ್ಮ ಪಕ್ಷಕ್ಕೆ ಅವರ ಆಶೀರ್ವಾದ ಮುಖ್ಯ ಇದ್ದು, ಪಡೆದಿದ್ದೇನೆ ಎಂದು ಡಿಕೆಶಿ ಜೈನ ಮುನಿಗಳ ಆಶೀರ್ವಾದ ಪಡೆದು ಬಂದ ನಂತರ ಈ ರೀತಿ ಹಂಚಿಕೊಂಡಿದ್ದಾರೆ.

DK Shivakumar

ಡಿಕೆಶಿ ಜೈನ ಮುನಿಗಳ ಆಶೀರ್ವಾದ ಪಡೆದರು

ಇನ್ನು ಡಿ.ಕೆ.ಶಿವಕುಮಾರ್‌ ಬೆಳಗಾವಿ ನಗರದ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿ.ಕೆ.ಶಿವಕುಮಾರ್‌ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಾಥ್ ನೀಡಿದ್ರು. ಈ ವೇಳೆ ಮಾತನಾಡಿದ ಡಿಕೆಶಿ ಎಲ್ಲ ವಿಘ್ನಗಳನ್ನು ನಿವಾರಣೆ ಮಾಡುವ ದೇವರು ವಿನಾಯಕ. ರಾಜ್ಯ, ರಾಷ್ಟ್ರದಲ್ಲಿ ವಿಘ್ನ ನಿವಾರಣೆಯಾಗಲಿ ಅಂತಾ ಪೂಜೆ ಮಾಡಿದ್ದೇವೆ. ನಮ್ಮ ಅಭ್ಯರ್ಥಿ ಗೆಲ್ಲಲಿ ಅಂತಾ ಪೂಜೆ ಮಾಡಿದ್ದೇವೆ. ವಿಜಯಕ್ಕೆ ನಾಯಕ ವಿನಾಯಕ ಅಂಥ ದೇವರಿಗೆ ಪೂಜೆ ಸಲ್ಲಿಸಿದ್ದೇನೆ. ಬೆಲೆ ಏರಿಕೆಯಾಗಿ ರಾಜ್ಯದಲ್ಲಿ ಜನರಿಗೆ ದೊಡ್ಡ ತೊಂದರೆಯಾಗಿದೆ. ಎಲ್ಲ ವರ್ಗದ ಜನರು ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿದ್ದಾರೆ. ಈ ಸಂಕಷ್ಟ ನಿವಾರಣೆಯಾಗಬೇಕಿದೆ. ಅದನ್ನೇ ದೇವರಲ್ಲಿ ಪ್ರಾರ್ಥಿಸಿಕೊಂಡಿರುವೆ. ಉಪ ಚುನಾವಣೆಯ ಎಲ್ಲ ಕ್ಷೇತ್ರಗಳಲ್ಲಿ ಗೆಲುವು ಸಿಗಲಿ ಅಂತಾ ಪ್ರಾರ್ಥಿಸಿದ್ದೇನೆ. ದೇಶದಲ್ಲಿ ಮಾಧ್ಯಮ ಮತ್ತು ಪ್ರಜಾಪ್ರಭುತ್ವ ಎರಡೂ ಉಳಿಯಬೇಕು ಎಂದು ಹೇಳಿದ್ರು.

ಇದನ್ನೂ ಓದಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬೈಎಲೆಕ್ಷನ್​: ದಿ.ಸುರೇಶ್ ಅಂಗಡಿ ಪತ್ನಿಗೆ ಬಿಜೆಪಿ ಟಿಕೆಟ್​

Published On - 10:24 am, Mon, 29 March 21

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ