AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಲಿ ನೈಟಿ ಹಾಕಿಕೊಳ್ತಿದ್ಲು ಎಂದು ಹೆಂಡತಿಯನ್ನೇ ಸುಟ್ಟ ಪತಿ! ಪತ್ನಿಯ ಸ್ಥಿತಿ ಗಂಭೀರ

ಬೆಳಗಾವಿ ಜಿಲ್ಲೆಯ ನಂದಗಡದಲ್ಲಿ ಭೀಕರ ಘಟನೆ ನಡೆದಿದೆ. ಹೆಂಡತಿ ಮನೆಯಲ್ಲಿ ಸೀರೆ ಉಡುವ ಬದಲು ನೈಟಿ ಧರಿಸುತ್ತಿದ್ದಳು ಎಂಬ ಕಾರಣಕ್ಕೆ ಪತ್ನಿಗೆ ಪತಿ ಬೆಂಕಿ ಹಚ್ಚಿದ್ದು, ನಗರವನ್ನೇ ಬೆಚ್ಚಿ ಬೀಳಿಸಿದೆ. ಘಟನೆಯಲ್ಲಿ ಮಹಿಳೆಯ ದೇಹ ಶೇ80ರಷ್ಟು ಸುಟ್ಟು ಹೋಗಿದ್ದು, ಗೋವಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮನೆಲಿ ನೈಟಿ ಹಾಕಿಕೊಳ್ತಿದ್ಲು ಎಂದು ಹೆಂಡತಿಯನ್ನೇ ಸುಟ್ಟ ಪತಿ! ಪತ್ನಿಯ ಸ್ಥಿತಿ ಗಂಭೀರ
ಮನೆಲಿ ನೈಟಿ ಹಾಕಿಕೊಳ್ತಿದ್ಲು ಎಂದು ಹೆಂಡತಿಯನ್ನೇ ಸುಟ್ಟ ಪತಿ!
Sahadev Mane
| Edited By: |

Updated on: Apr 22, 2026 | 11:26 AM

Share

ಬೆಳಗಾವಿ , ಏಪ್ರಿಲ್ 22: ಜಿಲ್ಲೆಯಲ್ಲಿ ಪತ್ನಿಯ (Wife) ಉಡುಪಿನ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ದಾರುಣ ಅಂತ್ಯ ಕಂಡಿರುವ ಘಟನೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ನೈಟಿ ಧರಿಸಿದ್ದ ಕಾರಣಕ್ಕೆ ಪತ್ನಿಗೇ ಕಿರಾತಕ ಗಂಡ ಬೆಂಕಿ ಹಚ್ಚಿದ್ದು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

ಸೀರೆ ಉಡುತ್ತಿರಲಿಲ್ಲ ಅಂತ ಜಗಳ

ಪತಿ ಪತ್ನಿಯರ ನಡುವೆ ಸಾವಿರ ಅಸಮಾಧಾನವಿರುತ್ತದೆ. ಕೆಲವರು ಬುದ್ಧಿ ಜೀವಿಗಳಂತೆ ಪರಸ್ಪರ ಮಾತನಾಡಿಕೊಂಡು ಸಮಸ್ಯೆ ಬಗೆಹರಿಸಿಕೊಂಡರೆ, ಇನ್ನೂ ಕೆಲವರು ಕೋಪದ ಕೈಗೆ ಬುದ್ಧಿಕೊಟ್ಟು ಆತುರದ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇತ್ತೀಚಿಗೆ ಅನೈತಿಕ ಸಂಬಂಧದ ವಿಚಾರಕ್ಕೆ ಸಂಸಾರದಲ್ಲಿ ಬಿರುಕು ಬಂದು ಕೊನೆಗೆ ಕೊಲೆಯಲ್ಲಿ ಅಂತ್ಯವಾಗುವ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ. ಆದರೆ ಇಲ್ಲೊಬ್ಬ ಮಹಾಶಯ ತನ್ನ ಹೆಂಡತಿ, ಮನೆಯಲ್ಲಿ ಸೀರೆ ಉಡದೆ ನೈಟಿ ಹಾಕುತ್ತಿದ್ದಳು ಎಂಬ ವಿಚಾರಕ್ಕೆ ರೊಚ್ಚಿಗೆದ್ದು ಪತ್ನಿಯನ್ನೇ ಸುಡಲು ಮುಂದಾಗೊರುವ ಘಟನೆ ನಡೆದಿದೆ.

ಮಂಜುಳಾ ಪಾಟೀಲ್ ಮತ್ತು ಕೃಷ್ಣಾಜಿ ಪಾಟೀಲ್ ದಂಪತಿ ಎಂಟು ವರ್ಷಗಳ ಹಿಂದೆ ವಿವಾಹವಾಗಿದ್ದರು. ಮನೆಯಲ್ಲಿ ಪತ್ನಿ ಸೀರೆ ಬದಲು ನೈಟಿ ಅಥವಾ ಗೌನ್ ಧರಿಸುತ್ತಿದ್ದ ವಿಚಾರಕ್ಕೆ ಆಗಾಗ ಜಗಳ ನಡೆಯುತ್ತಿತ್ತು. ಇದೇ ವಿಚಾರವಾಗಿ ಮತ್ತೊಮ್ಮೆ ವಾಗ್ವಾದ ಉಂಟಾಗಿ, ಅದು ಅತಿರೇಕಕ್ಕೆ ತಲುಪಿದ ಸಂದರ್ಭದಲ್ಲಿ ಕೃಷ್ಣಾಜಿ ಪತ್ನಿ ಮಂಜುಳಾಗೆ ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ ಕಸ ಹಾಕಲು ಹೋದ ವಿವಾಹಿತ ಮಹಿಳೆ ನಿಗೂಢ ನಾಪತ್ತೆ: ಪ್ರಿಯಕರನ ಜೊತೆ ಪರಾರಿಯಾದ ಆರೋಪ, ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಪತ್ನಿಯ ದೇಹದ ಶೇ80ರಷ್ಟು ಭಾಗ ಸುಟ್ಟು ಕರಕಲು!

ಘಟನೆಯಿಂದ ಮಂಜುಳಾ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯ ದೇಹದ ಶೇ80ರಷ್ಟು ಭಾಗ ಸುಟ್ಟಿದೆ. ಗಂಭೀರ ಗಾಯಗಳಿಂದ ಬಳಲಿದ ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಗೋವಾಕ್ಕೆ ಸ್ಥಳಾಂತರಿಸಲಾಗಿದೆ.

ಮನೆಯಲ್ಲಿ ಗಲಾಟೆಯ ಶಬ್ದ ಕೇಳಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ನಂದಗಡ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ