AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar Temple Run; ಬೆಳಗಾವಿ ಬೈ ಎಲೆಕ್ಷನ್, ಸತೀಶ್ ಜಾರಕಿಹೊಳಿ ನಾಮ ಪತ್ರ ಸಲ್ಲಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಭರ್ಜರಿ ತಯಾರಿ

ಡಿ.ಕೆ.ಶಿವಕುಮಾರ್‌ ಬೆಳಗಾವಿ ನಗರದ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿ.ಕೆ.ಶಿವಕುಮಾರ್‌ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಾಥ್ ನೀಡಿದ್ರು. ಈ ವೇಳೆ ಮಾತನಾಡಿದ ಡಿಕೆಶಿ ಎಲ್ಲ ವಿಘ್ನಗಳನ್ನು ನಿವಾರಣೆ ಮಾಡುವ ದೇವರು ವಿನಾಯಕ. ರಾಜ್ಯ, ರಾಷ್ಟ್ರದಲ್ಲಿ ವಿಘ್ನ ನಿವಾರಣೆಯಾಗಲಿ ಅಂತಾ ಪೂಜೆ ಮಾಡಿದ್ದೇವೆ.....

DK Shivakumar Temple Run; ಬೆಳಗಾವಿ ಬೈ ಎಲೆಕ್ಷನ್, ಸತೀಶ್ ಜಾರಕಿಹೊಳಿ ನಾಮ ಪತ್ರ ಸಲ್ಲಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಭರ್ಜರಿ ತಯಾರಿ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ಆಯೇಷಾ ಬಾನು
| Edited By: |

Updated on:Mar 29, 2021 | 11:51 AM

Share

ಬೆಳಗಾವಿ: ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಇನ್ನೇನು ಕೆಲವೇ ಕ್ಷಣದಲ್ಲಿ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಳಗಾವಿಗೆ ಆಗಮಿಸಿದ್ದು ಚುನಾವಣೆಯ ಸಿದ್ದತೆಯಲ್ಲಿ ತೊಡಗಿಕೊಂಡಿದ್ದಾರೆ. ಇನ್ನು ನಿನ್ನೆ ಹಲಗಾ ಗ್ರಾಮದ ಬಾಲಾಲ ಆಚಾರ್ಯ ಸಿದ್ಧಸೇನಾ ಮುನಿಯವರನ್ನು ಭೇಟಿ ಮಾಡಿ ಜೈನ ಮುನಿಗಳಿಂದ ಆಶೀರ್ವಾದ ಪಡೆದಿದ್ದಾರೆ. ವಿರೋಧಿಗಳು ಹೆಚ್ಚಾದಂತೆ ನೀವು ಬೆಳತ್ತೀರಿ,‌ ಸಿಎಂ ಆಗ್ತಿರಿ. ನೀವು ಕನಕಪುರದ ಬಂಡೆ, ಕಲ್ಲನ್ನು ಕಟಿದು ಕಟಿದು ಮೂರ್ತಿ ಆಗಿದೆ. ವಿರೋಧಿಗಳು ಎಷ್ಟು ಹೆಚ್ಚಾಗ್ತಾರೆ ಅಷ್ಟು ಮೂರ್ತಿ ಆಗ್ತಿರಿ. ಅಂದರೇ ರಾಜ್ಯದ ಸಿಎಂ ಆಗುತ್ತೀರಿ ಎಂದು ಜೈನ ಮುನಿಗಳು ಆಶೀರ್ವಾದ ಮಾಡಿದ್ದಾರೆ.

ನನಗೆ ಎಲ್ಲಾ ಧರ್ಮದಲ್ಲಿಯೂ ನಂಬಿಕೆ ಇದೆ ನನಗೆ ಎಲ್ಲಾ ಧರ್ಮದಲ್ಲಿಯೂ ನಂಬಿಕೆ ಇದೆ. ಜೈನ ಧರ್ಮಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಬಹಳ ನಂಟಿದೆ. ಹಸ್ತದ ಗುರುತು ಜೈನ ಧರ್ಮದ ಗುರುಗಳ ನೀಡಿದ್ದರು. ಜೈನ ಧರ್ಮಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ಯುಪಿಎ ಸಮಯದಲ್ಲಿ ನೀಡಲಾಗಿತ್ತು. ನಾನು ಮುಖ್ಯಮಂತ್ರಿ ಆಗೋದು ಮುಖ್ಯ ಅಲ್ಲ. ನನಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರೋದು ಮುಖ್ಯ. ನಮ್ಮ ಪಕ್ಷಕ್ಕೆ ಅವರ ಆಶೀರ್ವಾದ ಮುಖ್ಯ ಇದ್ದು, ಪಡೆದಿದ್ದೇನೆ ಎಂದು ಡಿಕೆಶಿ ಜೈನ ಮುನಿಗಳ ಆಶೀರ್ವಾದ ಪಡೆದು ಬಂದ ನಂತರ ಈ ರೀತಿ ಹಂಚಿಕೊಂಡಿದ್ದಾರೆ.

DK Shivakumar

ಡಿಕೆಶಿ ಜೈನ ಮುನಿಗಳ ಆಶೀರ್ವಾದ ಪಡೆದರು

ಇನ್ನು ಡಿ.ಕೆ.ಶಿವಕುಮಾರ್‌ ಬೆಳಗಾವಿ ನಗರದ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿ.ಕೆ.ಶಿವಕುಮಾರ್‌ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಾಥ್ ನೀಡಿದ್ರು. ಈ ವೇಳೆ ಮಾತನಾಡಿದ ಡಿಕೆಶಿ ಎಲ್ಲ ವಿಘ್ನಗಳನ್ನು ನಿವಾರಣೆ ಮಾಡುವ ದೇವರು ವಿನಾಯಕ. ರಾಜ್ಯ, ರಾಷ್ಟ್ರದಲ್ಲಿ ವಿಘ್ನ ನಿವಾರಣೆಯಾಗಲಿ ಅಂತಾ ಪೂಜೆ ಮಾಡಿದ್ದೇವೆ. ನಮ್ಮ ಅಭ್ಯರ್ಥಿ ಗೆಲ್ಲಲಿ ಅಂತಾ ಪೂಜೆ ಮಾಡಿದ್ದೇವೆ. ವಿಜಯಕ್ಕೆ ನಾಯಕ ವಿನಾಯಕ ಅಂಥ ದೇವರಿಗೆ ಪೂಜೆ ಸಲ್ಲಿಸಿದ್ದೇನೆ. ಬೆಲೆ ಏರಿಕೆಯಾಗಿ ರಾಜ್ಯದಲ್ಲಿ ಜನರಿಗೆ ದೊಡ್ಡ ತೊಂದರೆಯಾಗಿದೆ. ಎಲ್ಲ ವರ್ಗದ ಜನರು ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿದ್ದಾರೆ. ಈ ಸಂಕಷ್ಟ ನಿವಾರಣೆಯಾಗಬೇಕಿದೆ. ಅದನ್ನೇ ದೇವರಲ್ಲಿ ಪ್ರಾರ್ಥಿಸಿಕೊಂಡಿರುವೆ. ಉಪ ಚುನಾವಣೆಯ ಎಲ್ಲ ಕ್ಷೇತ್ರಗಳಲ್ಲಿ ಗೆಲುವು ಸಿಗಲಿ ಅಂತಾ ಪ್ರಾರ್ಥಿಸಿದ್ದೇನೆ. ದೇಶದಲ್ಲಿ ಮಾಧ್ಯಮ ಮತ್ತು ಪ್ರಜಾಪ್ರಭುತ್ವ ಎರಡೂ ಉಳಿಯಬೇಕು ಎಂದು ಹೇಳಿದ್ರು.

ಇದನ್ನೂ ಓದಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬೈಎಲೆಕ್ಷನ್​: ದಿ.ಸುರೇಶ್ ಅಂಗಡಿ ಪತ್ನಿಗೆ ಬಿಜೆಪಿ ಟಿಕೆಟ್​

Published On - 10:24 am, Mon, 29 March 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ